AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಸಿಯೋಥೆರಪಿ ವೇಳೆ ಮಹಿಳೆ ಮೇಲೆ ಅತ್ಯಾಚಾರ; ಕಾಂಗ್ರೆಸ್ ಮುಖಂಡನ ಮಗನ ಬಂಧನ

Kerala Crime News: ಕೇರಳದಲ್ಲಿ ಫಿಸಿಯೋಥೆರಪಿ ನಡೆಸುವ ಸಮಯದಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕೇರಳದ ಕಾಂಗ್ರೆಸ್ ಮುಖಂಡನ ಪುತ್ರನನ್ನು ಬಂಧಿಸಲಾಗಿದೆ.

ಫಿಸಿಯೋಥೆರಪಿ ವೇಳೆ ಮಹಿಳೆ ಮೇಲೆ ಅತ್ಯಾಚಾರ; ಕಾಂಗ್ರೆಸ್ ಮುಖಂಡನ ಮಗನ ಬಂಧನ
ಅತ್ಯಾಚಾರImage Credit source: istock
ಸುಷ್ಮಾ ಚಕ್ರೆ
|

Updated on: Jul 03, 2024 | 10:34 PM

Share

ಕಣ್ಣೂರು: ಕೇರಳದ ಪಯ್ಯನೂರು ಬಸ್ ನಿಲ್ದಾಣದ ಬಳಿ ಇರುವ ಆರೋಗ್ಯ ಚಿಕಿತ್ಸಾಲಯದಲ್ಲಿ ಫಿಸಿಯೋಥೆರಪಿ ಸಮಯದಲ್ಲಿ ಯುವತಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ. ಈ ಬಗ್ಗೆ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಸ್ಥಳೀಯ ಕಾಂಗ್ರೆಸ್ ಮುಖಂಡರೊಬ್ಬರ ಪುತ್ರ 42 ವರ್ಷದ ಶರತ್ ನಂಬಿಯಾರ್​ನನ್ನು ಪಯ್ಯನೂರು ಪೊಲೀಸರು ಬಂಧಿಸಿದ್ದಾರೆ.

ಈ ವರದಿಗಳ ಪ್ರಕಾರ, ಕ್ಷೇಮ ಕೇಂದ್ರ ಮತ್ತು ಜಿಮ್‌ನ ಮಾಲೀಕ ಶರತ್ ಚಿಕಿತ್ಸಾ ಕೊಠಡಿಯನ್ನು ಒಳಗಿನಿಂದ ಲಾಕ್ ಮಾಡಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಸ್ವತಃ ಫಿಸಿಯೋಥೆರಪಿಸ್ಟ್ ಅಲ್ಲದಿದ್ದರೂ, ಮಹಿಳೆಯರಿಗೆ ತಾನೇ ಫಿಸಿಯೋಥೆರಪಿ ಮಾಡುತ್ತೇನೆ ಎಂದು ಆತ ಮುಂದೆ ಹೋಗುತ್ತಿದ್ದ ಎಂದು ಆರೋಪಿಸಲಾಗಿದೆ. ಅತ್ಯಾಚಾರಕ್ಕೊಳಗಾದ ಮಹಿಳೆ ಪೊಲೀಸರಿಗೆ ದೂರು ನೀಡಿದಾಗ ಈ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ: Triple Murder: ಕಸದ ರಾಶಿಯಲ್ಲಿದ್ದ ಟಿಕೆಟ್​ನಿಂದ ತ್ರಿವಳಿ ಕೊಲೆಯ ಸುಳಿವು; ಭೀಕರ ಹತ್ಯೆ ಹಿಂದೆ ಲವ್ ಸ್ಟೋರಿ

ದೂರು ಸ್ವೀಕರಿಸಿದ ಅಧಿಕಾರಿಗಳು ಸೋಮವಾರ ರಾತ್ರಿ ಶರತ್‌ನನ್ನು ಬಂಧಿಸಿದ್ದಾರೆ. ಆತನನ್ನು ಮಂಗಳವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನಂತರ ಕಸ್ಟಡಿಗೆ ನೀಡಲಾಗಿದೆ ಎಂದು ಮಾತೃಭೂಮಿ ವರದಿ ಮಾಡಿದೆ.

ಇದರ ನಡುವೆ, ವ್ಯಕ್ತಿಗಳ ಗುಂಪು ಮಂಗಳವಾರ ಮಧ್ಯಾಹ್ನ ಶರತ್ ಅವರ ಕ್ಲಿನಿಕ್ ಆವರಣದ ಮೇಲೆ ದಾಳಿ ಮಾಡಿ, ಉಪಕರಣಗಳನ್ನು ಧ್ವಂಸಗೊಳಿಸಿತು. ಸಿಸಿಟಿವಿ ಕ್ಯಾಮೆರಾಗಳನ್ನು ಧ್ವಂಸಗೊಳಿಸಿದ ನಂತರ ಹಿಂಸಾಚಾರ ಸಂಭವಿಸಿದೆ ಎಂದು ವರದಿಯಾಗಿದೆ. ವಿಧ್ವಂಸಕ ಕೃತ್ಯದಲ್ಲಿ ಭಾಗಿಯಾಗಿದ್ದ ಐವರನ್ನು ಪೊಲೀಸರು ತಕ್ಷಣ ಬಂಧಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ