AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆರೆ ಮನೆಯಲ್ಲೇ ಕಳ್ಳತನ, ಕದ್ದ ಹಣ ಮಲೈ ಮಹದೇಶ್ವರನ ಹುಂಡಿಗೆ !

ಪಕ್ಕದ ಮನೆಯಲ್ಲಿನ ಹಣ ಮತ್ತು ಚಿನ್ನವನ್ನು ಕಳ್ಳತನ ಮಾಡಿ, ನೇರವಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ಹೋದ ಆರೋಪಿಗಳು, ದೇವಸ್ಥಾನದ ಹುಂಡಿಯಲ್ಲಿ ಹಣ ಹಾಕಿ ಪರಾರಿಯಾಗಿದ್ದಾರೆ. ಇತ್ತ ಹಣ ಕಳೆದುಕೊಂಡ ಚಾಮರಾಜಪೇಟೆಯ ಅಪ್ಪುರಾವ್ ರಸ್ತೆಯಲ್ಲಿರುವ ಉಮಾ ಎಂಬುವರು ಕೆಜಿ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನೆರೆ ಮನೆಯಲ್ಲೇ ಕಳ್ಳತನ, ಕದ್ದ ಹಣ ಮಲೈ ಮಹದೇಶ್ವರನ ಹುಂಡಿಗೆ !
ಸಾಂದರ್ಭಿಕ ಚಿತ್ರ
Shivaprasad B
| Edited By: |

Updated on:Apr 12, 2024 | 10:12 AM

Share

ಬೆಂಗಳೂರು, ಏಪ್ರಿಲ್​ 12: ನಕಲಿ ಕೀಲಿಕೈ ಬಳಸಿ ಪಕ್ಕದ ಮನೆಯಲ್ಲಿದ್ದ ಹಣ ಮತ್ತು ಚಿನ್ನಾಭರಣವನ್ನು ಕದ್ದು ಪರಾರಿಯಾಗಿದ್ದ ಕಳ್ಳರನ್ನು ಕೆ.ಜಿ.ನಗರ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ಕಿರಣ್, ಆನಂದ್, ನಾನಿ ಬಂಧಿಸಿದ ಬಂಧಿತ ಆರೋಪಿಗಳು. ಚಾಮರಾಜಪೇಟೆಯ (Chamrajpete) ಅಪ್ಪುರಾವ್ ರಸ್ತೆಯಲ್ಲಿರುವ ಉಮಾ ಎಂಬುವರ ಮನೆಯ ಪಕ್ಕದಲ್ಲೇ ಆರೋಪಿಗಳು ಕಳೆದ 15 ವರ್ಷಗಳಿಂದ ವಾಸವಾಗಿದ್ದಾರೆ. ಆರೋಪಿಗಳು ಮಾರ್ಚ್ 29 ರಂದು ನಕಲಿ ಕೀಲಿಕೈ ಬಳಸಿ ಉಮಾ ಅವರ ಮನೆಯಲ್ಲಿದ್ದ 6 ಲಕ್ಷ ಹಣ ಮತ್ತು 3.22 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದು, ಮಲೈ ಮಹದೇಶ್ವರ (Male Mahadeshwara Betta) ಬೆಟ್ಟಕ್ಕೆ ತೆರಳಿ ದೇವಸ್ಥಾನದ ಹುಂಡಿಗೆ ಹಣ ಹಾಕಿದ್ದರು. ಕೆ.ಜಿ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪತ್ನಿಯನ್ನು ನಿಂದಿಸಿದ್ದಕ್ಕೆ ಅಣ್ಣನಿಗೆ ಚಾಕು ಇರಿದ ತಮ್ಮ

ನೆಲಮಂಗಲ: ಪತ್ನಿಯನ್ನು ನಿಂದಿಸಿದ್ದಕ್ಕೆ ಅಣ್ಣನಿಗೆ ತಮ್ಮ ಚಾಕು ಇರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಜೋಗಿಪಾಳ್ಯದಲ್ಲಿ ನಡೆದಿದೆ. ಚಾಕು ಇರಿತದಿಂದ ಗಾಯಗೊಂಡಿರುವ ಮಂಜುನಾಥ್​ ಅವರನ್ನು ವಿಕ್ಟೋರಿಯಾ ಅಸ್ಪತ್ರೆಗೆ ದಾಖಲಿಸಲಾಗಿದೆ. ನವೀನ್ ಚಾಕು ಇರಿದ ಆರೋಪಿಯಾಗಿದ್ದು, ಘಟನೆ ಬಳಿಕ ನಾಪತ್ತೆಯಾಗಿದ್ದಾನೆ.

ಇದನ್ನೂ ಓದಿ: ಚಿನ್ನ ಕಳ್ಳಸಾಗಣೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ 58 ಲಕ್ಷ ರೂ. ಮೌಲ್ಯದ ಬಂಗಾರ ವಶ

ನವೀನ್ ಪತ್ನಿ ದಿನಾಮಣಿ ಅಂಗನವಾಡಿ ಕಾರ್ಯಕರ್ತೆಯಾಗಿದ್ದಾರೆ. ಕೆಲಸಕ್ಕೆ ಹೋಗುವ ವಿಚಾರವಾಗಿ ಅಣ್ಣ ಮಂಜುನಾಥ್​​ ತಮ್ಮ ನವೀನ್​ ಪತ್ನಿ ದಿನಾಮಣಿ ಅವರನ್ನು ನಿಂದಿಸಿರುವ ಆರೋಪ ಕೇಳಿಬಂದಿತ್ತು. ಇದರಿಂದ ಕೋಪಗೊಂಡ ನವೀನ್​, ಅಣ್ಣ ಮಂಜುನಾಥ್​ ಅವರಿಗೆ ಚಾಕುವಿನಿಂದ ಇರಿದಿದ್ದಾನೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:10 am, Fri, 12 April 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ