AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karwar Murder: ಕೊಲೆಗೂ ಮುನ್ನ ನಡೆದ ಗಲಾಟೆ ಆಡಿಯೋ ಬಹಿರಂಗ, ಮಕ್ಕಳು ಬದುಕುಳಿದಿದ್ದು ಹೇಗೆ? ಇಲ್ಲಿದೆ ನೋಡಿ

ಒಂದೇ ಕುಟುಂಬದ ನಾಲ್ವಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಯಾದ ರಾಜು ಭಟ್ ಮತ್ತು ಕುಸುಮಾ ಭಟ್ ದಂಪತಿಗೆ ಶರಧಿ ಮತ್ತು ಶರ್ವ ಎಂಬ ಇಬ್ಬರು ಮಕ್ಕಳಿದ್ದಾರೆ. ಈ ಮಕ್ಕಳು ಕೊಲೆಯಿಂದ ಪಾರಾಗಿದ್ದು, ಅವರ ಜೀವಕ್ಕೂ ಅಪಾಯ ಇದ್ದು, ಸೂಕ್ತ ಪೊಲೀಸ್​ ಭದ್ರತೆ ನೀಡಿ ಕೊಲೆಯಾದ ಕುಸುಮಾ ಸಹೋದರಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Karwar Murder: ಕೊಲೆಗೂ ಮುನ್ನ ನಡೆದ ಗಲಾಟೆ ಆಡಿಯೋ ಬಹಿರಂಗ, ಮಕ್ಕಳು ಬದುಕುಳಿದಿದ್ದು ಹೇಗೆ? ಇಲ್ಲಿದೆ ನೋಡಿ
ಭಟ್ಕಳ ಪೊಲೀಸ್​ ಠಾಣೆ
ವಿವೇಕ ಬಿರಾದಾರ
|

Updated on:Feb 25, 2023 | 3:06 PM

Share

ಕಾರವಾರ: ಒಂದೇ ಕುಟುಂಬದ ನಾಲ್ವಾರು ಕೊಲೆ ಪ್ರಕರಣಕ್ಕೆ (Murder Case) ಸಂಬಂಧಿಸಿದಂತೆ ಕೊಲೆಯಾದ ರಾಜು ಭಟ್ ಮತ್ತು ಕುಸುಮಾ ಭಟ್ ದಂಪತಿಗೆ ಶರಧಿ ಮತ್ತು ಶರ್ವ ಎಂಬ ಇಬ್ಬರು ಮಕ್ಕಳಿದ್ದಾರೆ. ಈ ಮಕ್ಕಳು ಕೊಲೆಯಿಂದ ಪಾರಾಗಿದ್ದು, ಅವರ ಜೀವಕ್ಕೂ ಅಪಾಯ ಇದ್ದು, ಸೂಕ್ತ ಪೊಲೀಸ್​ ಭದ್ರತೆ ನೀಡಿ ಎಂದು ಕೊಲೆಯಾದ ಕುಸುಮಾ ಸಹೋದರಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇನ್ನು ಈ ಮಕ್ಕಳು ಕೊಲೆಯಿಂದ ಪಾರಾಗಿದ್ದೇ ರೋಚಕವಾಗಿದೆ.

ಕೊಲೆಯಿಂದ ಪಾರಾದ ಮಕ್ಕಳು

ಕೊಲೆ ನಡೆದ ದಿನ ಶರಧಿ ಶಾಲೆಗೆ ಹೋಗಿ ಮನೆ ಕಡೆ ಬರುತ್ತಿದ್ದಳು. ಇತ್ತ ಶರಧಿ ಮನೆಯಲ್ಲಿ ಗಲಾಟೆ ನಡೆಯುತ್ತಿರುವ ಹಿನ್ನೆಲೆ ಸ್ಥಳೀಯರು ಆಕೆಯನ್ನು ಕರೆದುಕೊಂಡು ಹೋಗಿ ಸಂಬಂಧಿಕರ ಮನೆಗೆ ಬಿಟ್ಟಿದ್ದಾರೆ. ಇನ್ನು ಶರ್ವನಿಗೆ ಕಾಲಿಗೆ ಗಾಯವಾದ ಹಿನ್ನೆಲೆ ಮನೆಯಲ್ಲಿ ಮಲಗಿದ್ದಾನೆ. ಗಲಾಟೆ ನಡೆದ ಪರಿವೇ ಇರಲಿಲ್ಲ. ಸಾಯಂಕಾಲ ಕೊಲೆಯಾದ ನಂತರ, ಎಚ್ಚರವಾಗಿ ಮನೆ ಹೊರಗೆ ಬಂದು ನೋಡಿದಾಗ ಅಪ್ಪ ಮತ್ತು ಅಮ್ಮ ಹೆಣವಾಗಿ ಬಿದ್ದಿದ್ದರು. ಇದನ್ನು ಕಂಡ ಶರ್ವ ಗಾಭರಿಗೊಂಡಿದ್ದು, ನಂತರ ಈತನನ್ನು ಕಂಡ ಸ್ಥಳೀಯರೊಬ್ಬರು ಕರೆದುಕೊಂಡು ಹೋಗಿ ಸಂಬಂಧಿಕರ ಮನೆಗೆ ಬಿಟ್ಟಿದ್ದಾರೆ‌ ಎಂದು ಕೊಲೆಯಾದ ಕುಸುಮಾ ಸಹೋದರಿ ಟಿವಿ9ಗೆ ಹೇಳಿದ್ದಾರೆ.

ಕೊಲೆಗೂ ಮುನ್ನ ಗಲಾಟೆಯ ಆಡಿಯೋ ಟಿವಿ9ಗೆ ಲಭ್ಯ

ಪ್ರಕರಣ ಆಡಿಯೋವೊಂದು ಟಿವಿ9ಗೆ ಲಭ್ಯವಾಗಿದೆ. ಆಡಿಯೋ ಪ್ರಕಾರ ಮೃತ ಶ್ರೀಧರ ಭಟ್​ನ ಪತ್ನಿ ವಿದ್ಯಾಭಟ್​ಗೆ ಜೀವನಾಂಶ ಕೊಡುವ ವಿಚಾರವಾಗಿ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿರುವ ಶಂಕೆ ವ್ಯಕ್ತವಾಗಿದೆ. ಜೀವನಾಂಶವಾಗಿ ವಿದ್ಯಾ ಭಟ್​​ಗೆ ಜಮೀನು ನೀಡಿ ಎಂದು ಗಂಡನ ಮನೆಯವರಿಗೆ, ವಿದ್ಯಾ ಪರ ವಕಾಲತ್ತು ವಹಸಿಕೊಂಡು ಇಬ್ಬರು ಅಪರಿಚಿತರು ಬಂದಿದ್ದಾರೆ. ವಕಾಲತ್ತು ವಹಿಸಿಕೊಂಡು ಬಂದವರು, ವಿದ್ಯಾ ಭಟ್ ಮತ್ತು ಆಕೆಯ ಎರಡು ಮಕ್ಕಳು, ಜೀವನ ನಡೆಸಲು ಜಮೀನು ನೀಡಿ ಎಂದು ಬೇಡಿಕೆ ಇಟ್ಟಿದ್ದಾರೆ.

ಇದಕ್ಕೆ ವಿಧ್ಯಾ ಭಟ್​ ಮನೆಯವರು ನೀಡಲು ಒಪ್ಪದಿದ್ದಾಗ ಮಾತಿಗೆ ಮಾತು ಬೆಳೆದು ಗಲಾಟೆ ಶುರುವಾಗಿದೆ. ಗಲಾಟೆ ಮಧ್ಯೆ ರಾಜೀವ್ ಭಟ್​ಗೆ ಪ್ರಾಣ ಬೆದರಿಕೆ ಒಡ್ಡಿರುವುದು ಕೂಡ ಕೇಳಿಬಂದಿದೆ. ಇಲ್ಲಿ ವಿದ್ಯಾ ಭಟ್​ ಪರ ವಕಾಲತ್ತು ವಹಿಸಿದವರು ಪ್ರಾಣ ತೆಗೆದು ಕಾರಿನ ಡಿಕ್ಕಿಯಲ್ಲಿ ತುಂಬಿಕೊಂಡು ಹೋಗುತ್ತೇವೆ ಎಂದು ಹೇಳಿದ್ದಾರೆ. ಜೊತೆಗೆ ಅವಾಚ್ಯ ಶಬ್ಧಗಳಿಂದ ಬೈದಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:48 pm, Sat, 25 February 23

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ