AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala: ಕೇರಳದಲ್ಲಿ ಮಗುವಿನ ಬಲಿ ನೀಡಲು ಪ್ರಯತ್ನ, ಮಹಿಳಾ ವಾಮಾಚಾರಿಯ ಬಂಧನ

ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಮಕ್ಕಳನ್ನು ಬಳಸಿಕೊಂಡು ಅತೀಂದ್ರಿಯ ಅಭ್ಯಾಸ ನಡೆಸುತ್ತಿರುವ ಪ್ರಕರಣ ವರದಿಯಾಗಿದೆ. ಮಹಿಳಾ ವಾಮಾಚಾರಿಯೊಬ್ಬಳು ಮಗುವನ್ನು ಅತೀಂದ್ರಿಯ ಆಚರಣೆಗೆ ಬಳಸುತ್ತಿದ್ದಾಗ ಮಗುವೊಂದು ಪ್ರಜ್ಞೆ ತಪ್ಪಿ ಬಿದ್ದಿರುವುದಾಗಿ ಎಂದು ವರದಿಯಾಗಿದೆ.

Kerala: ಕೇರಳದಲ್ಲಿ ಮಗುವಿನ ಬಲಿ ನೀಡಲು ಪ್ರಯತ್ನ, ಮಹಿಳಾ ವಾಮಾಚಾರಿಯ ಬಂಧನ
Kerala Black Magic Case: Kerala woman detained for running black magic centre akp
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Oct 13, 2022 | 4:20 PM

Share

ಪತ್ತನಂತಿಟ್: ಕೇರಳದಲ್ಲಿ ಇತ್ತಿಚೇಗೆ ನರಬಲಿ ನೀಡಿದ ಘಟನೆ ಭಾರೀ ವಿವಾದ ಸೃಷ್ಟಿ ಮಾಡಿತ್ತು. ಇದೀಗ ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಮಕ್ಕಳನ್ನು ಬಳಸಿಕೊಂಡು ಅತೀಂದ್ರಿಯ ಅಭ್ಯಾಸ ನಡೆಸುತ್ತಿರುವ ಪ್ರಕರಣ ವರದಿಯಾಗಿದೆ. ಮಹಿಳಾ ವಾಮಾಚಾರಿಯೊಬ್ಬಳು ಮಗುವನ್ನು ಅತೀಂದ್ರಿಯ ಆಚರಣೆಗೆ ಬಳಸುತ್ತಿದ್ದಾಗ ಮಗುವೊಂದು ಪ್ರಜ್ಞೆ ತಪ್ಪಿ ಬಿದ್ದಿರುವುದಾಗಿ ಎಂದು ವರದಿಯಾಗಿದೆ. ಇದೀಗ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೇರಳದ ಕೊಚ್ಚಿಯಲ್ಲಿ ಮೂಢನಂಬಿಕೆ ಆಚರಣೆಯಿಂದ ಇಬ್ಬರು ಮಹಿಳೆಯರ ನರಬಲಿಯನ್ನು ನೀಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಈ ಘಟನೆ ನಡೆದು 1 ವಾರಗಳು ಕೂಡ ಕಳೆದಿಲ್ಲ ಇದೀಗ ಇಂತಹದೇ ಒಂದು ಕೃತ್ಯಕ್ಕೆ ಪ್ರಯತ್ನ ನಡೆದಿದೆ.

ಈ ಪ್ರಕರಣದಲ್ಲಿ ಶೋಬನಾ ಅಲಿಯಾಸ್ ವಸಂತಿ ಎಂದು ಗುರುತಿಸಲಾದ ಮಹಿಳೆ ಕೇರಳದ ಪತ್ತನಂತಿಟ್ಟ ಜಿಲ್ಲೆಯ ಮಲಯಾಲಪುಳ ಪಟ್ಟಣದಲ್ಲಿ ಅತೀಂದ್ರಿಯ ಅಭ್ಯಾಸದಲ್ಲಿ ತೊಡಗಿದ್ದಳು. ಆಚರಣೆಯಲ್ಲಿ ತೊಡಗಿದ್ದ ಮಗುವೊಂದು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದೆ ಎಂದು ವರದಿಯಾಗಿದೆ.

ಈ ಬಗ್ಗೆ ಇಲ್ಲಿ ನಿವಾಸಿಗಳು ಅನೇಕ ಬಾರಿ ದೂರು ನೀಡಿದ್ದಾರೆ ಅದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ದೂರು ನೀಡಿದರೂ ಮಲಯಾಳಪುಳ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ನಿವಾಸಿಗಳು ಪ್ರತಿಭಟನೆ ನಡೆಸಿದರು.

ಆ ಮಹಿಳೆಯನ್ನು ಬಂಧಿಸುವವರೆಗೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಪ್ರತಿಭಟನಾಕಾರರು ಹೇಳಿದರು. ನಿವಾಸಿಗಳ ಪ್ರಕಾರ, ಯಾರಾದರೂ ಅವಳನ್ನು ವಿರೋಧಿಸಿದರೆ ಅವರನ್ನು ಶಪಿಸುವುದಾಗಿ ತಾಂತ್ರಿಕ ಬೆದರಿಕೆ ಹಾಕಿದರು.

ಇದನ್ನು ಓದಿ: ನರಬಲಿ ಪ್ರಕರಣದ ಪ್ರಮುಖ ಆರೋಪಿ ಶಾಫಿ ವಿಕೃತ ಕಾಮಿ, ಕ್ರೌರ್ಯವೆಸಗಿ ಸಂತೋಷಪಡುತ್ತಿದ್ದ ಮನೋರೋಗಿ

ಸ್ಥಳೀಯರ ಪ್ರತಿಭಟನೆಯ ನಂತರ, ಉಪ ಪೊಲೀಸ್ ಅಧೀಕ್ಷಕರ ಆದೇಶದ ಮೇರೆಗೆ ಪತ್ತನಂತಿಟ್ಟ ಪೊಲೀಸರು ಮಹಿಳೆ ಶೋಬನಾ ಅಲಿಯಾಸ್ ವಸಂತಿ ಅವರನ್ನು ವಶಕ್ಕೆ ತೆಗೆದುಕೊಂಡರು. ಆಕೆಯನ್ನು ವಿಚಾರಣೆಗೊಳಪಡಿಸಿದ ಬಳಿಕವಷ್ಟೇ ಆಕೆಯ ಮೇಲಿನ ಆರೋಪವನ್ನು ಖಚಿತಪಡಿಸಲು ಸಾಧ್ಯ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಚ್ಚಿ ಜಿಲ್ಲೆಯಲ್ಲಿ ನರಬಲಿಯ ಭಯಾನಕ ಪ್ರಕರಣ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಸುಳ್ಳು ನೆಪದಲ್ಲಿ ಮನೆಗೆ ಕರೆದೊಯ್ದು ಅಲ್ಲಿ ಧಾರ್ಮಿಕ ಕ್ರಿಯೆಯಲ್ಲಿ ಕೊಲ್ಲಲಾಯಿತು. ಮಹಿಳೆಯ ಹತ್ಯೆಗೆ ಸಹಾಯ ಮಾಡಿದ ವ್ಯಕ್ತಿ , ಆತನ ಪತ್ನಿ ಹಾಗೂ ದಲ್ಲಾಳಿ ಸೇರಿ ಮೂವರನ್ನು ಬಂಧಿಸಲಾಗಿದೆ.

Published On - 4:20 pm, Thu, 13 October 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!