AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಕಾನೂನು ನೆರವು ಕೋರಿ ಬಂದಿದ್ದ ಯುವತಿ ಮೇಲೆ ಅತ್ಯಾಚಾರ: ಸರ್ಕಾರಿ ವಕೀಲ ರಾಜೀನಾಮೆ

ಕಾನೂನು ನೆರವು ಕೋರಿ ಬಂದಿದ್ದ ಯುವತಿ ಮೇಲೆ ಅತ್ಯಾಚಾರ ಎಸಗಿದ ದೂರಿನ ಹಿನ್ನೆಲೆಯಲ್ಲಿ ಹೈಕೋರ್ಟ್‌ಗೆ ಸರ್ಕಾರಿ ವಕೀಲರೊಬ್ಬರು ರಾಜೀನಾಮೆ ನೀಡಿದ್ದಾರೆ. ಹಿರಿಯ ಸರ್ಕಾರಿ ವಕೀಲ ಪ. ಜಿ ಮನು ರಾಜೀನಾಮೆ ನೀಡಿ ಅಡ್ವೊಕೇಟ್ ಜನರಲ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಕೇರಳ: ಕಾನೂನು ನೆರವು ಕೋರಿ ಬಂದಿದ್ದ ಯುವತಿ ಮೇಲೆ ಅತ್ಯಾಚಾರ: ಸರ್ಕಾರಿ ವಕೀಲ ರಾಜೀನಾಮೆ
ಅಪರಾಧನImage Credit source: India Today
ನಯನಾ ರಾಜೀವ್
|

Updated on: Dec 01, 2023 | 9:14 AM

Share

ಕಾನೂನು ನೆರವು ಕೋರಿ ಬಂದಿದ್ದ ಯುವತಿ ಮೇಲೆ ಅತ್ಯಾಚಾರ ಎಸಗಿದ ದೂರಿನ ಹಿನ್ನೆಲೆಯಲ್ಲಿ ಹೈಕೋರ್ಟ್‌ಗೆ ಸರ್ಕಾರಿ ವಕೀಲರೊಬ್ಬರು ರಾಜೀನಾಮೆ ನೀಡಿದ್ದಾರೆ. ಹಿರಿಯ ಸರ್ಕಾರಿ ವಕೀಲ ಪ. ಜಿ ಮನು ರಾಜೀನಾಮೆ ನೀಡಿ ಅಡ್ವೊಕೇಟ್ ಜನರಲ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಈ ಹಿಂದೆ ಕಾನೂನು ನೆರವು ಕೋರಿದ್ದ ಯುವತಿಗೆ ಕಿರುಕುಳ ನೀಡಿದ ದೂರಿನ ಮೇರೆಗೆ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದರು.

25 ವರ್ಷದ ಮಹಿಳೆಯೊಬ್ಬರು ಗ್ರಾಮಾಂತರ ಎಸ್ಪಿಗೆ ನೀಡಿದ ದೂರಿನ ಮೇರೆಗೆ ಚೋಟಾನಿಕರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 2018 ರಲ್ಲಿ, ಎರ್ನಾಕುಲಂನ ಮಹಿಳೆಯೊಬ್ಬರು ಕಿರುಕುಳ ಪ್ರಕರಣದಲ್ಲಿ ಕಾನೂನು ಪ್ರಕ್ರಿಯೆಗಾಗಿ ಸರ್ಕಾರಿ ವಕೀಲರನ್ನು ಸಂಪರ್ಕಿಸಿದರು. ಆದರೆ ಸರ್ಕಾರಿ ವಕೀಲರಾಗಿದ್ದ ಪಿ.ಜಿ.ಮನು ಎಂಬಾತನ ನೆರವು ಕೋರಿದ್ದಳು.

ಮಹಿಳೆಯನ್ನು ಕಡವಂತರದಲ್ಲಿರುವ ತನ್ನ ಕಚೇರಿಗೆ ಕರೆಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ತನ್ನ ನಗ್ನ ಚಿತ್ರಗಳನ್ನು ಕೂಡ ತೆಗೆದುಕೊಂಡಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ.

ಮತ್ತಷ್ಟು ಓದಿ: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ವಿಮ್ಸ್‌ ನಿರ್ದೇಶಕರ ವಿರುದ್ಧ ಎಫ್ಐಆರ್ ದಾಖಲು

ಅಕ್ಟೋಬರ್ 10, 2023 ರಂದು ಆರೋಪಿ ಮಹಿಳೆಗೆ ಕಿರುಕುಳ ನೀಡಿದ್ದಾನೆ. ಮಹಿಳೆಯ ಮನೆಗೆ ತೆರಳಿ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮಹಿಳೆ ಆಲುವಾ ಗ್ರಾಮಾಂತರ ಎಸ್ಪಿಗೆ ದೂರು ನೀಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ