ಮಂಗಳೂರು: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕ ಪೊಲೀಸರ ವಶಕ್ಕೆ

ಕಳೆದ ಒಂದು ವರ್ಷದಿಂದ 6ನೇ ತರಗಿತಿ ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನನ್ನು ಬೆಳ್ತಂಗಡಿ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ವಿರುದ್ಧ ಫೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕ ಪೊಲೀಸರ ವಶಕ್ಕೆ
ಸಾಂದರ್ಭಿಕ ಚಿತ್ರ
Edited By: ವಿವೇಕ ಬಿರಾದಾರ

Updated on: Apr 16, 2024 | 1:11 PM

ಮಂಗಳೂರು, ಏಪ್ರಿಲ್​ 16: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ, ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷನ (Teacher) ವಿರುದ್ಧ ಬೆಳ್ತಂಗಡಿ ಪೊಲೀಸ್ (Police)​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಕ್ಷಕ ವಿರಾಜ್​ ಜೈನ್​ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿ. ವಿದ್ಯಾರ್ಥಿನಿ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದಾಳೆ. ಮಾರ್ಚ್​ 10 ರಂದು ವಿದ್ಯಾರ್ಥಿನಿ ಶಾಲೆಗೆ ಹೋಗುವುದಿಲ್ಲ ಎಂದು ಪೋಷಕರ ಮುಂದೆ ಹೇಳಿದ್ದಾಳೆ. ಆಗ ಪೋಷಕರು ಏನಾಯಿತು ಎಂದು ವಿಚಾರಿಸಿದ್ದಾರೆ.

ಆಗ ವಿದ್ಯಾರ್ಥಿನಿ ಶಾಲೆಯ ಶಿಕ್ಷಕನಾದ ವಿರಾಜ್​ ಜೈನ್​ ಕಳೆದ ವರ್ಷ ಜೂನ್​​ನಿಂದ ದೂರು ದಾಖಲಾಗುವ ದಿನದವರೆಗೆ ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸುತ್ತಾ, ಲೈಂಗಿಕ ಕಿರುಕುಳ ನೀಡುತ್ತಾ ಬಂದಿದ್ದಾನೆ ಎಂದು ದೂರಿನಲ್ಲಿ ದಾಖಲಾಗಿದೆ. ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ:  ಮೈಸೂರು ಮೂಲದ ಮಹಿಳೆ ಸುಡಾನ್​ನಲ್ಲಿ ಅನುಮಾನಾಸ್ಪದವಾಗಿ ಸಾವು

ಐಪೋನ್​ ಕೊಡಿಸದಿದ್ದಕ್ಕೆ ಮನೆ ಬಿಟ್ಟು ಹೋದ ಬಾಲಕ

ಬಾಗಲಕೋಟೆ: ಬಾಗಲಕೋಟೆ ತಾಲೂಕಿನ ಗದ್ದನಕೇರಿ ಗ್ರಾಮದ ನಿವಾಸಿ ಬಾಲಕ ಶ್ರವಣಕುಮಾರ ತಳವಾರ ಐಪೋನ್ ಕೊಡಿಸದ ಹಿನ್ನೆಲೆಯಲ್ಲಿ ಮನೆ ಬಿಟ್ಟು ಹೋಗಿದ್ದಾನೆ. ಬಾಲಕ ಶ್ರವಣಕುಮಾರ್​ 10ನೇ ತರಗತಿಯಲ್ಲಿ ಓದುತ್ತಿದ್ದಾನೆ. ಬಾಲಕ ಶ್ರವಣಕುಮಾರ್​ ಮನೆಯಲ್ಲಿದ್ದ 800 ರೂ. ತೆಗೆದುಕೊಂಡು ಕಳೆದ ಶನಿವಾರ ಮನೆ ಬಿಟ್ಟು ಹೋಗಿದ್ದಾನೆ. ಮಗ ಕಾಣೆಯಾಗಿದ್ದಕ್ಕೆ ಪೋಷಕರು ಕಂಗಾಲಾಗಿದ್ದಾರೆ.

ಮನೆಗೆ ನುಗ್ಗಿ ನಗ-ನಾಣ್ಯ ಕದ್ದ ಖದೀಮ

ಬೆಂಗಳೂರು: ಮನೆಯಲ್ಲಿದ್ದ 15 ಲಕ್ಷ ಹಣ, ಚಿನ್ನ ದೋಚಿ ಖದೀಮ ಪರಾರಿಯಾಗಿದ್ದು, ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಇಮ್ರಾನ್ ಅಲಿಯಾಸ್ ಚೋರ್ ಇಮ್ರಾನ್​​ ಕೃತ್ಯ ಎಸಗಿದ ಆರೋಪಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:56 pm, Tue, 16 April 24

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us