AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇನೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಮಹಾ ಮೋಸ; ನಕಲಿ ಸೇನಾ ಆಫೀಸರ್ ಅರೆಸ್ಟ್

ಸೇನೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚನೆ ಮಾಡುತ್ತಿದ್ದ ನಕಲಿ ಸೇನಾಧಿಕಾರಿಯನ್ನು ಬಂಧಿಸಿ ಜೈಲು ಕಂಬಿಗಳ ಹಿಂದೆ ಕಳುಹಿಸಿದ ಉತ್ತರ ಕನ್ನಡ ಪೊಲೀಸರು.

ಸೇನೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಮಹಾ ಮೋಸ; ನಕಲಿ ಸೇನಾ ಆಫೀಸರ್ ಅರೆಸ್ಟ್
ನಕಲಿ ಸೇನಾ ಆಫೀಸರ್ ಅರೆಸ್ಟ್
Follow us
TV9 Web
| Updated By: Rakesh Nayak Manchi

Updated on:Nov 04, 2022 | 1:21 PM

ಕಾರವಾರ: ಸೇನೆ ಉನ್ನತ ಅಧಿಕಾರಿ ಎಂದು ಹೇಳಿಕೊಂಡು ಓಡಾಡುತ್ತಿದ್ದ ನಕಲಿ ಸೇನಾಧಿಕಾರಿಯನ್ನು ಕಾರವಾರ ಗ್ರಾಮೀಣ ಠಾಣಾ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಲೆಫ್ಟಿನೆಂಟ್ ಕರ್ನಲ್ ರ್ಯಾಂಕಿಂಗ್ ಯೂನಿಫಾರ್ಮ್ ಧರಿಸಿಕೊಂಡು ಓಡಾಡುತ್ತಿದ್ದ ಕಾರವಾರ ಸಿದ್ಧರ ನಿವಾಸಿ ವಿನಾಯಕ ಮಹಾಲೆ ಬಂಧಿತ ಆರೋಪಿಯಾಗಿದ್ದಾನೆ. ಸೇನೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಅನೇಕರಿಂದ ಹಣ ಪಡೆದು ವಂಚನೆ ಮಾಡಿದ ಹಿನ್ನೆಲೆ ಪೊಲೀಸರು ಬಂಧಿಸಿದ್ದಾರೆ.

ಸೇನಾ ಉನ್ನತಾಧಿಕಾರಿ ಸಮವಸ್ತ್ರ ಧರಿಸಿಕೊಂಡು ಪ್ರತೀ ದಿನ ಬೈಕ್‌ನಲ್ಲೇ ಕಾರವಾರ, ಸೌತ್ ಗೋವಾ ಓಡಾಡುತ್ತಿದ್ದ ವಿನಾಯಕ, ಓರ್ವನಿಂದ 66,000ರೂ., ಇನ್ನೊಬ್ಬರಿಂದ 35,000 ರೂ.ನಂತೆ ಹಲವರಿಂದ ಹಣ ಪಡೆದು ವಂಚನೆ ಮಾಡಿದ್ದಾನೆ. ತಮ್ಮ ಪುತ್ರನಿಗೆ ನೇವಿಯಲ್ಲಿ ಪಿಯೋನ್ ಕೆಲಸ ಕೊಡಿಸುವುದಾಗಿ ಹೇಳಿ ಕಡವಾಡ ಮಾರುತಿ ನಗರದ ಹೇಮಲತಾ ಎಂಬವರಿಂದಲೂ ಹಣ ಪಡೆದು ಮೋಸ ಮಾಡಿದ್ದಾನೆ. ಈ ಬಗ್ಗೆ ಹೇಮಲತಾ ಅವರು ಠಾಣೆಗೆ ದೂರು ನೀಡಿದ್ದರು.

ದೂರಿನ ಅನ್ವಯ ಕಳೆದ ಒಂದೆರಡು ವಾರಗಳಿಂದ ಈತನ ಮೇಲೆ ನಿಗಾಯಿರಿಸಿದ್ದ ನೇವಿ ಇಂಟೆಲಿಜೆನ್ಸ್ ಹಾಗೂ ಕಾರವಾರ ಪೊಲೀಸರು ಗ್ರೌಂಡ್ ವರ್ಕ್ ಮಾಡಿದಾಗ ಈತನ ಅಸಲೀಯತ್ತು ಬಯಲಾಗಿದೆ. ಅದರಂತೆ ನೇವಿ ಇಂಟೆಲಿಜೆನ್ಸ್ ಹಾಗೂ ಕಾರವಾರ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯ ಮನೆಯನ್ನು ಹುಡುಕಾಡಿದಾಗ ಪತ್ತೆಯಾದ 66,000ರೂ. ನಗದು ವಶಕ್ಕೆ ಪಡೆದಿದ್ದಾರೆ. ಸದ್ಯ ಬಂಧನಕ್ಕೊಳಗಾದ ವಿನಾಯಕನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಈ ಹಿಂದೆ ಆರೋಪಿ ಬೆಳಗಾವಿ ಕಮಾಂಡೋ ಟ್ರೈನಿಂಗ್ ಸ್ಕೂಲ್‌ನಲ್ಲಿ ಚಿಕ್ಕಪುಟ್ಟ ಕೆಲಸಕ್ಕೆ ಸೇರಿಕೊಂಡಿದ್ದ. ಮರಾಠಾ ಲೈಟ್ ಇನ್‌ಫೆಂಟ್ರಿ ವಿಭಾಗದಡಿ ಹೆಲ್ಪಿಂಗ್ ಬಾಯ್ ಆಗಿ ಸ್ವೀಪಿಂಗ್ ಮುಂತಾದ ಕೆಲಸ ಮಾಡುತ್ತಿದ್ದ. ಅದರಂತೆ ಅಧಿಕಾರಿಗಳ ರ್ಯಾಂಕಿಂಗ್, ಅವರ ಯೂನಿಫಾರ್ಮ್‌ಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದನು. ಬಳಿಕ ಆ ಕೆಲಸವನ್ನು ಬಿಟ್ಟು 2015-16ರ ವೇಳೆ ಆರ್ಮಿ ಆಫಿಸರ್ ಯೂನಿಫಾರ್ಮ್ ಖರೀದಿಸಿ 2020ರಿಂದ ಅಧಿಕಾರಿಯ ಹೆಸರು ಹೇಳಿ ಓಡಾಡಿಕೊಂಡಿದ್ದ. ಕಾರವಾರ ಹಾಗೂ ಗೋವಾ ಭಾಗದಲ್ಲಿ ಹಲವರಿಗೆ ಈತ ಮೋಸ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:21 pm, Fri, 4 November 22

ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ