AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇನೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಮಹಾ ಮೋಸ; ನಕಲಿ ಸೇನಾ ಆಫೀಸರ್ ಅರೆಸ್ಟ್

ಸೇನೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚನೆ ಮಾಡುತ್ತಿದ್ದ ನಕಲಿ ಸೇನಾಧಿಕಾರಿಯನ್ನು ಬಂಧಿಸಿ ಜೈಲು ಕಂಬಿಗಳ ಹಿಂದೆ ಕಳುಹಿಸಿದ ಉತ್ತರ ಕನ್ನಡ ಪೊಲೀಸರು.

ಸೇನೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಮಹಾ ಮೋಸ; ನಕಲಿ ಸೇನಾ ಆಫೀಸರ್ ಅರೆಸ್ಟ್
ನಕಲಿ ಸೇನಾ ಆಫೀಸರ್ ಅರೆಸ್ಟ್
TV9 Web
| Edited By: Rakesh Nayak Manchi|

Updated on:Nov 04, 2022 | 1:21 PM

Share

ಕಾರವಾರ: ಸೇನೆ ಉನ್ನತ ಅಧಿಕಾರಿ ಎಂದು ಹೇಳಿಕೊಂಡು ಓಡಾಡುತ್ತಿದ್ದ ನಕಲಿ ಸೇನಾಧಿಕಾರಿಯನ್ನು ಕಾರವಾರ ಗ್ರಾಮೀಣ ಠಾಣಾ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಲೆಫ್ಟಿನೆಂಟ್ ಕರ್ನಲ್ ರ್ಯಾಂಕಿಂಗ್ ಯೂನಿಫಾರ್ಮ್ ಧರಿಸಿಕೊಂಡು ಓಡಾಡುತ್ತಿದ್ದ ಕಾರವಾರ ಸಿದ್ಧರ ನಿವಾಸಿ ವಿನಾಯಕ ಮಹಾಲೆ ಬಂಧಿತ ಆರೋಪಿಯಾಗಿದ್ದಾನೆ. ಸೇನೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಅನೇಕರಿಂದ ಹಣ ಪಡೆದು ವಂಚನೆ ಮಾಡಿದ ಹಿನ್ನೆಲೆ ಪೊಲೀಸರು ಬಂಧಿಸಿದ್ದಾರೆ.

ಸೇನಾ ಉನ್ನತಾಧಿಕಾರಿ ಸಮವಸ್ತ್ರ ಧರಿಸಿಕೊಂಡು ಪ್ರತೀ ದಿನ ಬೈಕ್‌ನಲ್ಲೇ ಕಾರವಾರ, ಸೌತ್ ಗೋವಾ ಓಡಾಡುತ್ತಿದ್ದ ವಿನಾಯಕ, ಓರ್ವನಿಂದ 66,000ರೂ., ಇನ್ನೊಬ್ಬರಿಂದ 35,000 ರೂ.ನಂತೆ ಹಲವರಿಂದ ಹಣ ಪಡೆದು ವಂಚನೆ ಮಾಡಿದ್ದಾನೆ. ತಮ್ಮ ಪುತ್ರನಿಗೆ ನೇವಿಯಲ್ಲಿ ಪಿಯೋನ್ ಕೆಲಸ ಕೊಡಿಸುವುದಾಗಿ ಹೇಳಿ ಕಡವಾಡ ಮಾರುತಿ ನಗರದ ಹೇಮಲತಾ ಎಂಬವರಿಂದಲೂ ಹಣ ಪಡೆದು ಮೋಸ ಮಾಡಿದ್ದಾನೆ. ಈ ಬಗ್ಗೆ ಹೇಮಲತಾ ಅವರು ಠಾಣೆಗೆ ದೂರು ನೀಡಿದ್ದರು.

ದೂರಿನ ಅನ್ವಯ ಕಳೆದ ಒಂದೆರಡು ವಾರಗಳಿಂದ ಈತನ ಮೇಲೆ ನಿಗಾಯಿರಿಸಿದ್ದ ನೇವಿ ಇಂಟೆಲಿಜೆನ್ಸ್ ಹಾಗೂ ಕಾರವಾರ ಪೊಲೀಸರು ಗ್ರೌಂಡ್ ವರ್ಕ್ ಮಾಡಿದಾಗ ಈತನ ಅಸಲೀಯತ್ತು ಬಯಲಾಗಿದೆ. ಅದರಂತೆ ನೇವಿ ಇಂಟೆಲಿಜೆನ್ಸ್ ಹಾಗೂ ಕಾರವಾರ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯ ಮನೆಯನ್ನು ಹುಡುಕಾಡಿದಾಗ ಪತ್ತೆಯಾದ 66,000ರೂ. ನಗದು ವಶಕ್ಕೆ ಪಡೆದಿದ್ದಾರೆ. ಸದ್ಯ ಬಂಧನಕ್ಕೊಳಗಾದ ವಿನಾಯಕನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಈ ಹಿಂದೆ ಆರೋಪಿ ಬೆಳಗಾವಿ ಕಮಾಂಡೋ ಟ್ರೈನಿಂಗ್ ಸ್ಕೂಲ್‌ನಲ್ಲಿ ಚಿಕ್ಕಪುಟ್ಟ ಕೆಲಸಕ್ಕೆ ಸೇರಿಕೊಂಡಿದ್ದ. ಮರಾಠಾ ಲೈಟ್ ಇನ್‌ಫೆಂಟ್ರಿ ವಿಭಾಗದಡಿ ಹೆಲ್ಪಿಂಗ್ ಬಾಯ್ ಆಗಿ ಸ್ವೀಪಿಂಗ್ ಮುಂತಾದ ಕೆಲಸ ಮಾಡುತ್ತಿದ್ದ. ಅದರಂತೆ ಅಧಿಕಾರಿಗಳ ರ್ಯಾಂಕಿಂಗ್, ಅವರ ಯೂನಿಫಾರ್ಮ್‌ಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದನು. ಬಳಿಕ ಆ ಕೆಲಸವನ್ನು ಬಿಟ್ಟು 2015-16ರ ವೇಳೆ ಆರ್ಮಿ ಆಫಿಸರ್ ಯೂನಿಫಾರ್ಮ್ ಖರೀದಿಸಿ 2020ರಿಂದ ಅಧಿಕಾರಿಯ ಹೆಸರು ಹೇಳಿ ಓಡಾಡಿಕೊಂಡಿದ್ದ. ಕಾರವಾರ ಹಾಗೂ ಗೋವಾ ಭಾಗದಲ್ಲಿ ಹಲವರಿಗೆ ಈತ ಮೋಸ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:21 pm, Fri, 4 November 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ