ಫಿಸಿಯೋಥೆರಪಿ ವೇಳೆ ಮಹಿಳೆ ಮೇಲೆ ಅತ್ಯಾಚಾರ; ಕಾಂಗ್ರೆಸ್ ಮುಖಂಡನ ಮಗನ ಬಂಧನ

Kerala Crime News: ಕೇರಳದಲ್ಲಿ ಫಿಸಿಯೋಥೆರಪಿ ನಡೆಸುವ ಸಮಯದಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕೇರಳದ ಕಾಂಗ್ರೆಸ್ ಮುಖಂಡನ ಪುತ್ರನನ್ನು ಬಂಧಿಸಲಾಗಿದೆ.

ಫಿಸಿಯೋಥೆರಪಿ ವೇಳೆ ಮಹಿಳೆ ಮೇಲೆ ಅತ್ಯಾಚಾರ; ಕಾಂಗ್ರೆಸ್ ಮುಖಂಡನ ಮಗನ ಬಂಧನ
ಅತ್ಯಾಚಾರImage Credit source: istock
Follow us
|

Updated on: Jul 03, 2024 | 10:34 PM

ಕಣ್ಣೂರು: ಕೇರಳದ ಪಯ್ಯನೂರು ಬಸ್ ನಿಲ್ದಾಣದ ಬಳಿ ಇರುವ ಆರೋಗ್ಯ ಚಿಕಿತ್ಸಾಲಯದಲ್ಲಿ ಫಿಸಿಯೋಥೆರಪಿ ಸಮಯದಲ್ಲಿ ಯುವತಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ. ಈ ಬಗ್ಗೆ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಸ್ಥಳೀಯ ಕಾಂಗ್ರೆಸ್ ಮುಖಂಡರೊಬ್ಬರ ಪುತ್ರ 42 ವರ್ಷದ ಶರತ್ ನಂಬಿಯಾರ್​ನನ್ನು ಪಯ್ಯನೂರು ಪೊಲೀಸರು ಬಂಧಿಸಿದ್ದಾರೆ.

ಈ ವರದಿಗಳ ಪ್ರಕಾರ, ಕ್ಷೇಮ ಕೇಂದ್ರ ಮತ್ತು ಜಿಮ್‌ನ ಮಾಲೀಕ ಶರತ್ ಚಿಕಿತ್ಸಾ ಕೊಠಡಿಯನ್ನು ಒಳಗಿನಿಂದ ಲಾಕ್ ಮಾಡಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಸ್ವತಃ ಫಿಸಿಯೋಥೆರಪಿಸ್ಟ್ ಅಲ್ಲದಿದ್ದರೂ, ಮಹಿಳೆಯರಿಗೆ ತಾನೇ ಫಿಸಿಯೋಥೆರಪಿ ಮಾಡುತ್ತೇನೆ ಎಂದು ಆತ ಮುಂದೆ ಹೋಗುತ್ತಿದ್ದ ಎಂದು ಆರೋಪಿಸಲಾಗಿದೆ. ಅತ್ಯಾಚಾರಕ್ಕೊಳಗಾದ ಮಹಿಳೆ ಪೊಲೀಸರಿಗೆ ದೂರು ನೀಡಿದಾಗ ಈ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ: Triple Murder: ಕಸದ ರಾಶಿಯಲ್ಲಿದ್ದ ಟಿಕೆಟ್​ನಿಂದ ತ್ರಿವಳಿ ಕೊಲೆಯ ಸುಳಿವು; ಭೀಕರ ಹತ್ಯೆ ಹಿಂದೆ ಲವ್ ಸ್ಟೋರಿ

ದೂರು ಸ್ವೀಕರಿಸಿದ ಅಧಿಕಾರಿಗಳು ಸೋಮವಾರ ರಾತ್ರಿ ಶರತ್‌ನನ್ನು ಬಂಧಿಸಿದ್ದಾರೆ. ಆತನನ್ನು ಮಂಗಳವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನಂತರ ಕಸ್ಟಡಿಗೆ ನೀಡಲಾಗಿದೆ ಎಂದು ಮಾತೃಭೂಮಿ ವರದಿ ಮಾಡಿದೆ.

ಇದರ ನಡುವೆ, ವ್ಯಕ್ತಿಗಳ ಗುಂಪು ಮಂಗಳವಾರ ಮಧ್ಯಾಹ್ನ ಶರತ್ ಅವರ ಕ್ಲಿನಿಕ್ ಆವರಣದ ಮೇಲೆ ದಾಳಿ ಮಾಡಿ, ಉಪಕರಣಗಳನ್ನು ಧ್ವಂಸಗೊಳಿಸಿತು. ಸಿಸಿಟಿವಿ ಕ್ಯಾಮೆರಾಗಳನ್ನು ಧ್ವಂಸಗೊಳಿಸಿದ ನಂತರ ಹಿಂಸಾಚಾರ ಸಂಭವಿಸಿದೆ ಎಂದು ವರದಿಯಾಗಿದೆ. ವಿಧ್ವಂಸಕ ಕೃತ್ಯದಲ್ಲಿ ಭಾಗಿಯಾಗಿದ್ದ ಐವರನ್ನು ಪೊಲೀಸರು ತಕ್ಷಣ ಬಂಧಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಚೆಂಡಿಯಾದಲ್ಲಿ ಮನೆಗಳು ಜಲಾವೃತ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಚೆಂಡಿಯಾದಲ್ಲಿ ಮನೆಗಳು ಜಲಾವೃತ
ಟೀಮ್ ಇಂಡಿಯಾ ವಿಜಯಯಾತ್ರೆ ವೇಳೆ ಪಾಕಿಸ್ತಾನ್ ಘೋಷಣೆ ಕೂಗಿದ ಫ್ಯಾನ್ಸ್..!
ಟೀಮ್ ಇಂಡಿಯಾ ವಿಜಯಯಾತ್ರೆ ವೇಳೆ ಪಾಕಿಸ್ತಾನ್ ಘೋಷಣೆ ಕೂಗಿದ ಫ್ಯಾನ್ಸ್..!
ಕೊಡಗು: ತಡ ರಾತ್ರಿ ನಡು ರಸ್ತೆಯಲ್ಲಿ ಲಾರಿ ತಡೆದು ತರಕಾರಿ ಭಕ್ಷಿಸಿದ ಗಜರಾಜ
ಕೊಡಗು: ತಡ ರಾತ್ರಿ ನಡು ರಸ್ತೆಯಲ್ಲಿ ಲಾರಿ ತಡೆದು ತರಕಾರಿ ಭಕ್ಷಿಸಿದ ಗಜರಾಜ
Mohammed Siraj: ಮೊಹಮ್ಮದ್ ಸಿರಾಜ್​ಗೆ ಅದ್ಧೂರಿ ಸ್ವಾಗತ
Mohammed Siraj: ಮೊಹಮ್ಮದ್ ಸಿರಾಜ್​ಗೆ ಅದ್ಧೂರಿ ಸ್ವಾಗತ
ದರ್ಶನ್​ಗೆ ಲಕ್ಷ ಲಕ್ಷ ಹಣ ಕೊಟ್ಟಿದ್ದಕ್ಕೆ ಕಾರಣ ನೀಡಿದ ಮಾಜಿ ಮೇಯರ್
ದರ್ಶನ್​ಗೆ ಲಕ್ಷ ಲಕ್ಷ ಹಣ ಕೊಟ್ಟಿದ್ದಕ್ಕೆ ಕಾರಣ ನೀಡಿದ ಮಾಜಿ ಮೇಯರ್
ಕ್ಲಿಕ್ ಮಾಡುತ್ತಿದ್ದಂತೆ ಇನ್​ಸ್ಟಂಟ್ ಫೋಟೊ ಪ್ರಿಂಟ್
ಕ್ಲಿಕ್ ಮಾಡುತ್ತಿದ್ದಂತೆ ಇನ್​ಸ್ಟಂಟ್ ಫೋಟೊ ಪ್ರಿಂಟ್
Nithya Bhavishya: ಈ ರಾಶಿಯವರು ಹಣ ಕಳೆದುಕೊಂಡು ಚಿಂತಿತರಾಗುವ ಸಾಧ್ಯತೆ
Nithya Bhavishya: ಈ ರಾಶಿಯವರು ಹಣ ಕಳೆದುಕೊಂಡು ಚಿಂತಿತರಾಗುವ ಸಾಧ್ಯತೆ
Daily Devotional: ಸಾವಿನ ಮನೆಯಲ್ಲಿ ಈ ಕೆಲಸ ಯಾವತ್ತೂ ಮಾಡಬೇಡಿ
Daily Devotional: ಸಾವಿನ ಮನೆಯಲ್ಲಿ ಈ ಕೆಲಸ ಯಾವತ್ತೂ ಮಾಡಬೇಡಿ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?