AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala Crime: ತನ್ನ ನವಜಾತ ಶಿಶುವನ್ನು ಕೊಂದು ಮನೆಯ ಹಿಂದೆ ಹೂತಿಟ್ಟ ಮಹಿಳೆ, ಗುಂಡಿಯಿಂದ ಹೆಣವನ್ನು ಕಚ್ಚಿ ಮೇಲೆತ್ತಿದ ಬೀದಿ ನಾಯಿಗಳು

ನವಜಾತ ಶಿಶುವನ್ನು ಕೊಂದು ಹೂತಿಟ್ಟ 40 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದಲ್ಲಿ ನಡೆದಿದೆ. ಸ್ಥಳೀಯರು ಮೀನುಗಾರಿಕಾ ಕೇಂದ್ರದ ಬಳಿ ಬೀದಿ ನಾಯಿಗಳು ಹೊರತೆಗೆದ ಕೊಳೆದ ದೇಹವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು.

Kerala Crime: ತನ್ನ ನವಜಾತ ಶಿಶುವನ್ನು ಕೊಂದು ಮನೆಯ ಹಿಂದೆ ಹೂತಿಟ್ಟ ಮಹಿಳೆ, ಗುಂಡಿಯಿಂದ ಹೆಣವನ್ನು ಕಚ್ಚಿ ಮೇಲೆತ್ತಿದ ಬೀದಿ ನಾಯಿಗಳು
ಪೊಲೀಸ್Image Credit source: India Today
Follow us
ನಯನಾ ರಾಜೀವ್
|

Updated on: Jul 30, 2023 | 1:13 PM

ನವಜಾತ ಶಿಶುವನ್ನು ಕೊಂದು ಹೂತಿಟ್ಟ 40 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದಲ್ಲಿ ನಡೆದಿದೆ. ಸ್ಥಳೀಯರು ಮೀನುಗಾರಿಕಾ ಕೇಂದ್ರದ ಬಳಿ ಬೀದಿ ನಾಯಿಗಳು ಹೊರತೆಗೆದ ಕೊಳೆದ ದೇಹವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳೀಯರು ಮಾಂಪಲ್ಲಿ ಫಿಶ್ ಲ್ಯಾಂಡಿಂಗ್ ಸೆಂಟರ್ ಬಳಿ ಮಗುವಿನ ಮೃತದೇಹವನ್ನು ಪತ್ತೆಹಚ್ಚಿದ ಬಳಿಕ ಜೂಲಿಯನ್ನು ಬಂಧಿಸಲಾಗಿದೆ ಎಂದು ಅಂಕುತೆಂಗು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಜೂಲಿ ಜುಲೈ 14 ರಂದು ತನ್ನ ಮನೆಯ ಸಮೀಪವಿರುವ ವಾಶ್ ರೂಂನಲ್ಲಿ ಮಗುವಿಗೆ ಜನ್ಮ ನೀಡಿದ್ದಳು ಮತ್ತು ಕತ್ತರಿಗಳಿಂದ ಹೊಕ್ಕುಳಬಳ್ಳಿಯನ್ನು ಕತ್ತರಿಸಿದ್ದಳು.

ಮಗು ಅಳಲು ಆರಂಭಿಸಿದಾಗ ಜೂಲಿ ಬಾಯಿ ಮತ್ತು ಮೂಗನ್ನು ಮುಚ್ಚಿಕೊಂಡಿದ್ದರಿಂದ ಉಸಿರುಗಟ್ಟಿ ಮಗು ಸಾವನ್ನಪ್ಪಿದೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

ಮತ್ತಷ್ಟು ಓದಿ: ಸರ್ಕಾರಿ ಆಸ್ಪತ್ರೆಯ ಬಚ್ಚಲಲ್ಲಿ ನವಜಾತ ಶಿಶು ಹತ್ಯೆ; ಆರೋಪಿ ತಾಯಿ ಅರೆಸ್ಟ್

ನಂತರ ಆಕೆಯ ಮನೆಯ ಸಮೀಪವೇ ಮಗುವಿನ ಶವವನ್ನು ಹೂತು ಹಾಕಿದ್ದಾಳೆ. ಜುಲೈ 18 ರಂದು ಅವರು ಸ್ಥಳಕ್ಕೆ ಭೇಟಿ ನೀಡಿದಾಗ ಮಗುವಿನ ದೇಹ ಕಾಣೆಯಾಗಿದೆ. ಬೀದಿ ನಾಯಿಗಳು ಅದನ್ನು ಹೊರ ತೆಗೆದಿತ್ತು. ಎಳೆದುಕೊಂಡು ಹೋಗಿ ಮೀನುಗಾರಿಕಾ ಕೇಂದ್ರದ ಬಳಿ ಹಾಕಿದ್ದವು, ಬಳಿಕ ಸ್ಥಳೀಯರು ಅದನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಪೊಲೀಸರಿಗೆ ಸಿಕ್ಕ ಸುಳಿವಿನ ಮೇರೆಗೆ ಜೂಲಿಯನ್ನು ಬಂಧಿಸಲಾಯಿತು. ಆರಂಭದಲ್ಲಿ ಆಕೆ ಆರೋಪಗಳನ್ನು ನಿರಾಕರಿಸಿದರೂ, ಪೊಲೀಸರು ವೈಜ್ಞಾನಿಕ ಪುರಾವೆಗಳನ್ನು ಪ್ರಸ್ತುತಪಡಿಸಿದ ನಂತರ ಅಪರಾಧವನ್ನು ಒಪ್ಪಿಕೊಂಡಳು.

ವಿಧವೆಯಾಗಿದ್ದರೂ ಮಗುವಿನ ತಾಯಿಯಾಗಿದ್ದಾಳೆ ಎಂದು ಅವಮಾನ ಮಾಡುತ್ತಾರೆಂದು ಹೆದರಿ ಕೊಲೆ ಮಾಡಿರುವುದಾಗಿ ಆರೋಪಿ ಪೊಲೀಸರಿಗೆ ತಿಳಿಸಿದ್ದಾಳೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ