AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕ ಪೊಲೀಸರ ವಶಕ್ಕೆ

ಕಳೆದ ಒಂದು ವರ್ಷದಿಂದ 6ನೇ ತರಗಿತಿ ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನನ್ನು ಬೆಳ್ತಂಗಡಿ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ವಿರುದ್ಧ ಫೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕ ಪೊಲೀಸರ ವಶಕ್ಕೆ
ಸಾಂದರ್ಭಿಕ ಚಿತ್ರ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: ವಿವೇಕ ಬಿರಾದಾರ|

Updated on:Apr 16, 2024 | 1:11 PM

Share

ಮಂಗಳೂರು, ಏಪ್ರಿಲ್​ 16: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ, ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷನ (Teacher) ವಿರುದ್ಧ ಬೆಳ್ತಂಗಡಿ ಪೊಲೀಸ್ (Police)​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಕ್ಷಕ ವಿರಾಜ್​ ಜೈನ್​ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿ. ವಿದ್ಯಾರ್ಥಿನಿ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದಾಳೆ. ಮಾರ್ಚ್​ 10 ರಂದು ವಿದ್ಯಾರ್ಥಿನಿ ಶಾಲೆಗೆ ಹೋಗುವುದಿಲ್ಲ ಎಂದು ಪೋಷಕರ ಮುಂದೆ ಹೇಳಿದ್ದಾಳೆ. ಆಗ ಪೋಷಕರು ಏನಾಯಿತು ಎಂದು ವಿಚಾರಿಸಿದ್ದಾರೆ.

ಆಗ ವಿದ್ಯಾರ್ಥಿನಿ ಶಾಲೆಯ ಶಿಕ್ಷಕನಾದ ವಿರಾಜ್​ ಜೈನ್​ ಕಳೆದ ವರ್ಷ ಜೂನ್​​ನಿಂದ ದೂರು ದಾಖಲಾಗುವ ದಿನದವರೆಗೆ ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸುತ್ತಾ, ಲೈಂಗಿಕ ಕಿರುಕುಳ ನೀಡುತ್ತಾ ಬಂದಿದ್ದಾನೆ ಎಂದು ದೂರಿನಲ್ಲಿ ದಾಖಲಾಗಿದೆ. ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ:  ಮೈಸೂರು ಮೂಲದ ಮಹಿಳೆ ಸುಡಾನ್​ನಲ್ಲಿ ಅನುಮಾನಾಸ್ಪದವಾಗಿ ಸಾವು

ಐಪೋನ್​ ಕೊಡಿಸದಿದ್ದಕ್ಕೆ ಮನೆ ಬಿಟ್ಟು ಹೋದ ಬಾಲಕ

ಬಾಗಲಕೋಟೆ: ಬಾಗಲಕೋಟೆ ತಾಲೂಕಿನ ಗದ್ದನಕೇರಿ ಗ್ರಾಮದ ನಿವಾಸಿ ಬಾಲಕ ಶ್ರವಣಕುಮಾರ ತಳವಾರ ಐಪೋನ್ ಕೊಡಿಸದ ಹಿನ್ನೆಲೆಯಲ್ಲಿ ಮನೆ ಬಿಟ್ಟು ಹೋಗಿದ್ದಾನೆ. ಬಾಲಕ ಶ್ರವಣಕುಮಾರ್​ 10ನೇ ತರಗತಿಯಲ್ಲಿ ಓದುತ್ತಿದ್ದಾನೆ. ಬಾಲಕ ಶ್ರವಣಕುಮಾರ್​ ಮನೆಯಲ್ಲಿದ್ದ 800 ರೂ. ತೆಗೆದುಕೊಂಡು ಕಳೆದ ಶನಿವಾರ ಮನೆ ಬಿಟ್ಟು ಹೋಗಿದ್ದಾನೆ. ಮಗ ಕಾಣೆಯಾಗಿದ್ದಕ್ಕೆ ಪೋಷಕರು ಕಂಗಾಲಾಗಿದ್ದಾರೆ.

ಮನೆಗೆ ನುಗ್ಗಿ ನಗ-ನಾಣ್ಯ ಕದ್ದ ಖದೀಮ

ಬೆಂಗಳೂರು: ಮನೆಯಲ್ಲಿದ್ದ 15 ಲಕ್ಷ ಹಣ, ಚಿನ್ನ ದೋಚಿ ಖದೀಮ ಪರಾರಿಯಾಗಿದ್ದು, ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಇಮ್ರಾನ್ ಅಲಿಯಾಸ್ ಚೋರ್ ಇಮ್ರಾನ್​​ ಕೃತ್ಯ ಎಸಗಿದ ಆರೋಪಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:56 pm, Tue, 16 April 24

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ