AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಬ್ಬಿ ಸಮುದ್ರದಲ್ಲಿ ಮುಳಗುವ ಹಂತದಲ್ಲಿದ್ದ ಯಾಂತ್ರಿಕ ದೋಣಿ ರಕ್ಷಣೆ: 7 ಮೀನುಗಾರರು ಸುರಕ್ಷಿತ

ಗೋವಾದ ಕಾಣಕೋಣ ಸಮೀಪದಲ್ಲಿ ಮೀನುಗಾರಿಕಾ ಬೋಟ್ ಅವಘಡ ಸಂಭವಿಸಿದ್ದು, ಮುಳಗುವ ಹಂತದಲ್ಲಿದ್ದ ಯಾಂತ್ರಿಕ ದೋಣಿಯನ್ನು ಮೀನುಗಾರರು ರಕ್ಷಣೆ ಮಾಡಿದ್ದಾರೆ. 25 ನಾಟಿಕಲ್ ಮೈಲು ದೂರದ ಅರಬ್ಬಿ ಸಮುದ್ರದಲ್ಲಿ ಘಟನೆ ನಡೆದಿದೆ. ಬೋಟ್​ನಲ್ಲಿದ್ದ ಎಲ್ಲ 7 ಮೀನುಗಾರರು ಸುರಕ್ಷಿತರಾಗಿದ್ದಾರೆ.

ಅರಬ್ಬಿ ಸಮುದ್ರದಲ್ಲಿ ಮುಳಗುವ ಹಂತದಲ್ಲಿದ್ದ ಯಾಂತ್ರಿಕ ದೋಣಿ ರಕ್ಷಣೆ: 7 ಮೀನುಗಾರರು ಸುರಕ್ಷಿತ
ಯಾಂತ್ರಿಕ ದೋಣಿ ರಕ್ಷಣೆ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Jan 17, 2024 | 5:44 PM

Share

ಕಾರವಾರ, ಜನವರಿ 17: ಗೋವಾದ ಕಾಣಕೋಣ ಸಮೀಪದಲ್ಲಿ ಮೀನುಗಾರಿಕಾ ಬೋಟ್ ಅವಘಡ ಸಂಭವಿಸಿದ್ದು, ಮುಳಗುವ ಹಂತದಲ್ಲಿದ್ದ ಯಾಂತ್ರಿಕ ದೋಣಿ (boat) ಯನ್ನು ಮೀನುಗಾರರು ರಕ್ಷಣೆ ಮಾಡಿದ್ದಾರೆ. 25 ನಾಟಿಕಲ್ ಮೈಲು ದೂರದ ಅರಬ್ಬಿ ಸಮುದ್ರದಲ್ಲಿ ಘಟನೆ ನಡೆದಿದೆ. ಮಂಗಳೂರು ಮೂಲದ ರಾಯಲ್ ಬ್ಲೂ ಹೆಸರಿನ ಬೋಟ್ ಮುಳುಗುವ ಹಂತದಲ್ಲಿದ್ದು, ಬೋಟ್​ನಲ್ಲಿದ್ದ ಎಲ್ಲ 7 ಮೀನುಗಾರರು ಸುರಕ್ಷಿತರಾಗಿದ್ದಾರೆ. ಕೋಸ್ಟ್ ಗಾರ್ಡ್, ಕರಾವಳಿ ಕಾವಲು ಪಡೆ ಸಹಾಯ ಮೂಲಕ 6 ಬೋಟ್‌ಗಳ ಸಹಾಯದಿಂದ ಸುರಕ್ಷಿತವಾಗಿ ಮೀನುಗಾರರು ಕಾರವಾರ ಬಂದರಿಗೆ ತಲುಪಿದ್ದಾರೆ.

ಕಚೇರಿ ಹಿಂಭಾಗದಲ್ಲಿ‌ ಕಂಡು ಬಂದ ಬೆಂಕಿ

ಕೋಲಾರ: ಜಿಲ್ಲಾಧಿಕಾರಿ ಕಚೇರಿ ಹಿಂಭಾಗದಲ್ಲಿ‌ ಕಸದ ರಾಶಿ ಹಾಗೂ ಹುಲ್ಲಿಗೆ ಬೆಂಕಿ ಹೊತ್ತಿಕೊಂಡಿದೆ. ಧಗ ಧಗನೆ ಹೊತ್ತಿ ಉರಿದಿದೆ. ಬಿಸಿಲ ಬೇಗೆ ಮಧ್ಯೆ ಬೆಂಕಿ ಹೊತ್ತಿ ಉರಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಆಕಸ್ಮಿಕ ಬೆಂಕಿ: ಆರು ಹುಲ್ಲಿನ ಬಣಿವೆ ಮತ್ತು ಒಂದು ಗುಡಿಸಲು ಸುಟ್ಟು ಭಸ್ಮ

ಬಳ್ಳಾರಿ: ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಆರು ಹುಲ್ಲಿನ ಬಣಿವೆ ಮತ್ತು ಒಂದು ಗುಡಿಸಲು ಸುಟ್ಟು ಭಸ್ಮವಾಗಿರುವಂತಹ ಘಟನೆ ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮದಲ್ಲಿ ನಡೆದಿದೆ. ಸಿಂದವಾಳ ಮಲ್ಲಪ್ಪ, ಮಾರೆಮ್ಮ, ಗಾದಿಲಿಂಗಪ್ಪ, ಕರಿಮಲೆ ಕರೆಪ್ಪ, ತಿಪ್ಪಯ್ಯ, ಬಮಡಿವಾಳರ ಮೂಕಯ್ಯ, ಅಗಸರ ಗೂಳಮ್ಮ ಎಂಬುವವರಿಗೆ ಬಣವೆಗಳು ಸೇರಿದ್ದು, ಲಕ್ಷ್ಮಿ ಎನ್ನುವರ ಗುಡಿಸಲು ಸುಟ್ಟು ಭಸ್ಮವಾಗಿದೆ.

ಇದನ್ನೂ ಓದಿ: ಹಗಲು ಹೊತ್ತಲ್ಲೇ ಮಹಿಳೆಯ ಕೈ ಕಾಲು ಕಟ್ಟಿ ಹಾಕಿ ದರೋಡೆ; ಐವರು ಆರೋಪಿಗಳು ಅರೆಸ್ಟ್

5 ಲಕ್ಷ ರೂ. ಹೆಚ್ಚು ಮೌಲ್ಯದ ಹುಲ್ಲಿನ ಬಣಿವೆ ನಷ್ಟವಾಗಿದೆ. ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸಲಾಗಿದೆ. ಹೀಗಾಗಿ ಹೆಚ್ಚಿನ ಅನಾಹುತ ತಪ್ಪಿದೆ. ತಹಶಿಲ್ದಾರ ರಾಘವೇಂದ್ರ ರಾವ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

ಬೈಕ್‌ನಲ್ಲಿ ಕರ್ತವ್ಯಕ್ಕೆ ತೆರಳುವಾಗ ಆಟೋ ಡಿಕ್ಕಿ: ಕಾನ್ಸ್‌ಟೇಬಲ್‌ಗೆ ಗಾಯ

ನೆಲಮಂಗಲ: ಬೈಕ್‌ನಲ್ಲಿ ಕರ್ತವ್ಯಕ್ಕೆ ತೆರಳುವಾಗ ಆಟೋ ಡಿಕ್ಕಿ ಹೊಡೆದ ಪರಿಣಾಮ ಕಾನ್ಸ್‌ಟೇಬಲ್‌ಗೆ ಗಾಯವಾಗಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಜಿಂದಾಲ್ ಬಳಿ ಅಪಘಾತ ಸಂಭವಿಸಿದೆ. ಆಟೋ ನಿಲ್ಲಿಸದೆ ಚಾಲಕ ಕಿರಣ್‌ ಪರಾರಿಯಾಗಲು ಯತ್ನಿಸಿದ್ದಾನೆ.

ಇದನ್ನೂ ಓದಿ: ಪ್ರೇಯಸಿಗೆ ಚಾಕು ಇರಿದ ಭಗ್ನ ಪ್ರೇಮಿ, ಚಾಕು ಇರಿದವನಿಗೆ ಧರ್ಮದೇಟು… ಇಬ್ಬರೂ ಆಸ್ಪತ್ರೆ ಪಾಲು

ಹಿಂಬಾಲಿಸಿ ಆಟೋವನ್ನು ಹಿಡಿದಿದ್ದಕ್ಕೆ ಚಾಲಕ ಹಾಗೂ ಪತ್ನಿ ನೆಲಮಂಗಲ ಸಂಚಾರಿ ಠಾಣೆ ಕಾನ್ಸ್‌ಟೇಬಲ್‌ ಮಂಜುನಾಥ್ ಜೊತೆ ಗಲಾಟೆ ಮಾಡಿದ್ದಾರೆ. ರಂಪಾಟ ಮಾಡುತ್ತಿದ್ದ ಆಟೋ ಚಾಲಕ ಕಿರಣ್‌, ಪತ್ನಿ ಪೊಲೀಸರು ವಶಕ್ಕೆ ಪಡೆದಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ