AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಅಂಬೇಡ್ಕರ್ ಜಯಂತಿ ಮೆರವಣಿಗೆಯಲ್ಲಿ ಯುವಕನ ಹತ್ಯೆ ಪ್ರಕರಣ! ಮೂವರು ಆರೋಪಿಗಳ ಬಂಧನ

ಅಂದು ಸಂವಿಧಾನ ಶಿಲ್ಪಿ ಡಾ ಅಂಬೇಡ್ಕರ್‌ರವರ 133 ನೇ‌ ಜಯಂತ್ಯೋತ್ಸವ ಅಂಗವಾಗಿ ಇಡೀ ಕಲಬುರಗಿ ನಗರ ಸಂಭ್ರಮದಲ್ಲಿ ತೇಲಾಡುತ್ತಿತ್ತು. ಜಯಂತ್ಯೋತ್ಸವ ಹಿನ್ನಲೆಯಲ್ಲಿ ಅನೇಕ ಕಡೆ ಸಂವಿಧಾನ ಶಿಲ್ಪಿಯ ಭವ್ಯ ಮೆರವಣಿಗೆ ನಡೆಯುತ್ತಿದ್ದವು. ಆದರೆ, ಅದೊಂದು ಸ್ಥಳದಲ್ಲಿ ‌ಮಾತ್ರ ನೆತ್ತರು ಹರಿದಿತ್ತು. ಅಷ್ಟಕ್ಕೂ ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿತ್ತು. ಇದೀಗ ಕೊಲೆಗಡುಕರನ್ನ ಖಾಕಿಪಡೆ ಹೆಡೆಮೂರಿ ಕಟ್ಟಿ ಶ್ರೀಕೃಷ್ಣನ ಜನ್ಮಸ್ಥಳಕ್ಕೆ ಕಳುಹಿಸಿದೆ.

ಕಲಬುರಗಿ: ಅಂಬೇಡ್ಕರ್ ಜಯಂತಿ ಮೆರವಣಿಗೆಯಲ್ಲಿ ಯುವಕನ ಹತ್ಯೆ ಪ್ರಕರಣ! ಮೂವರು ಆರೋಪಿಗಳ ಬಂಧನ
ಮೃತ ಯುವಕ
ದತ್ತಾತ್ರೇಯ ಪಾಟೀಲ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on: Apr 20, 2024 | 5:27 PM

Share

ಕಲಬುರಗಿ, ಏ.20: ಏಪ್ರಿಲ್ 14, ಸಂವಿಧಾನ ಕೊಟ್ಟ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಜನ್ಮತಾಳಿದ ದಿನ. ಈ ದಿನವನ್ನ ಇಡೀ ದೇಶದ್ಯಾಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಅದರಂತೆ ಅಂದು ಕೂಡ ಕಲಬುರಗಿ (Kalaburagi) ನಗರದ ಅಶೋಕ್ ನಗರ ಬಡಾವಣೆಯ ಜ‌ನ, ಅಂಬೇಡ್ಕರ್‌ ಅವರ ಮೂರ್ತಿ‌ ಮೆರವಣಿಗೆ ಮಾಡುತ್ತಿದ್ದರು. ಮೆರವಣಿಗೆಯಲ್ಲಿ ನೂರಾರು ಜನ ಭಾಗಿಯಾಗಿದ್ದರು. ಈ ವೇಳೆ ಅದೇ ಬಡಾವಣೆಯ 21 ವರ್ಷದ ಆಕಾಶ್ ಮತ್ತು ನವೀನ್ ಎಂಬಾತನ ಮಧ್ಯೆ ಮೆರವಣಿಗೆಯಲ್ಲಿ ಡಿಜೆ ಮೇಲೆ ಕುಳಿತುಕೊಳ್ಳುವ ವಿಚಾರಕ್ಕೆ ಗಲಾಟೆ ಆಗಿ ಮಾರಮಾರಿ ಆಗಿದೆ. ಇದರಿಂದ ಕೆರಳಿದ ನವೀನ್, ಅಲ್ಲಿಂದ ತೆರಳಿ ಚಾಕುವಿನೊಂದಿಗೆ ಜೇವರ್ಗಿ ಕ್ರಾಸ್ ಬಳಿ ಬಂದಿದ್ದಾನೆ. ಬಂದಿದ್ದೆ ತಡ ಏಕಾಏಕಿ ಆಕಾಶ್‌ಜಿಗೆ ಚಾಕುವಿನಿಂದ ಮನಬಂದಂತೆ ದೇಹದ ತುಂಬೆಲ್ಲ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದನು. ಪ್ರಕರಣ ದಾಖಲಿಸಿಕೊಂಡಿದ್ದ ಅಶೋಕ್ ನಗರ ಠಾಣೆ ಪೊಲೀಸರು ಪ್ರಮುಖ ಆರೋಪಿ ನವೀನ್ ಮತ್ತು ಆದರ್ಶ್​ ಹಾಗೂ ಅಂಬರೀಶ್ ಸೇರಿದಂತೆ ಮೂವರನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇನ್ನು ಕೊಲೆಯಾಗಿದ್ದ ಆಕಾಶ್ ಎಸ್‌ಎಸ್‌ಎಲ್‌ಸಿ ಮುಗಿಸಿ ಕಾಲೇಜು ‌ಮೆಟ್ಟಿಲು ಹತ್ತದೇ ಗಲ್ಲಿಯಲ್ಲಿ ಓಡಾಡಿಕೊಂಡು ಇದ್ದನು. ಕೊಲೆ ಮಾಡಿದ ನವೀನ್ ಮತ್ತು ಕೊಲೆಯಾದ ಆಕಾಶ್ ಒಂದೇ ಬಡಾವಣೆಯ ನಿವಾಸಿಗಳು ಮತ್ತು ಸ್ನೇಹಿತರು. ಇಬ್ಬರ ಮಧ್ಯೆ ಮೇಲಿಂದ ಮೇಲೆ ಸಣ್ಣಪುಟ್ಟ ಕಾರಣಕ್ಕಾಗಿ ಜಗಳ ನಡಿತಾನೇ ಇತ್ತು. ಸಣ್ಣ ಜಗಳ ಇದೀಗ ಬಾಳಿಬದುಕಬೇಕಾಗಿದ್ದ ಯುವಕನ ಕೊಲೆಯಲ್ಲಿ ಅಂತ್ಯವಾಗಿದೆ.

ಇದನ್ನೂ ಓದಿ:ಗದಗದಲ್ಲಿ ನಾಲ್ವರ ಬರ್ಬರ ಹತ್ಯೆ, ಬೆಚ್ಚಿಬಿದ್ದ ಪಕ್ಕದ ಜಿಲ್ಲೆ ಕೊಪ್ಪಳ

ಆಕಾಶ್ ಕೊಲೆಗೆ ಸಂಬಂಧಿಸಿದಂತೆ ಅಶೋಕ್ ನಗರ ಠಾಣೆ ಪೊಲೀಸರು ಮೂವರನ್ನ ಬಂಧಿಸಿ ತೀವ್ರ ವಿಚಾರಣೆ ಒಳಪಡಿಸಿದ್ದಾರೆ. ಆಕಾಶ್ ಕೊಲೆಗೆ ಬೇರೆ ಏನಾದರೂ ಕಾರಣ ಇದೆಯಾ ಅನ್ನೊದರ ಬಗ್ಗೆ ಪೊಲೀಸರು ಇಂಚಿಂಚು ಮಾಹಿತಿ ಕಲೆ ಹಾಕುತ್ತಿದ್ದಾರೆ. ಅದೆನೇ ‌ಇರಲಿ ಡಾ.ಅಂಬೇಡ್ಕರ್ ಮೆರವಣಿಗೆಯಲ್ಲಿ ಯುವಕನ ನೆತ್ತರು ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರನ್ನ ಪೊಲೀಸರು ಬಂಧಿಸಿದ್ದಾರೆ. ಆದರೆ ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ಓರ್ವ ಯುವಕನ ಕೊಲೆಯಲ್ಲಿ ಅಂತ್ಯವಾಗಿದ್ದು ಮಾತ್ರ ದುರಂತವೇ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ