AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ತಮ್ಮನನ್ನ ಕೊಂದು ಸ್ಮಶಾನಕ್ಕೆ ಹೋಗಿ ಭಸ್ಮ ಧರಿಸಿ ನಿಂತ ಅಣ್ಣ

ಆತ ಓರ್ವ ಚಿತ್ರಕಲೆ ಓದಿದ ಯುವಕ.ಆದರೆ ಸೂಕ್ತವಾದ ಕೆಲಸ ಸಿಕ್ಕಿರಲಿಲ್ಲ.ಇದರಿಂದ‌ ಕೆಲ ವರ್ಷಗಳಿಂದ ಮಾನಸಿಕ‌ ಸ್ಥಿಮಿತ ಕಳೆದುಕೊಂಡಿದ್ದ. ಮನೆಯಲ್ಲೂ ಕೆಲಸ‌ ಮಾಡುತ್ತಿರಲಿಲ್ಲ. ಮನೆಯಲ್ಲಿ ತಾಯಿ ಹಾಗೂ ತಮ್ಮ ಬೈದು ಬುದ್ದಿ ಹೇಳುತ್ತಿದ್ದರು. ಇದರಿಂದ ರಾತ್ರಿ ಮಲಗಿದ ತಮ್ಮನನ್ನು ಕೊಡಲಿಯಿಂದ ಕೊಚ್ಚಿ ಸೈಕೋ ಅಣ್ಣ ಕೊಲೆ‌ ಮಾಡಿದ್ದಾನೆ.

ಬಾಗಲಕೋಟೆ: ತಮ್ಮನನ್ನ ಕೊಂದು ಸ್ಮಶಾನಕ್ಕೆ ಹೋಗಿ ಭಸ್ಮ ಧರಿಸಿ ನಿಂತ ಅಣ್ಣ
ಮೃತ ಸುನೀಲ್​, ಆರೋಪಿ ಅಣ್ಣ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Apr 17, 2024 | 10:23 PM

Share

ಬಾಗಲಕೋಟೆ, ಏ.17: ಜಿಲ್ಲೆಯ ಮುಧೋಳ್​(Mudhol) ನಗರದ ಗಾಂಧಿ ಚೌಕ್​ನಲ್ಲಿ ಸೈಕೋ ಅಣ್ಣನೊಬ್ಬ ಮಲಗಿದ್ದ ತಮ್ಮನ ಮುಖಕ್ಕೆ ಕೊಡಲಿಯಿಂದ ಹೊಡೆದು ಕೊಲೆ‌ ಮಾಡಿದ್ದಾನೆ. ಸುನಿಲ್ ರಜಪೂತ(24) ಮೃತ ರ್ದುದೈವಿ. ಆರೋಪಿ ಅಣ್ಣ ಸುಖೇನ್ ಸಿಂಗ್ ರಜಪೂತ್​ ತಮ್ಮ ಸುನಿಲ್ ರಾತ್ರಿ ನಿದ್ದೆಯಲ್ಲಿದ್ದಾಗ ಕೊಲೆ ಮಾಡಿದ್ದಾನೆ. ಬಳಿಕ ಅಲ್ಲಿಂದ ಸುಖೇನ್ ಸಿಂಗ್, ಸ್ಮಶಾನಕ್ಕೆ ಹೋಗಿ ಪಕ್ಕದಲ್ಲಿನ ಘಟಪ್ರಭಾ ನದಿಯಲ್ಲಿ ಸ್ನಾನ ಮಾಡಿದ್ದಾನೆ. ನಂತರ ಹಣೆಗೆ ಭಸ್ಮ ಧರಿಸಿಕೊಂಡು ಹುಚ್ಚುತನ ಮೆರೆದಿದ್ದಾನೆ‌. ಅಷ್ಟೇ ಅಲ್ಲ, ಅಲ್ಲಿನ ಕೆಲಸಗಾರರಿಗೆ ನನ್ನ ತಮ್ಮನ ಶವ ಬರುತ್ತದೆ ಎಂದು ಹೇಳಿದ್ದಾನೆ.

ಸುಖೇನ್ ಸಿಂಗ್ ರಜಪೂತ್​ ಹಾಗೂ ಸುನಿಲ್ ಇಬ್ಬರು ಅಣ್ಣ-ತಮ್ಮಂದಿರು, ಒಬ್ಬ ಸಹೋದರಿ ಇದ್ದು, ಮದುವೆಯಾಗಿದೆ. ತಂದೆ ಪಿ ಡಬ್ಲ್ಯುಡಿಯಲ್ಲಿ ಡಿ ದರ್ಜೆ ನೌಕರನಾಗಿ ನಿವೃತ್ತಿಯಾಗಿದ್ದಾರೆ. ಸುನಿಲ್ ಬಿ.ಕಾಮ್ ಪದವೀಧರ, ಸುಖೇನ್ ಸಿಂಗ್ ಚಿತ್ರಕಲೆ ಓದಿದ್ದಾನೆ. ಸುಖೇನ್ ಕಳೆದ ಐದಾರು ವರ್ಷದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ಮನೆಯಲ್ಲಿ ಕೆಲಸ ಮಾಡದೆ ಹುಚ್ಚುನಂತೆ ವರ್ತನೆ ತೋರುತ್ತಿದ್ದ‌. ತಂದೆ-ತಾಯಿ ಆತನಿಗೆ ಬೈದು ಬುದ್ದಿ ಹೇಳುತ್ತಿದ್ದರು. ಹೊಸ ಮನೆ ಕಟ್ಟಿದ ಪೋಷಕರು, ಒಂದು ಕೆಲಸ ಅಂತ ಮಾಡಿದರೆ ಇಬ್ಬರಿಗೂ ಮದುವೆ ಮಾಡುವವರಿದ್ದರು.

ಇದನ್ನೂ ಓದಿ:ಕೋಲಾರ: ಮೀನು ಹಿಡಿಯುವ ವಿಚಾರಕ್ಕೆ ಸೋದರ ಸಂಬಂಧಿಗಳ ನಡುವೆ ಗಲಾಟೆ; ಕೊಲೆಯಲ್ಲಿ ಅಂತ್ಯ

ಇನ್ನು ತಂದೆ-ತಾಯಿ, ಅಜ್ಜಿ ಎಲ್ಲರೂ ತೊಟ್ಟಿಲು ಕಾರ್ಯಕ್ಕೆ ಎಂದು ಎಪ್ರಿಲ್ 15 ರಂದು ರಾಯಚೂರಿಗೆ ಹೋಗಿದ್ದರು. ಅದೇ ದಿನ ರಾತ್ರಿ 11.20 ರ ಸುಮಾರಿಗೆ ಸುಖೇನ್ ಈ ಕೃತ್ಯವೆಸಗಿದ್ದಾನೆ. ಸ್ಥಳಕ್ಕೆ ಮುಧೋಳ್​ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಖೇನ್ ಸಿಂಗ್​ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸೈಕೋ ಅಣ್ಣ ಇಷ್ಟು ದಿನ ಮಾಡಿದ ಎಲ್ಲ ಹುಚ್ಚುತನವನ್ನು ಕುಟುಂಬಸ್ಥರು ಸಹಿಸಿಕೊಂಡೆ ಹೊರಟಿದ್ದಾರೆ. ಆದರೆ, ಆತನ ಹುಚ್ಚುತನ ಒಡ ಹುಟ್ಟಿದ ತಮ್ಮನನ್ನೇ ಬಲಿ ಪಡೆದಿದ್ದು ವಿಪರ್ಯಾಸ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ