AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇನೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಮಹಾ ಮೋಸ; ನಕಲಿ ಸೇನಾ ಆಫೀಸರ್ ಅರೆಸ್ಟ್

ಸೇನೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚನೆ ಮಾಡುತ್ತಿದ್ದ ನಕಲಿ ಸೇನಾಧಿಕಾರಿಯನ್ನು ಬಂಧಿಸಿ ಜೈಲು ಕಂಬಿಗಳ ಹಿಂದೆ ಕಳುಹಿಸಿದ ಉತ್ತರ ಕನ್ನಡ ಪೊಲೀಸರು.

ಸೇನೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಮಹಾ ಮೋಸ; ನಕಲಿ ಸೇನಾ ಆಫೀಸರ್ ಅರೆಸ್ಟ್
ನಕಲಿ ಸೇನಾ ಆಫೀಸರ್ ಅರೆಸ್ಟ್
TV9 Web
| Edited By: |

Updated on:Nov 04, 2022 | 1:21 PM

Share

ಕಾರವಾರ: ಸೇನೆ ಉನ್ನತ ಅಧಿಕಾರಿ ಎಂದು ಹೇಳಿಕೊಂಡು ಓಡಾಡುತ್ತಿದ್ದ ನಕಲಿ ಸೇನಾಧಿಕಾರಿಯನ್ನು ಕಾರವಾರ ಗ್ರಾಮೀಣ ಠಾಣಾ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಲೆಫ್ಟಿನೆಂಟ್ ಕರ್ನಲ್ ರ್ಯಾಂಕಿಂಗ್ ಯೂನಿಫಾರ್ಮ್ ಧರಿಸಿಕೊಂಡು ಓಡಾಡುತ್ತಿದ್ದ ಕಾರವಾರ ಸಿದ್ಧರ ನಿವಾಸಿ ವಿನಾಯಕ ಮಹಾಲೆ ಬಂಧಿತ ಆರೋಪಿಯಾಗಿದ್ದಾನೆ. ಸೇನೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಅನೇಕರಿಂದ ಹಣ ಪಡೆದು ವಂಚನೆ ಮಾಡಿದ ಹಿನ್ನೆಲೆ ಪೊಲೀಸರು ಬಂಧಿಸಿದ್ದಾರೆ.

ಸೇನಾ ಉನ್ನತಾಧಿಕಾರಿ ಸಮವಸ್ತ್ರ ಧರಿಸಿಕೊಂಡು ಪ್ರತೀ ದಿನ ಬೈಕ್‌ನಲ್ಲೇ ಕಾರವಾರ, ಸೌತ್ ಗೋವಾ ಓಡಾಡುತ್ತಿದ್ದ ವಿನಾಯಕ, ಓರ್ವನಿಂದ 66,000ರೂ., ಇನ್ನೊಬ್ಬರಿಂದ 35,000 ರೂ.ನಂತೆ ಹಲವರಿಂದ ಹಣ ಪಡೆದು ವಂಚನೆ ಮಾಡಿದ್ದಾನೆ. ತಮ್ಮ ಪುತ್ರನಿಗೆ ನೇವಿಯಲ್ಲಿ ಪಿಯೋನ್ ಕೆಲಸ ಕೊಡಿಸುವುದಾಗಿ ಹೇಳಿ ಕಡವಾಡ ಮಾರುತಿ ನಗರದ ಹೇಮಲತಾ ಎಂಬವರಿಂದಲೂ ಹಣ ಪಡೆದು ಮೋಸ ಮಾಡಿದ್ದಾನೆ. ಈ ಬಗ್ಗೆ ಹೇಮಲತಾ ಅವರು ಠಾಣೆಗೆ ದೂರು ನೀಡಿದ್ದರು.

ದೂರಿನ ಅನ್ವಯ ಕಳೆದ ಒಂದೆರಡು ವಾರಗಳಿಂದ ಈತನ ಮೇಲೆ ನಿಗಾಯಿರಿಸಿದ್ದ ನೇವಿ ಇಂಟೆಲಿಜೆನ್ಸ್ ಹಾಗೂ ಕಾರವಾರ ಪೊಲೀಸರು ಗ್ರೌಂಡ್ ವರ್ಕ್ ಮಾಡಿದಾಗ ಈತನ ಅಸಲೀಯತ್ತು ಬಯಲಾಗಿದೆ. ಅದರಂತೆ ನೇವಿ ಇಂಟೆಲಿಜೆನ್ಸ್ ಹಾಗೂ ಕಾರವಾರ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯ ಮನೆಯನ್ನು ಹುಡುಕಾಡಿದಾಗ ಪತ್ತೆಯಾದ 66,000ರೂ. ನಗದು ವಶಕ್ಕೆ ಪಡೆದಿದ್ದಾರೆ. ಸದ್ಯ ಬಂಧನಕ್ಕೊಳಗಾದ ವಿನಾಯಕನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಈ ಹಿಂದೆ ಆರೋಪಿ ಬೆಳಗಾವಿ ಕಮಾಂಡೋ ಟ್ರೈನಿಂಗ್ ಸ್ಕೂಲ್‌ನಲ್ಲಿ ಚಿಕ್ಕಪುಟ್ಟ ಕೆಲಸಕ್ಕೆ ಸೇರಿಕೊಂಡಿದ್ದ. ಮರಾಠಾ ಲೈಟ್ ಇನ್‌ಫೆಂಟ್ರಿ ವಿಭಾಗದಡಿ ಹೆಲ್ಪಿಂಗ್ ಬಾಯ್ ಆಗಿ ಸ್ವೀಪಿಂಗ್ ಮುಂತಾದ ಕೆಲಸ ಮಾಡುತ್ತಿದ್ದ. ಅದರಂತೆ ಅಧಿಕಾರಿಗಳ ರ್ಯಾಂಕಿಂಗ್, ಅವರ ಯೂನಿಫಾರ್ಮ್‌ಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದನು. ಬಳಿಕ ಆ ಕೆಲಸವನ್ನು ಬಿಟ್ಟು 2015-16ರ ವೇಳೆ ಆರ್ಮಿ ಆಫಿಸರ್ ಯೂನಿಫಾರ್ಮ್ ಖರೀದಿಸಿ 2020ರಿಂದ ಅಧಿಕಾರಿಯ ಹೆಸರು ಹೇಳಿ ಓಡಾಡಿಕೊಂಡಿದ್ದ. ಕಾರವಾರ ಹಾಗೂ ಗೋವಾ ಭಾಗದಲ್ಲಿ ಹಲವರಿಗೆ ಈತ ಮೋಸ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:21 pm, Fri, 4 November 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ