Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನೈತಿಕ ಸಂಬಂಧ: ಮನಬಂದಂತೆ ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

ಆ ತಂದೆ ತಾಯಿಗೆ ಆತ ಒಬ್ಬನೇ ಮಗ. ತಂದೆ ರೈತನಾಗಿದ್ದರಿಂದ ಅಪ್ಪನ ಜೊತೆ ಜಮೀನು ಕೆಲಸ ಮಾಡುತ್ತಿದ್ದ. ನಿನ್ನೆಯೂ ಅಪ್ಪನನ್ನ ಬೈಕ್ ಮೇಲೆ ಕುರಿಸಿಕೊಂಡು ಜಮೀನಿಗೆ ಹೋಗಿದ್ದ. ತಂದೆಯನ್ನ ಜಮೀನಿನಲ್ಲಿ ಬಿಟ್ಟು ವಾಪಸ್ ಬರುತ್ತಿದ್ದಂತೆ ಡೆಡ್ಲಿ ಅಟ್ಯಾಕ್ ನಡೆದಿತ್ತು. ಕ್ಷಣಾರ್ಧದಲ್ಲಿ ಆ ಯುವಕ ರಕ್ತದ ಮಡುವಿನಲ್ಲಿ ಬಿದ್ದು ಉಸಿರು ಚೆಲ್ಲಿದ್ದ. ಹಾಗಾದರೆ ಅಲ್ಲಾಗಿದ್ದೇನು?, ಈ ಸ್ಟೋರಿ ಓದಿ.

ಅನೈತಿಕ ಸಂಬಂಧ: ಮನಬಂದಂತೆ ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ
ಮೃತ ಯುವಕ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: May 12, 2024 | 4:31 PM

ಕಲಬುರಗಿ, ಮೇ.12: ಜಿಲ್ಲೆಯ ಅಫಜಲಪುರ(Afzalpur) ತಾಲೂಕಿನ ಭೀಮಾ ತೀರದ ಗ್ರಾಮದ ಮಣ್ಣೂರಿನಲ್ಲಿ ರಂಜಾನ್ ಮೆಹಬೂಬ್ ತಾರಾ ವ್ಯಕ್ತಿಯ ಭೀಕರ ಹತ್ಯೆಯಾಗಿತ್ತು. ಕೇವಲ 24 ವರ್ಷದ ಯುವಕ ಮಾಡಬಾರದ ಕೆಲಸಕ್ಕೆ ಮಸಣ ಸೇರಿದ್ದಾನೆ. ಅಷ್ಟಕ್ಕೂ ಈ ರಂಜಾನ್ ಹತ್ಯೆಯಾಗಿದ್ದು,ಅನೈತಿಕ ಸಂಬಂಧಕ್ಕಂತೆ. ಅದೇ ಗ್ರಾಮದ ವಿವಾಹಿತ ಮಹಿಳೆಯೊಬ್ಬಳ ಜೊತೆ ಈ ರಂಜಾನ್ ಮೆಹಬೂಬ್ ಅನೈತಿಕ ಸಂಬಂಧ ಹೊಂದ್ದಿದ್ದ. ಆಕೆ ಗಂಡ ದುಬೈನಲ್ಲಿ ಇರುವುದರಿಂದ ಈ ರಂಜಾನ್ ಜೊತೆ ಕದ್ದು ಮುಚ್ಚಿ ಇಬ್ಬರು ಸೇರುತ್ತಿದ್ದರಂತೆ. ಇದನ್ನ ನೋಡಿದ್ದ ಮಹಿಳೆ ಕುಟುಂಬಸ್ಥರು ಹತ್ತಾರು ಭಾರಿ ಕರೆದು ರಾಜಿ ಪಂಚಾಯಿತಿ ಮಾಡಿದ್ದಾರೆ. ಈತ ಮಾತ್ರ ಕ್ಯಾರೆ ಎನ್ನದೇ ತನ್ನ ಚಟ ಮುಂದುವರೆಸಿದ್ದ.

ಮನಬಂದಂತೆ ಚಾಕುವಿನಿಂದ ಇರಿದು ಕೊಲೆ

ಹೀಗಾಗೇ ಇದಕ್ಕೆ ಒಂದು ಗತಿ ಕಾಣಿಸಬೇಕೆಂದೆ ಆಕೆಯ ಕುಟುಂಬಸ್ಥರು ಪಕ್ಕಾ ಫ್ಲ್ಯಾನ್ ಮಾಡಿದ್ದರು. ನಿನ್ನೆ(ಮೇ.11) ಸಂಜೆ ಆತ ಬೈಕ್ ಮೇಲೆ ಹೊಲಕ್ಕೆ ಹೋಗಿದ್ದನ್ನ ನೋಡಿದ್ದ ಹಂತಕರು, ಆತ ಒಬ್ಬನೇ ವಾಪಸ್ ಬರುತ್ತಿದ್ದಂತೆ ಅಟ್ಯಾಕ್ ಮಾಡಿ, ಗ್ರಾಮದ ಹೊರವಲಯದಲ್ಲಿ ಮನಬಂದಂತೆ ಚಾಕುವಿನಿಂದ ಇರಿದು ಕೊಂದಿದ್ದಾರೆ. ಇನ್ನು ಮಗನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ, ತಂದೆ ಓಡೋಡಿ ಬಂದಿದ್ದಾರೆ. ಅಲ್ಲದೇ ಇತ್ತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಯಾವಾಗ ಭೀಮಾ ತೀರದಲ್ಲಿ ನೆತ್ತರು ಹರಿದಿದೆ ಎನ್ನುವ ವಿಷಯ ಖಾಕಿ ಕಿವಿ ಬಡಿಯಿತೋ, ತಕ್ಷಣವೇ ಅಲರ್ಟ್​ ಆದ ಎಸ್ಪಿ ಅಕ್ಷಯ್, ಹಾಗೂ ತಂಡ ಸ್ಥಳಕ್ಕೆ ಧಾವಿಸಿ ಪರೀಶಿಲನೆ ನಡೆಸುತ್ತಿದ್ದರೆ, ಅತ್ತ ಮತ್ತೊಂದು ತಂಡ ಹಂತಕರನ್ನ ವಶಕ್ಕೆ ಪಡೆದಿತ್ತು.

ಇದನ್ನೂ ಓದಿ:ತೃತೀಯ ಲಿಂಗಿ ಹತ್ಯೆ ಪ್ರಕರಣ; ಓರ್ವ ಮಹಿಳೆ ಬಂಧನ, ಹತ್ಯೆಗೆ ಕಾರಣವೇನು ಗೊತ್ತಾ?

ಸಧ್ಯ ಅಫಜಲಪುರ ಪೊಲೀಸರು ಸಂತೋಷ್, ರಾಕೇಶ್, ಆಕಾಶ್, ಪ್ರದೀಪ್ ಎನ್ನುವ ನಾಲ್ವರನ್ನ ವಶಕ್ಕೆ  ಪಡೆದಿದ್ದಾರೆ. ಪೊಲೀಸರಿಗೆ ಸಿಕ್ಕ ಮಾಹಿತಿ ಪ್ರಕಾರ ಆರೋಪಿ ಸಂತೋಷನ ಅತ್ತಿಗೆಯ ಜೊತೆ ಈ ರಂಜಾನ್ ಅನೈತಿಕ ಸಂಬಂಧ ಹೊಂದಿದ್ದು, ಅದಕ್ಕಾಗಿಯೇ ಕೊಲೆ ಮಾಡಲಾಗಿದೆಯಂತೆ. ಸಧ್ಯ‌ ಪ್ರಕರಣ ದಾಖಲಿಸಿಕೊಂಡಿರುವ ಅಫಜಲಪುರ ಪೊಲೀಸರು, ತನಿಖೆ ಮುಂದುವರೆಸಿದ್ದಾರೆ. ಮೆಲ್ನೋಟಕ್ಕೆ ಅನೈತಿಕ ಸಂಬಂಧವೇ ಕೊಲೆಗೆ ಕಾರಣ ಎನ್ನೋದು ಗೊತ್ತಾಗಿದೆ. ಅದೇ ಏನೆ ಇರಲಿ ಮನೆಗೆ ಒಬ್ಬನೇ ಮಗನಾಗಿದ್ದ ರಂಜಾನ್, ಬೀದಿ ಹೆಣವಾಗಿದ್ದು ನಿಜಕ್ಕೂ ದುರಂತವೇ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ