AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆರೆ ಮನೆಯಲ್ಲೇ ಕಳ್ಳತನ, ಕದ್ದ ಹಣ ಮಲೈ ಮಹದೇಶ್ವರನ ಹುಂಡಿಗೆ !

ಪಕ್ಕದ ಮನೆಯಲ್ಲಿನ ಹಣ ಮತ್ತು ಚಿನ್ನವನ್ನು ಕಳ್ಳತನ ಮಾಡಿ, ನೇರವಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ಹೋದ ಆರೋಪಿಗಳು, ದೇವಸ್ಥಾನದ ಹುಂಡಿಯಲ್ಲಿ ಹಣ ಹಾಕಿ ಪರಾರಿಯಾಗಿದ್ದಾರೆ. ಇತ್ತ ಹಣ ಕಳೆದುಕೊಂಡ ಚಾಮರಾಜಪೇಟೆಯ ಅಪ್ಪುರಾವ್ ರಸ್ತೆಯಲ್ಲಿರುವ ಉಮಾ ಎಂಬುವರು ಕೆಜಿ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನೆರೆ ಮನೆಯಲ್ಲೇ ಕಳ್ಳತನ, ಕದ್ದ ಹಣ ಮಲೈ ಮಹದೇಶ್ವರನ ಹುಂಡಿಗೆ !
ಸಾಂದರ್ಭಿಕ ಚಿತ್ರ
Shivaprasad B
| Edited By: ವಿವೇಕ ಬಿರಾದಾರ|

Updated on:Apr 12, 2024 | 10:12 AM

Share

ಬೆಂಗಳೂರು, ಏಪ್ರಿಲ್​ 12: ನಕಲಿ ಕೀಲಿಕೈ ಬಳಸಿ ಪಕ್ಕದ ಮನೆಯಲ್ಲಿದ್ದ ಹಣ ಮತ್ತು ಚಿನ್ನಾಭರಣವನ್ನು ಕದ್ದು ಪರಾರಿಯಾಗಿದ್ದ ಕಳ್ಳರನ್ನು ಕೆ.ಜಿ.ನಗರ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ಕಿರಣ್, ಆನಂದ್, ನಾನಿ ಬಂಧಿಸಿದ ಬಂಧಿತ ಆರೋಪಿಗಳು. ಚಾಮರಾಜಪೇಟೆಯ (Chamrajpete) ಅಪ್ಪುರಾವ್ ರಸ್ತೆಯಲ್ಲಿರುವ ಉಮಾ ಎಂಬುವರ ಮನೆಯ ಪಕ್ಕದಲ್ಲೇ ಆರೋಪಿಗಳು ಕಳೆದ 15 ವರ್ಷಗಳಿಂದ ವಾಸವಾಗಿದ್ದಾರೆ. ಆರೋಪಿಗಳು ಮಾರ್ಚ್ 29 ರಂದು ನಕಲಿ ಕೀಲಿಕೈ ಬಳಸಿ ಉಮಾ ಅವರ ಮನೆಯಲ್ಲಿದ್ದ 6 ಲಕ್ಷ ಹಣ ಮತ್ತು 3.22 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದು, ಮಲೈ ಮಹದೇಶ್ವರ (Male Mahadeshwara Betta) ಬೆಟ್ಟಕ್ಕೆ ತೆರಳಿ ದೇವಸ್ಥಾನದ ಹುಂಡಿಗೆ ಹಣ ಹಾಕಿದ್ದರು. ಕೆ.ಜಿ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪತ್ನಿಯನ್ನು ನಿಂದಿಸಿದ್ದಕ್ಕೆ ಅಣ್ಣನಿಗೆ ಚಾಕು ಇರಿದ ತಮ್ಮ

ನೆಲಮಂಗಲ: ಪತ್ನಿಯನ್ನು ನಿಂದಿಸಿದ್ದಕ್ಕೆ ಅಣ್ಣನಿಗೆ ತಮ್ಮ ಚಾಕು ಇರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಜೋಗಿಪಾಳ್ಯದಲ್ಲಿ ನಡೆದಿದೆ. ಚಾಕು ಇರಿತದಿಂದ ಗಾಯಗೊಂಡಿರುವ ಮಂಜುನಾಥ್​ ಅವರನ್ನು ವಿಕ್ಟೋರಿಯಾ ಅಸ್ಪತ್ರೆಗೆ ದಾಖಲಿಸಲಾಗಿದೆ. ನವೀನ್ ಚಾಕು ಇರಿದ ಆರೋಪಿಯಾಗಿದ್ದು, ಘಟನೆ ಬಳಿಕ ನಾಪತ್ತೆಯಾಗಿದ್ದಾನೆ.

ಇದನ್ನೂ ಓದಿ: ಚಿನ್ನ ಕಳ್ಳಸಾಗಣೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ 58 ಲಕ್ಷ ರೂ. ಮೌಲ್ಯದ ಬಂಗಾರ ವಶ

ನವೀನ್ ಪತ್ನಿ ದಿನಾಮಣಿ ಅಂಗನವಾಡಿ ಕಾರ್ಯಕರ್ತೆಯಾಗಿದ್ದಾರೆ. ಕೆಲಸಕ್ಕೆ ಹೋಗುವ ವಿಚಾರವಾಗಿ ಅಣ್ಣ ಮಂಜುನಾಥ್​​ ತಮ್ಮ ನವೀನ್​ ಪತ್ನಿ ದಿನಾಮಣಿ ಅವರನ್ನು ನಿಂದಿಸಿರುವ ಆರೋಪ ಕೇಳಿಬಂದಿತ್ತು. ಇದರಿಂದ ಕೋಪಗೊಂಡ ನವೀನ್​, ಅಣ್ಣ ಮಂಜುನಾಥ್​ ಅವರಿಗೆ ಚಾಕುವಿನಿಂದ ಇರಿದಿದ್ದಾನೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:10 am, Fri, 12 April 24

Follow Us
Shivaprasad B
Shivaprasad B
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ