AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala: ಕೇರಳದಲ್ಲಿ ಮಗುವಿನ ಬಲಿ ನೀಡಲು ಪ್ರಯತ್ನ, ಮಹಿಳಾ ವಾಮಾಚಾರಿಯ ಬಂಧನ

ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಮಕ್ಕಳನ್ನು ಬಳಸಿಕೊಂಡು ಅತೀಂದ್ರಿಯ ಅಭ್ಯಾಸ ನಡೆಸುತ್ತಿರುವ ಪ್ರಕರಣ ವರದಿಯಾಗಿದೆ. ಮಹಿಳಾ ವಾಮಾಚಾರಿಯೊಬ್ಬಳು ಮಗುವನ್ನು ಅತೀಂದ್ರಿಯ ಆಚರಣೆಗೆ ಬಳಸುತ್ತಿದ್ದಾಗ ಮಗುವೊಂದು ಪ್ರಜ್ಞೆ ತಪ್ಪಿ ಬಿದ್ದಿರುವುದಾಗಿ ಎಂದು ವರದಿಯಾಗಿದೆ.

Kerala: ಕೇರಳದಲ್ಲಿ ಮಗುವಿನ ಬಲಿ ನೀಡಲು ಪ್ರಯತ್ನ, ಮಹಿಳಾ ವಾಮಾಚಾರಿಯ ಬಂಧನ
Kerala Black Magic Case: Kerala woman detained for running black magic centre akp
TV9 Web
| Edited By: |

Updated on:Oct 13, 2022 | 4:20 PM

Share

ಪತ್ತನಂತಿಟ್: ಕೇರಳದಲ್ಲಿ ಇತ್ತಿಚೇಗೆ ನರಬಲಿ ನೀಡಿದ ಘಟನೆ ಭಾರೀ ವಿವಾದ ಸೃಷ್ಟಿ ಮಾಡಿತ್ತು. ಇದೀಗ ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಮಕ್ಕಳನ್ನು ಬಳಸಿಕೊಂಡು ಅತೀಂದ್ರಿಯ ಅಭ್ಯಾಸ ನಡೆಸುತ್ತಿರುವ ಪ್ರಕರಣ ವರದಿಯಾಗಿದೆ. ಮಹಿಳಾ ವಾಮಾಚಾರಿಯೊಬ್ಬಳು ಮಗುವನ್ನು ಅತೀಂದ್ರಿಯ ಆಚರಣೆಗೆ ಬಳಸುತ್ತಿದ್ದಾಗ ಮಗುವೊಂದು ಪ್ರಜ್ಞೆ ತಪ್ಪಿ ಬಿದ್ದಿರುವುದಾಗಿ ಎಂದು ವರದಿಯಾಗಿದೆ. ಇದೀಗ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೇರಳದ ಕೊಚ್ಚಿಯಲ್ಲಿ ಮೂಢನಂಬಿಕೆ ಆಚರಣೆಯಿಂದ ಇಬ್ಬರು ಮಹಿಳೆಯರ ನರಬಲಿಯನ್ನು ನೀಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಈ ಘಟನೆ ನಡೆದು 1 ವಾರಗಳು ಕೂಡ ಕಳೆದಿಲ್ಲ ಇದೀಗ ಇಂತಹದೇ ಒಂದು ಕೃತ್ಯಕ್ಕೆ ಪ್ರಯತ್ನ ನಡೆದಿದೆ.

ಈ ಪ್ರಕರಣದಲ್ಲಿ ಶೋಬನಾ ಅಲಿಯಾಸ್ ವಸಂತಿ ಎಂದು ಗುರುತಿಸಲಾದ ಮಹಿಳೆ ಕೇರಳದ ಪತ್ತನಂತಿಟ್ಟ ಜಿಲ್ಲೆಯ ಮಲಯಾಲಪುಳ ಪಟ್ಟಣದಲ್ಲಿ ಅತೀಂದ್ರಿಯ ಅಭ್ಯಾಸದಲ್ಲಿ ತೊಡಗಿದ್ದಳು. ಆಚರಣೆಯಲ್ಲಿ ತೊಡಗಿದ್ದ ಮಗುವೊಂದು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದೆ ಎಂದು ವರದಿಯಾಗಿದೆ.

ಈ ಬಗ್ಗೆ ಇಲ್ಲಿ ನಿವಾಸಿಗಳು ಅನೇಕ ಬಾರಿ ದೂರು ನೀಡಿದ್ದಾರೆ ಅದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ದೂರು ನೀಡಿದರೂ ಮಲಯಾಳಪುಳ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ನಿವಾಸಿಗಳು ಪ್ರತಿಭಟನೆ ನಡೆಸಿದರು.

ಆ ಮಹಿಳೆಯನ್ನು ಬಂಧಿಸುವವರೆಗೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಪ್ರತಿಭಟನಾಕಾರರು ಹೇಳಿದರು. ನಿವಾಸಿಗಳ ಪ್ರಕಾರ, ಯಾರಾದರೂ ಅವಳನ್ನು ವಿರೋಧಿಸಿದರೆ ಅವರನ್ನು ಶಪಿಸುವುದಾಗಿ ತಾಂತ್ರಿಕ ಬೆದರಿಕೆ ಹಾಕಿದರು.

ಇದನ್ನು ಓದಿ: ನರಬಲಿ ಪ್ರಕರಣದ ಪ್ರಮುಖ ಆರೋಪಿ ಶಾಫಿ ವಿಕೃತ ಕಾಮಿ, ಕ್ರೌರ್ಯವೆಸಗಿ ಸಂತೋಷಪಡುತ್ತಿದ್ದ ಮನೋರೋಗಿ

ಸ್ಥಳೀಯರ ಪ್ರತಿಭಟನೆಯ ನಂತರ, ಉಪ ಪೊಲೀಸ್ ಅಧೀಕ್ಷಕರ ಆದೇಶದ ಮೇರೆಗೆ ಪತ್ತನಂತಿಟ್ಟ ಪೊಲೀಸರು ಮಹಿಳೆ ಶೋಬನಾ ಅಲಿಯಾಸ್ ವಸಂತಿ ಅವರನ್ನು ವಶಕ್ಕೆ ತೆಗೆದುಕೊಂಡರು. ಆಕೆಯನ್ನು ವಿಚಾರಣೆಗೊಳಪಡಿಸಿದ ಬಳಿಕವಷ್ಟೇ ಆಕೆಯ ಮೇಲಿನ ಆರೋಪವನ್ನು ಖಚಿತಪಡಿಸಲು ಸಾಧ್ಯ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಚ್ಚಿ ಜಿಲ್ಲೆಯಲ್ಲಿ ನರಬಲಿಯ ಭಯಾನಕ ಪ್ರಕರಣ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಸುಳ್ಳು ನೆಪದಲ್ಲಿ ಮನೆಗೆ ಕರೆದೊಯ್ದು ಅಲ್ಲಿ ಧಾರ್ಮಿಕ ಕ್ರಿಯೆಯಲ್ಲಿ ಕೊಲ್ಲಲಾಯಿತು. ಮಹಿಳೆಯ ಹತ್ಯೆಗೆ ಸಹಾಯ ಮಾಡಿದ ವ್ಯಕ್ತಿ , ಆತನ ಪತ್ನಿ ಹಾಗೂ ದಲ್ಲಾಳಿ ಸೇರಿ ಮೂವರನ್ನು ಬಂಧಿಸಲಾಗಿದೆ.

Published On - 4:20 pm, Thu, 13 October 22

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​