AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಲ್ಲಿ ಹಾಡಹಗಲೇ ಗ್ಯಾಂಗ್​ವಾರ್: ಅನ್ಯಕೋಮಿನ ಇಬ್ಬರು ಯುವಕರ ಬರ್ಬರ ಹತ್ಯೆ

ಶಿವಮೊಗ್ಗದ (Shivamogga) ಲಷ್ಕರ್ ಮೊಹಲ್ಲಾದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಜೋಡಿ ಕೊಲೆ ಮಾಡಲಾಗಿದೆ. ಹಳೆಯ ವೈಷಮ್ಯ ಹಿನ್ನೆಲೆ, ಇಬ್ಬರ ಹತ್ಯೆ ನಡೆದಿರುವ ಶಂಕೆಯಿದ್ದು, ಸ್ಥಳಕ್ಕೆ ಕೋಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಿವಮೊಗ್ಗದಲ್ಲಿ ಹಾಡಹಗಲೇ ಗ್ಯಾಂಗ್​ವಾರ್: ಅನ್ಯಕೋಮಿನ ಇಬ್ಬರು ಯುವಕರ ಬರ್ಬರ ಹತ್ಯೆ
ಶಿವಮೊಗ್ಗದಲ್ಲಿ ಜೋಡಿ ಕೊಲೆ
Basavaraj Yaraganavi
| Edited By: ಕಿರಣ್ ಹನುಮಂತ್​ ಮಾದಾರ್|

Updated on:May 08, 2024 | 7:45 PM

Share

ಶಿವಮೊಗ್ಗ, ಮೇ.08: ಲೋಕಸಭಾ ಚುನಾವಣೆ ಮತದಾನ ಮುಗಿದ ಮಾರನೇ  ದಿನವಾದ ಇಂದು(ಮೇ.08) ಶಿವಮೊಗ್ಗದ (Shivamogga) ಲಷ್ಕರ್ ಮೊಹಲ್ಲಾದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಜೋಡಿ ಕೊಲೆ ಮಾಡಲಾಗಿದೆ. ಗೌಸ್(30) ಮತ್ತು ಶೋಹೆಬ್(35) ಕೊಲೆಯಾದ ವ್ಯಕ್ತಿಗಳು. ಹಳೆಯ ವೈಷಮ್ಯ ಹಿನ್ನೆಲೆ, ಇಬ್ಬರ ಹತ್ಯೆ ನಡೆದಿರುವ ಶಂಕೆಯಿದ್ದು, ಸ್ಥಳಕ್ಕೆ ಕೋಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಈ ಮೃತ ರೌಡಿ ಶೀಟರಗಳು, ಮತ್ತೋರ್ವ ರೌಡಿಶೀಟರ್ ಆದ ಯಾಸೀನ್ ಖುರೇಷಿ ಮೇಲೆ ಹಲ್ಲೆ ಮಾಡಲು ಬಂದಿದ್ದರು. ಈ ವೇಳೆ ಯಾಸೀನ್ ಖುರೇಷಿ ಕಡೆಯವರು ಸೇರಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಘಟನೆಯಲ್ಲಿ ರೌಡಿಶೀಟರ್ ಯಾಸೀನ್ ಖುರೇಷಿಗೆ ಗಾಯವಾಗಿದ್ದು, ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಎಸ್ಆರ್​ ತುಕಡಿ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ:ಗಂಡ-ಹೆಂಡತಿ ಜಗಳ: ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಪತ್ನಿಯ ಭೀಕರ ಕೊಲೆ

ಹೊಂಡದ ತೀರ್ಥ ತರಲು ಹೋದ ಯುವಕ ಕಾಲು ಜಾರಿ ಬಿದ್ದು ಸಾವು

ವಿಜಯನಗರ: ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದ ಗುಡ್ಡದ ದೇವಸ್ಥಾನದ ಅರಶಿನ ಹೊಂಡದಲ್ಲಿ ತೀರ್ಥ ತರಲು ಹೋದ ಯುವಕ ಕಾಲು ಜಾರಿ ಬಿದ್ದು ನಿನ್ನೆ(ಮೇ.7) ಸಾವನ್ನಪ್ಪಿದ್ದಾನೆ. ಕೆ. ಗೋಣಿಸ್ವಾಮೀ (24) ಮೃತ ಯುವಕ. ಇತ ಚಿತ್ರದುರ್ಗದ ಸರಸ್ವತಿ ಕಾಲೇಜಿನಲ್ಲಿ ಎಲ್​ಎಲ್​ಬಿ ಓದುತ್ತಿದ್ದ. ಕಾಲೇಜು ರಜೆ ಇದ್ದ ಹಿನ್ನೆಲೆ ಪುಣ್ಯಕ್ಷೇತ್ರದ ಅರಶಿನಹೊಂಡದಲ್ಲಿ ತೀರ್ಥ ತರಲು ಹೋದಾಗ ಈ ದುರ್ಘಟನೆ ನಡೆದಿದೆ. ಸ್ಥಳೀಯರೊಬ್ಬರು ರಕ್ಷಣೆ ಮಾಡಲು ಪ್ರಯತ್ನಿಸಿದರೂ ವಿಫಲವಾಗಿದೆ. ಈ ಕುರಿತು ಅರಸೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:37 pm, Wed, 8 May 24

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು