AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಟ್ಸ್​​ಆ್ಯಪ್ ಪಿಂಕ್ ಅಪಾಯಕಾರಿ: ಕರ್ನಾಟಕ ಪೊಲೀಸರಿಂದ ಎಚ್ಚರಿಕೆ, ಕಾರಣ ಇಲ್ಲಿದೆ

ವಾಟ್ಸ್​​ಆ್ಯಪ್ ಪಿಂಕ್ ಮೋಹಕ್ಕೆ ಬಿದ್ದು ಅದನ್ನು ನಿಮ್ಮ ಮೊಬೈಲ್​ನಲ್ಲಿ ಡೌನ್​ಲೋಡ್ ಮತ್ತು ಇನ್​ಸ್ಟಾಲ್ ಮಾಡಿದ್ದೀರಾ? ಅಥವಾ ಮಾಡಲು ಮುಂದಾಗುತ್ತಿದ್ದೀರಾ? ಹಾಗೆ ಮಾಡಿದರೆ ನಿಮಗೆ ಅಪಾಯ ಕಟ್ಟಿಟ್ಟ ಬುತ್ತಿ. ವಾಟ್ಸ್​​ಆ್ಯಪ್ ಪಿಂಕ್ ಕರಾಳ ಮುಖದ ಬಗ್ಗೆ ಕರ್ನಾಟಕ ಪೊಲೀಸರು ನೀಡಿರುವ ಎಚ್ಚರಿಕೆ ಇಲ್ಲಿದೆ ನೋಡಿ.

ವಾಟ್ಸ್​​ಆ್ಯಪ್ ಪಿಂಕ್ ಅಪಾಯಕಾರಿ: ಕರ್ನಾಟಕ ಪೊಲೀಸರಿಂದ ಎಚ್ಚರಿಕೆ, ಕಾರಣ ಇಲ್ಲಿದೆ
ವಾಟ್ಸ್​ಆ್ಯಪ್ ಪಿಂಕ್ ಬಗ್ಗೆ ಕರ್ನಾಟಕ ಪೊಲೀಸರು ನೀಡಿರುವ ಎಚ್ಚರಿಕೆ ಸಂದೇಶ
Follow us
Jagadisha B
| Updated By: Ganapathi Sharma

Updated on:Jan 24, 2024 | 11:19 AM

ಬೆಂಗಳೂರು, ಜನವರಿ 24: ಸೈಬರ್ ವಂಚನೆಯ (Cyber Crime) ಮತ್ತೊಂದು ಮುಖವನ್ನು ಕರ್ನಾಟಕ ಪೊಲೀಸರು (Karnataka Police) ಪತ್ತೆಹಚ್ಚಿದ್ದು, ಯಾವುದೇ ಕಾರಣಕ್ಕೂ ಗುಲಾಬಿ ಬಣ್ಣದ ವಾಟ್ಸ್​​ಆ್ಯಪ್ ಅಥವಾ ವಾಟ್ಸ್​ಆ್ಯಪ್ ಪಿಂಕ್ (Whatsapp Pink) ಅನ್ನು ಇನ್​ಸ್ಟಾಲ್ ಮಾಡದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಎಚ್ಚರಿಕೆ ಸಂದೇಶ ಪ್ರಕಟಿಸಿರುವ ಕರ್ನಾಟಕ ಪೊಲೀಸ್, ಗುಲಾಬಿ ಬಣ್ಣದ ವಾಟ್ಸ್​ಆ್ಯಪ್ ಅಪಾಯಕಾರಿ ಎಚ್ಚರಿಕೆಯಿಂದಿರಿ. ಆಕರ್ಷಣೆಯ ಗುಲಾಬಿ ಬಣ್ಣದ ವಾಟ್ಸ್​ಆ್ಯಪ್ (Apk) ಬಳಸುವವರನ್ನು ಗುರಿಯಾಗಿಸಿ ಮೋಸಗಾರರು ಡೇಟಾ ಕದಿಯಲು ಇಲ್ಲವೇ ಆ್ಯಂಡ್ರಾಯ್ಡ್ ಮೊಬೈಲ್ ಹ್ಯಾಕ್ ಮಾಡಲು ಬಳಸಿಕೊಳ್ಳುತ್ತಾರೆ. ಜಾಗೃತೆಯಿಂದಿರಿ ಎಂದು ಉಲ್ಲೇಖಿಸಿದೆ.

ನೀವು ಒಂದು ವೇಳೆ ವಾಟ್ಸ್​ಆ್ಯಪ್ ಪಿಂಕ್ ಇನ್​ಸ್ಟಾಲ್ ಮಾಡಿದ್ದೇ ಆದಲ್ಲಿ ಹ್ಯಾಕರ್​​ಗಳು ನಿಮ್ಮ ಫೋಟೊ, ಕಾಂಟ್ಯಕ್ಟ್​, ನೆಟ್​ ಬ್ಯಾಂಕಿಂಗ್ ಪಾಸ್ವರ್ಡ್​​ಗಳು, ಎಸ್​ಎಂಎಸ್​​ಗಳನ್ನು ಹ್ಯಾಕ್ ಮಾಡಲಿದ್ದಾರೆ ಎಂದು ಕರ್ನಾಟಕ ಪೊಲೀಸ್ ಎಚ್ಚರಿಕೆ ನೀಡಿದೆ.

ವಂಚಕರು ನಿಮ್ಮ ಮೊಬೈಲ್​​ನ ಸಂಪೂರ್ಣ ದತ್ತಾಂಶಕ್ಕೆ ಕನ್ನ ಹಾಕುವ ಸಾಧ್ಯತೆ ಇದೆ. ಹೀಗಾಗಿ ಯಾರೂ ಕೂಡ ವಾಟ್ಸ್​ಆ್ಯಪ್ ಪಿಂಕ್ ಬಳಸಬೇಡಿ. ಒಂದು ವೇಳೆ ಯಾವುದೇ ರೀತಿಯ ಸೈಬರ್ ವಂಚನೆಗೆ ಒಳಗಾದರೆ 1930 ಗೆ ಕರೆ ಮಾಡಿ ಎಂದು ಪೊಲೀಸರು ಸಲಹೆ ನೀಡಿದ್ದಾರೆ.

ಏನಿದು ವಾಟ್ಸ್​​ಆ್ಯಪ್ ಪಿಂಕ್?

ವಾಟ್ಸ್​​ಆ್ಯಪ್ ಪಿಂಕ್ ವಾಟ್ಸ್​​ಆ್ಯಪ್​ನ ಹೊಸ ಆವೃತ್ತಿ ಅಥವಾ ವಾಟ್ಸ್​​ಆ್ಯಪ್ ಅಧಿಕೃತ ಬಿಡುಗಡೆ ಅಲ್ಲ. ಬದಲಿಗೆ, ಇದು ಬಳಕೆದಾರರನ್ನು ವಂಚಿಸುವ, ಮೋಸಗೊಳಿಸುವ ದೊಡ್ಡ ಹಗರಣವಾಗಿದೆ. ಇದರ ಲಿಂಕ್ ಇರುವ ಸಂದೇಶಗಳನ್ನು ಸಾಮಾನ್ಯವಾಗಿ ಸ್ಪ್ಯಾಮ್ ಮೆಸೇಜ್​ಗಳ ಮೂಲಕ ಹರಡಲಾಗುತ್ತದೆ.

ಇದನ್ನೂ ಓದಿ: ಅಕ್ಕ ಅಕ್ಕ ಎನ್ನುತ್ತಲೇ ದೀಪಿಕಾಳನ್ನು ಕೊಂದು ಬಿಟ್ನಾ ಯುವಕ? ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಶಿಕ್ಷಕಿ ಸಾವು

ಸಂದೇಶಗಳ ಜತೆ ಲಿಂಕ್ ಲಗತ್ತಿಸಿ ಅದನ್ನು ಕ್ಲಿಕ್ ಮಾಡುವಂತೆ ಸೂಚಿಸಿರಲಾಗುತ್ತದೆ. ಲಿಂಕ್ ಕ್ಲಿಕ್ ಮಾಡಿದರೆ ಬಳಕೆದಾರರನ್ನು ವೆಬ್‌ಸೈಟ್‌ಗೆ ಮರುನಿರ್ದೇಶಿಸಲಾಗುತ್ತದೆ. ಅಲ್ಲಿ ಅವರು ವಾಟ್ಸ್​​ಆ್ಯಪ್ ಪಿಂಕ್ ಅನ್ನು ಡೌನ್‌ಲೋಡ್ ಮಾಡಲು ಸೂಚಿಸಲಾಗುತ್ತದೆ. ಆದಾಗ್ಯೂ, ಹೊಸ ವೈಶಿಷ್ಟ್ಯಗಳು ಅಥವಾ ಥೀಮ್‌ಗಳನ್ನು ಸ್ವೀಕರಿಸುವ ಬದಲು, ಬಳಕೆದಾರರ ಮೊಬೈಲ್​ಗಳಲ್ಲಿ ಅವರ ಅರಿವಿಗೇ ಬಾರದಂತೆ ದುರುದ್ದೇಶಪೂರಿತ ಸಾಫ್ಟ್‌ವೇರ್ ಡೌನ್‌ಲೋಡ್ ಆಗುತ್ತದೆ. ಈ ಸಾಫ್ಟ್‌ವೇರ್ ಮೂಲಕ ದತ್ತಾಂಶಗಳಿಗೆ ಕನ್ನ ಹಾಕಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:20 am, Wed, 24 January 24

ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ