AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕ ಪೊಲೀಸರ ವಶಕ್ಕೆ

ಕಳೆದ ಒಂದು ವರ್ಷದಿಂದ 6ನೇ ತರಗಿತಿ ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನನ್ನು ಬೆಳ್ತಂಗಡಿ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ವಿರುದ್ಧ ಫೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕ ಪೊಲೀಸರ ವಶಕ್ಕೆ
ಸಾಂದರ್ಭಿಕ ಚಿತ್ರ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Apr 16, 2024 | 1:11 PM

Share

ಮಂಗಳೂರು, ಏಪ್ರಿಲ್​ 16: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ, ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷನ (Teacher) ವಿರುದ್ಧ ಬೆಳ್ತಂಗಡಿ ಪೊಲೀಸ್ (Police)​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಕ್ಷಕ ವಿರಾಜ್​ ಜೈನ್​ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿ. ವಿದ್ಯಾರ್ಥಿನಿ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದಾಳೆ. ಮಾರ್ಚ್​ 10 ರಂದು ವಿದ್ಯಾರ್ಥಿನಿ ಶಾಲೆಗೆ ಹೋಗುವುದಿಲ್ಲ ಎಂದು ಪೋಷಕರ ಮುಂದೆ ಹೇಳಿದ್ದಾಳೆ. ಆಗ ಪೋಷಕರು ಏನಾಯಿತು ಎಂದು ವಿಚಾರಿಸಿದ್ದಾರೆ.

ಆಗ ವಿದ್ಯಾರ್ಥಿನಿ ಶಾಲೆಯ ಶಿಕ್ಷಕನಾದ ವಿರಾಜ್​ ಜೈನ್​ ಕಳೆದ ವರ್ಷ ಜೂನ್​​ನಿಂದ ದೂರು ದಾಖಲಾಗುವ ದಿನದವರೆಗೆ ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸುತ್ತಾ, ಲೈಂಗಿಕ ಕಿರುಕುಳ ನೀಡುತ್ತಾ ಬಂದಿದ್ದಾನೆ ಎಂದು ದೂರಿನಲ್ಲಿ ದಾಖಲಾಗಿದೆ. ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ:  ಮೈಸೂರು ಮೂಲದ ಮಹಿಳೆ ಸುಡಾನ್​ನಲ್ಲಿ ಅನುಮಾನಾಸ್ಪದವಾಗಿ ಸಾವು

ಐಪೋನ್​ ಕೊಡಿಸದಿದ್ದಕ್ಕೆ ಮನೆ ಬಿಟ್ಟು ಹೋದ ಬಾಲಕ

ಬಾಗಲಕೋಟೆ: ಬಾಗಲಕೋಟೆ ತಾಲೂಕಿನ ಗದ್ದನಕೇರಿ ಗ್ರಾಮದ ನಿವಾಸಿ ಬಾಲಕ ಶ್ರವಣಕುಮಾರ ತಳವಾರ ಐಪೋನ್ ಕೊಡಿಸದ ಹಿನ್ನೆಲೆಯಲ್ಲಿ ಮನೆ ಬಿಟ್ಟು ಹೋಗಿದ್ದಾನೆ. ಬಾಲಕ ಶ್ರವಣಕುಮಾರ್​ 10ನೇ ತರಗತಿಯಲ್ಲಿ ಓದುತ್ತಿದ್ದಾನೆ. ಬಾಲಕ ಶ್ರವಣಕುಮಾರ್​ ಮನೆಯಲ್ಲಿದ್ದ 800 ರೂ. ತೆಗೆದುಕೊಂಡು ಕಳೆದ ಶನಿವಾರ ಮನೆ ಬಿಟ್ಟು ಹೋಗಿದ್ದಾನೆ. ಮಗ ಕಾಣೆಯಾಗಿದ್ದಕ್ಕೆ ಪೋಷಕರು ಕಂಗಾಲಾಗಿದ್ದಾರೆ.

ಮನೆಗೆ ನುಗ್ಗಿ ನಗ-ನಾಣ್ಯ ಕದ್ದ ಖದೀಮ

ಬೆಂಗಳೂರು: ಮನೆಯಲ್ಲಿದ್ದ 15 ಲಕ್ಷ ಹಣ, ಚಿನ್ನ ದೋಚಿ ಖದೀಮ ಪರಾರಿಯಾಗಿದ್ದು, ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಇಮ್ರಾನ್ ಅಲಿಯಾಸ್ ಚೋರ್ ಇಮ್ರಾನ್​​ ಕೃತ್ಯ ಎಸಗಿದ ಆರೋಪಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:56 pm, Tue, 16 April 24

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?