AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಕಲ್ಲಿನಿಂದ ಜಜ್ಜಿ, ಕಾರಿನಲ್ಲಿಟ್ಟು ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ; ಆರೋಪಿ ಅಂದರ್​

ಕಲಬುರಗಿ ಜಿಲ್ಲೆಯ ಆಳಂದ(Aland) ಪಟ್ಟಣದ ಹೊರವಲಯದಲ್ಲಿ ಕಲ್ಲಿನಿಂದ ಜಜ್ಜಿ, ಬಳಿಕ ಕಾರಿನಲ್ಲಿ ಹಾಕಿ ಬೆಂಕಿ ಹಚ್ಚಿ ವ್ಯಕ್ತಿಯೋರ್ವನನ್ನ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ಇದೀಗ ಕೊಲೆ ಆರೋಪಿ ವಿಜಯಕುಮಾರ್​ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಕುರಿತು ಆಳಂದ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಲಬುರಗಿ: ಕಲ್ಲಿನಿಂದ ಜಜ್ಜಿ, ಕಾರಿನಲ್ಲಿಟ್ಟು ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ; ಆರೋಪಿ ಅಂದರ್​
ಆರೋಪಿ ವಿಜಯಕುಮಾರ್
ದತ್ತಾತ್ರೇಯ ಪಾಟೀಲ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on:Apr 30, 2024 | 10:44 PM

Share

ಕಲಬುರಗಿ, ಏ.30: ಕಲ್ಲಿನಿಂದ ಜಜ್ಜಿ, ಬಳಿಕ ಕಾರಿನಲ್ಲಿ ಹಾಕಿ ಬೆಂಕಿ ಹಚ್ಚಿ ವ್ಯಕ್ತಿಯೋರ್ವನನ್ನ ಬರ್ಬರವಾಗಿ ಕೊಲೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಆಳಂದ(Aland) ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಸುರಪುರ ಮೂಲದ ರವಿಕುಮಾರ್(45) ಕೊಲೆಯಾದ ವ್ಯಕ್ತಿ. ಆರೋಪಿ ವಿಜಯ್​ ಕುಮಾರ್ ಪತ್ನಿ ಜೊತೆ ಮೃತ ವ್ಯಕ್ತಿ ಅನೈತಿಕ ಸಂಬಂಧ ಹೊಂದಿದ್ದ. ಈ ಹಿನ್ನಲೆ ಮೊದಲು ರವಿಕುಮಾರ್​ನನ್ನು ಕೊಂದು ಬಳಿಕ ತನ್ನ ಪತ್ನಿ ನೀಲಮ್ಮಳ ಕೊಲೆಗೂ ಯತ್ನಿಸಿದ್ದಾನೆ.

ಘಟನೆ ವಿವರ

ಪತ್ನಿ ನೀಲಮ್ಮ ಜೊತೆ ರವಿಕುಮಾರ್ ಅನೈತಿಕ ಸಂಬಂಧ ಹೊಂದಿರುವ ವಿಚಾರ ತಿಳಿದ ವಿಜಯ್ ಕುಮಾರ್,  ತನ್ನದೇ ಕಾರಿನಲ್ಲಿ ಹೆಂಡತಿ ಮತ್ತು ರವಿಕುಮಾರ್​ನನ್ನು ಕರೆದೊಯ್ದಿದ್ದ. ಕಾರಿನಲ್ಲಿ‌ ರವಿಕುಮಾರ್ ಜೊತೆ ಗಲಾಟೆ ತೆಗೆದು ಬಳಿಕ ಕೊಲೆ ಮಾಡಿದ್ದಾನೆ. ಇನ್ನು ಕೊಲೆ ಆರೋಪಿ ವಿಜಯಕುಮಾರ್​ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಆಳಂದ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಸಿಐಡಿ ಕಸ್ಟಡಿ ಅಂತ್ಯ, ನೇಹಾ ಕೊಲೆಗಡುಕನಿಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

ಕ್ಯಾಂಟರ್​ ಡಿಕ್ಕಿಯಾಗಿ ಬೈಕ್​ ಸವಾರ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಆನೇಕಲ್ ತಾಲೂಕಿನ ಬಾಗಲೂರು ಮುಖ್ಯರಸ್ತೆಯಲ್ಲಿ ಕ್ಯಾಂಟರ್​ ಡಿಕ್ಕಿಯಾಗಿ ಬೈಕ್​ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಹಿಂಬದಿ ಸವಾರನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಬೈಕ್​ಗೆ ಡಿಕ್ಕಿಯಾಗಿ ನಂತರ ನಿಯಂತ್ರಣ ತಪ್ಪಿ ಕ್ಯಾಂಟರ್​ ವಾಹನ ಕೂಡ ಪಲ್ಟಿಯಾಗಿದ್ದು, ಕ್ಯಾಂಟರ್ ಚಾಲಕನಿಗೂ ಗಾಯವಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಹಿನ್ನೆಲೆ ಕಿಲೋಮೀಟರ್​ವರೆಗೆ ಟ್ರಾಫಿಕ್​ಜಾಮ್ ಆಗಿದ್ದು, ಸ್ಥಳಕ್ಕೆ ಸರ್ಜಾಪುರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಹಶೀಲ್ದಾರ್​ ಕಾರು, ಖಾಸಗಿ ಬಸ್, ಬೈಕ್​ ನಡುವೆ ಸರಣಿ ಅಪಘಾತ

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಚೆಲ್ದಿಗಾನಹಳ್ಳಿ ಬಳಿ ಶ್ರೀನಿವಾಸಪುರ ತಹಶೀಲ್ದಾರ್ ಕಾರು, ಖಾಸಗಿ ಬಸ್  ಹಾಗೂ ದ್ವಿಚಕ್ರ ವಾಹನ ನಡುವೆ ಸರಣಿ ಅಪಘಾತ ಸಂಭವಿಸಿದೆ. ತಹಶೀಲ್ದಾರ್ ಸುಧೀಂದ್ರ ಪ್ರಯಾಣಿಸುತ್ತಿದ್ದ ಕಾರಿನ ಟೈಯರ್​ ಬ್ಲಾಸ್ಟ್ ಆಗಿ ಜಖಂಗೊಂಡಿದೆ. ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:43 pm, Tue, 30 April 24

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ