AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡ-ಹೆಂಡತಿ ಜಗಳ: ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಪತ್ನಿಯ ಭೀಕರ ಕೊಲೆ

ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ(Koramangala Police Station) ವ್ಯಾಪ್ತಿಯಲ್ಲಿ ನಡುರಸ್ತೆಯಲ್ಲಿಯೇ ಚಾಕುವಿನಿಂದ ಇರಿದು ಪತ್ನಿಯನ್ನ ಕೊಲೆ ಮಾಡಿದ ಭೀಕರ ಘಟನೆ ಮಧ್ಯಾಹ್ನ 3.30ರ ಸುಮಾರಿಗೆ ನಡೆದಿದೆ. ಸ್ಥಳಕ್ಕೆ ಕೋರಮಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗಂಡ-ಹೆಂಡತಿ ಜಗಳ: ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಪತ್ನಿಯ ಭೀಕರ ಕೊಲೆ
ಪ್ರಾತಿನಿಧಿಕ ಚಿತ್ರ
Jagadisha B
| Edited By: |

Updated on:May 02, 2024 | 7:28 PM

Share

ಬೆಂಗಳೂರು, ಮೇ.02: ನಡುರಸ್ತೆಯಲ್ಲಿಯೇ ಚಾಕುವಿನಿಂದ ಇರಿದು ಪತ್ನಿಯನ್ನ ಕೊಲೆ ಮಾಡಿದ ಭೀಕರ ಘಟನೆ ಮಧ್ಯಾಹ್ನ 3.30ರ ಸುಮಾರಿಗೆ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ(Koramangala Police Station) ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಪತಿ ಸೆಲ್ವಿನ್ ಫ್ರಾನ್ಸಿಸ್ ಹಾಗೂ ಮೃತ ಪತ್ನಿ ಇಂದು ಇಬ್ಬರ ನಡುವಿನ ಭಿನ್ನಾಭಿಪ್ರಾಯದಿಂದ 6 ತಿಂಗಳಿಂದ ದೂರವಾಗಿದ್ದರು. ಇಂದು ಪತ್ನಿ ಜೊತೆ ಜಗಳ ತೆಗೆದು ಡಿಸಿಪಿ ಕಚೇರಿಯ ಕೂಗಳತೆ ದೂರದ ರಸ್ತೆಯಲ್ಲಿ ಇರಿದುಕೊಂದಿದ್ದಾನೆ. ಸ್ಥಳಕ್ಕೆ ಕೋರಮಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದೂರು ನೀಡಿ ಪೊಲೀಸ್ ಠಾಣೆಯಿಂದ ಹೊರಬರುತ್ತಿದ್ದಂತೆಯೇ ಪತ್ನಿಯನ್ನು ಕೊಚ್ಚಿ ಕೊಂದ ಪತಿ

ಕೆಲ ತಿಂಗಳಿಂದ ಗಂಡನಿಂದ ದೂರವಿದ್ದರೂ, ತಾನು ಕೆಲಸ ಮಾಡುವ ಸ್ಥಳದಲ್ಲಿ ಸಮಸ್ಯೆ ಮಾಡುತ್ತಿದ್ದಾನೆಂದು ಪತಿ ವಿರುದ್ಧ ಕೋರಮಂಗಲ ಠಾಣೆಗೆ ಇಂದು ಮಧ್ಯಾಹ್ನ ಬಂದು ಪತ್ನಿ ದೂರು ನೀಡಿದ್ದಾರೆ. ದೂರು ಹಿನ್ನೆಲೆ ಪತಿ ಸೆಲ್ವಿನ್ ಫ್ರಾನ್ಸಿಸ್​ಗೆ ಕೊರಮಂಗಲ ಠಾಣೆಯಿಂದ ಕರೆ ಬಂದಿದೆ. ಈ ವೇಳೆ ನಾನು ದೂರದಲ್ಲಿದ್ದೇನೆ ಎಂದು ಪೊಲೀಸರಿಗೆ ಹೇಳಿ, ಠಾಣೆ ಬಳಿಯೇ ಸೆಲ್ವಿನ್ ಬಂದಿದ್ದಾನೆ. ಪತ್ನಿ ಠಾಣೆಯಿಂದ ಹೊರ ಬರುವುದನ್ನೇ ಕಾದು ಕುಳಿತಿದ್ದ ಆತ, ಪತ್ನಿ ಹೊರ ಬರುತ್ತಿದ್ದಂತೆ ಮಾತನಾಡಿ ಕೊಂಚ ದೂರ ಕರೆದೊಯ್ದಿದ್ದಾನೆ. ನಂತರ ಚಾಕುವಿನಿಂದ ದಾಳಿ ಮಾಡಿ ಪತ್ನಿ ಇಂದು ಹತ್ಯೆಗೈದು ಎಸ್ಕೇಪ್​ ಆಗಿದ್ದಾನೆ. ಇದೀಗ ಪರಾರಿಯಾಗಿರುವ ಸೆಲ್ವಿನ್ ಫ್ರಾನ್ಸಿಸ್​ಗಾಗಿ ಪೊಲೀಸರು ಶೋಧಕಾರ್ಯ ಆರಂಭಿಸಿದ್ದಾರೆ.

ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ನಾಲ್ಕು ಗುಡಿಸಲು ಸುಟ್ಟು ಭಸ್ಮ

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಮಲ್ಲಾ.ಬಿ‌ ಗ್ರಾಮದಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟಗೊಂಡು 4 ಗುಡಿಸಲು ಸುಟ್ಟು ಭಸ್ಮವಾಗಿದೆ. ಮಲ್ಲಾರೆಡ್ಡಿ, ಮಲ್ಕಪ್ಪ ಎಂಬುವರಿಗೆ ಸೇರಿದ ಗುಡಿಸಲುಗಳು ಇದಾಗಿದ್ದು, ಒಂದು ಗಂಟೆಗಳ ಕಾಲ‌ ಹರಸಾಹಸಪಟ್ಟು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಹುಬ್ಬಳ್ಳಿ: ವಾಚ್​ಗಾಗಿ ಸ್ನೇಹಿತರ ನಡುವೆ ಜಗಳ; ಗಾಂಜಾ ಅಮಲಿನಲ್ಲಿ ಗೆಳೆಯನನ್ನೇ ಚಾಕುವಿನಿಂದ ಇರಿದು ಕೊಂದ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:33 pm, Thu, 2 May 24

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ