Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡ-ಹೆಂಡತಿ ಜಗಳ: ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಪತ್ನಿಯ ಭೀಕರ ಕೊಲೆ

ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ(Koramangala Police Station) ವ್ಯಾಪ್ತಿಯಲ್ಲಿ ನಡುರಸ್ತೆಯಲ್ಲಿಯೇ ಚಾಕುವಿನಿಂದ ಇರಿದು ಪತ್ನಿಯನ್ನ ಕೊಲೆ ಮಾಡಿದ ಭೀಕರ ಘಟನೆ ಮಧ್ಯಾಹ್ನ 3.30ರ ಸುಮಾರಿಗೆ ನಡೆದಿದೆ. ಸ್ಥಳಕ್ಕೆ ಕೋರಮಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗಂಡ-ಹೆಂಡತಿ ಜಗಳ: ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಪತ್ನಿಯ ಭೀಕರ ಕೊಲೆ
ಪ್ರಾತಿನಿಧಿಕ ಚಿತ್ರ
Follow us
Jagadisha B
| Updated By: ಕಿರಣ್ ಹನುಮಂತ್​ ಮಾದಾರ್

Updated on:May 02, 2024 | 7:28 PM

ಬೆಂಗಳೂರು, ಮೇ.02: ನಡುರಸ್ತೆಯಲ್ಲಿಯೇ ಚಾಕುವಿನಿಂದ ಇರಿದು ಪತ್ನಿಯನ್ನ ಕೊಲೆ ಮಾಡಿದ ಭೀಕರ ಘಟನೆ ಮಧ್ಯಾಹ್ನ 3.30ರ ಸುಮಾರಿಗೆ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ(Koramangala Police Station) ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಪತಿ ಸೆಲ್ವಿನ್ ಫ್ರಾನ್ಸಿಸ್ ಹಾಗೂ ಮೃತ ಪತ್ನಿ ಇಂದು ಇಬ್ಬರ ನಡುವಿನ ಭಿನ್ನಾಭಿಪ್ರಾಯದಿಂದ 6 ತಿಂಗಳಿಂದ ದೂರವಾಗಿದ್ದರು. ಇಂದು ಪತ್ನಿ ಜೊತೆ ಜಗಳ ತೆಗೆದು ಡಿಸಿಪಿ ಕಚೇರಿಯ ಕೂಗಳತೆ ದೂರದ ರಸ್ತೆಯಲ್ಲಿ ಇರಿದುಕೊಂದಿದ್ದಾನೆ. ಸ್ಥಳಕ್ಕೆ ಕೋರಮಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದೂರು ನೀಡಿ ಪೊಲೀಸ್ ಠಾಣೆಯಿಂದ ಹೊರಬರುತ್ತಿದ್ದಂತೆಯೇ ಪತ್ನಿಯನ್ನು ಕೊಚ್ಚಿ ಕೊಂದ ಪತಿ

ಕೆಲ ತಿಂಗಳಿಂದ ಗಂಡನಿಂದ ದೂರವಿದ್ದರೂ, ತಾನು ಕೆಲಸ ಮಾಡುವ ಸ್ಥಳದಲ್ಲಿ ಸಮಸ್ಯೆ ಮಾಡುತ್ತಿದ್ದಾನೆಂದು ಪತಿ ವಿರುದ್ಧ ಕೋರಮಂಗಲ ಠಾಣೆಗೆ ಇಂದು ಮಧ್ಯಾಹ್ನ ಬಂದು ಪತ್ನಿ ದೂರು ನೀಡಿದ್ದಾರೆ. ದೂರು ಹಿನ್ನೆಲೆ ಪತಿ ಸೆಲ್ವಿನ್ ಫ್ರಾನ್ಸಿಸ್​ಗೆ ಕೊರಮಂಗಲ ಠಾಣೆಯಿಂದ ಕರೆ ಬಂದಿದೆ. ಈ ವೇಳೆ ನಾನು ದೂರದಲ್ಲಿದ್ದೇನೆ ಎಂದು ಪೊಲೀಸರಿಗೆ ಹೇಳಿ, ಠಾಣೆ ಬಳಿಯೇ ಸೆಲ್ವಿನ್ ಬಂದಿದ್ದಾನೆ. ಪತ್ನಿ ಠಾಣೆಯಿಂದ ಹೊರ ಬರುವುದನ್ನೇ ಕಾದು ಕುಳಿತಿದ್ದ ಆತ, ಪತ್ನಿ ಹೊರ ಬರುತ್ತಿದ್ದಂತೆ ಮಾತನಾಡಿ ಕೊಂಚ ದೂರ ಕರೆದೊಯ್ದಿದ್ದಾನೆ. ನಂತರ ಚಾಕುವಿನಿಂದ ದಾಳಿ ಮಾಡಿ ಪತ್ನಿ ಇಂದು ಹತ್ಯೆಗೈದು ಎಸ್ಕೇಪ್​ ಆಗಿದ್ದಾನೆ. ಇದೀಗ ಪರಾರಿಯಾಗಿರುವ ಸೆಲ್ವಿನ್ ಫ್ರಾನ್ಸಿಸ್​ಗಾಗಿ ಪೊಲೀಸರು ಶೋಧಕಾರ್ಯ ಆರಂಭಿಸಿದ್ದಾರೆ.

ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ನಾಲ್ಕು ಗುಡಿಸಲು ಸುಟ್ಟು ಭಸ್ಮ

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಮಲ್ಲಾ.ಬಿ‌ ಗ್ರಾಮದಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟಗೊಂಡು 4 ಗುಡಿಸಲು ಸುಟ್ಟು ಭಸ್ಮವಾಗಿದೆ. ಮಲ್ಲಾರೆಡ್ಡಿ, ಮಲ್ಕಪ್ಪ ಎಂಬುವರಿಗೆ ಸೇರಿದ ಗುಡಿಸಲುಗಳು ಇದಾಗಿದ್ದು, ಒಂದು ಗಂಟೆಗಳ ಕಾಲ‌ ಹರಸಾಹಸಪಟ್ಟು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಹುಬ್ಬಳ್ಳಿ: ವಾಚ್​ಗಾಗಿ ಸ್ನೇಹಿತರ ನಡುವೆ ಜಗಳ; ಗಾಂಜಾ ಅಮಲಿನಲ್ಲಿ ಗೆಳೆಯನನ್ನೇ ಚಾಕುವಿನಿಂದ ಇರಿದು ಕೊಂದ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:33 pm, Thu, 2 May 24

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ