AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala: ಕೇರಳದಲ್ಲಿ ಮಗುವಿನ ಬಲಿ ನೀಡಲು ಪ್ರಯತ್ನ, ಮಹಿಳಾ ವಾಮಾಚಾರಿಯ ಬಂಧನ

ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಮಕ್ಕಳನ್ನು ಬಳಸಿಕೊಂಡು ಅತೀಂದ್ರಿಯ ಅಭ್ಯಾಸ ನಡೆಸುತ್ತಿರುವ ಪ್ರಕರಣ ವರದಿಯಾಗಿದೆ. ಮಹಿಳಾ ವಾಮಾಚಾರಿಯೊಬ್ಬಳು ಮಗುವನ್ನು ಅತೀಂದ್ರಿಯ ಆಚರಣೆಗೆ ಬಳಸುತ್ತಿದ್ದಾಗ ಮಗುವೊಂದು ಪ್ರಜ್ಞೆ ತಪ್ಪಿ ಬಿದ್ದಿರುವುದಾಗಿ ಎಂದು ವರದಿಯಾಗಿದೆ.

Kerala: ಕೇರಳದಲ್ಲಿ ಮಗುವಿನ ಬಲಿ ನೀಡಲು ಪ್ರಯತ್ನ, ಮಹಿಳಾ ವಾಮಾಚಾರಿಯ ಬಂಧನ
Kerala Black Magic Case: Kerala woman detained for running black magic centre akp
TV9 Web
| Edited By: |

Updated on:Oct 13, 2022 | 4:20 PM

Share

ಪತ್ತನಂತಿಟ್: ಕೇರಳದಲ್ಲಿ ಇತ್ತಿಚೇಗೆ ನರಬಲಿ ನೀಡಿದ ಘಟನೆ ಭಾರೀ ವಿವಾದ ಸೃಷ್ಟಿ ಮಾಡಿತ್ತು. ಇದೀಗ ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಮಕ್ಕಳನ್ನು ಬಳಸಿಕೊಂಡು ಅತೀಂದ್ರಿಯ ಅಭ್ಯಾಸ ನಡೆಸುತ್ತಿರುವ ಪ್ರಕರಣ ವರದಿಯಾಗಿದೆ. ಮಹಿಳಾ ವಾಮಾಚಾರಿಯೊಬ್ಬಳು ಮಗುವನ್ನು ಅತೀಂದ್ರಿಯ ಆಚರಣೆಗೆ ಬಳಸುತ್ತಿದ್ದಾಗ ಮಗುವೊಂದು ಪ್ರಜ್ಞೆ ತಪ್ಪಿ ಬಿದ್ದಿರುವುದಾಗಿ ಎಂದು ವರದಿಯಾಗಿದೆ. ಇದೀಗ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೇರಳದ ಕೊಚ್ಚಿಯಲ್ಲಿ ಮೂಢನಂಬಿಕೆ ಆಚರಣೆಯಿಂದ ಇಬ್ಬರು ಮಹಿಳೆಯರ ನರಬಲಿಯನ್ನು ನೀಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಈ ಘಟನೆ ನಡೆದು 1 ವಾರಗಳು ಕೂಡ ಕಳೆದಿಲ್ಲ ಇದೀಗ ಇಂತಹದೇ ಒಂದು ಕೃತ್ಯಕ್ಕೆ ಪ್ರಯತ್ನ ನಡೆದಿದೆ.

ಈ ಪ್ರಕರಣದಲ್ಲಿ ಶೋಬನಾ ಅಲಿಯಾಸ್ ವಸಂತಿ ಎಂದು ಗುರುತಿಸಲಾದ ಮಹಿಳೆ ಕೇರಳದ ಪತ್ತನಂತಿಟ್ಟ ಜಿಲ್ಲೆಯ ಮಲಯಾಲಪುಳ ಪಟ್ಟಣದಲ್ಲಿ ಅತೀಂದ್ರಿಯ ಅಭ್ಯಾಸದಲ್ಲಿ ತೊಡಗಿದ್ದಳು. ಆಚರಣೆಯಲ್ಲಿ ತೊಡಗಿದ್ದ ಮಗುವೊಂದು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದೆ ಎಂದು ವರದಿಯಾಗಿದೆ.

ಈ ಬಗ್ಗೆ ಇಲ್ಲಿ ನಿವಾಸಿಗಳು ಅನೇಕ ಬಾರಿ ದೂರು ನೀಡಿದ್ದಾರೆ ಅದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ದೂರು ನೀಡಿದರೂ ಮಲಯಾಳಪುಳ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ನಿವಾಸಿಗಳು ಪ್ರತಿಭಟನೆ ನಡೆಸಿದರು.

ಆ ಮಹಿಳೆಯನ್ನು ಬಂಧಿಸುವವರೆಗೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಪ್ರತಿಭಟನಾಕಾರರು ಹೇಳಿದರು. ನಿವಾಸಿಗಳ ಪ್ರಕಾರ, ಯಾರಾದರೂ ಅವಳನ್ನು ವಿರೋಧಿಸಿದರೆ ಅವರನ್ನು ಶಪಿಸುವುದಾಗಿ ತಾಂತ್ರಿಕ ಬೆದರಿಕೆ ಹಾಕಿದರು.

ಇದನ್ನು ಓದಿ: ನರಬಲಿ ಪ್ರಕರಣದ ಪ್ರಮುಖ ಆರೋಪಿ ಶಾಫಿ ವಿಕೃತ ಕಾಮಿ, ಕ್ರೌರ್ಯವೆಸಗಿ ಸಂತೋಷಪಡುತ್ತಿದ್ದ ಮನೋರೋಗಿ

ಸ್ಥಳೀಯರ ಪ್ರತಿಭಟನೆಯ ನಂತರ, ಉಪ ಪೊಲೀಸ್ ಅಧೀಕ್ಷಕರ ಆದೇಶದ ಮೇರೆಗೆ ಪತ್ತನಂತಿಟ್ಟ ಪೊಲೀಸರು ಮಹಿಳೆ ಶೋಬನಾ ಅಲಿಯಾಸ್ ವಸಂತಿ ಅವರನ್ನು ವಶಕ್ಕೆ ತೆಗೆದುಕೊಂಡರು. ಆಕೆಯನ್ನು ವಿಚಾರಣೆಗೊಳಪಡಿಸಿದ ಬಳಿಕವಷ್ಟೇ ಆಕೆಯ ಮೇಲಿನ ಆರೋಪವನ್ನು ಖಚಿತಪಡಿಸಲು ಸಾಧ್ಯ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಚ್ಚಿ ಜಿಲ್ಲೆಯಲ್ಲಿ ನರಬಲಿಯ ಭಯಾನಕ ಪ್ರಕರಣ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಸುಳ್ಳು ನೆಪದಲ್ಲಿ ಮನೆಗೆ ಕರೆದೊಯ್ದು ಅಲ್ಲಿ ಧಾರ್ಮಿಕ ಕ್ರಿಯೆಯಲ್ಲಿ ಕೊಲ್ಲಲಾಯಿತು. ಮಹಿಳೆಯ ಹತ್ಯೆಗೆ ಸಹಾಯ ಮಾಡಿದ ವ್ಯಕ್ತಿ , ಆತನ ಪತ್ನಿ ಹಾಗೂ ದಲ್ಲಾಳಿ ಸೇರಿ ಮೂವರನ್ನು ಬಂಧಿಸಲಾಗಿದೆ.

Published On - 4:20 pm, Thu, 13 October 22

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು