AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala: 5 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರ: ತಂದೆ ಹಾಗೂ ಮತ್ತೋರ್ವನಿಗೆ 84 ವರ್ಷಗಳ ಜೈಲು ಶಿಕ್ಷೆ

ಮಗಳನ್ನು ರಕ್ಷಣೆ ಮಾಡಬೇಕಿದ್ದ ತಂದೆಯೇ ಮಗಳ ಮೇಲೆ ನಿರಂತರ ಅತ್ಯಾಚಾರವೆಸಗಿರುವ ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ಈ ಪ್ರಕರಣದಲ್ಲಿ ಬಾಲಕಿಯ ತಂದೆ ಹಾಗೂ ಸಂಬಂಧಿಗೆ ಕೇರಳ ನ್ಯಾಯಾಲಯ 84 ವರ್ಷಗಳ ಜೈಲುಶಿಕ್ಷೆ ವಿಧಿಸಿದೆ.

Kerala: 5 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರ: ತಂದೆ ಹಾಗೂ ಮತ್ತೋರ್ವನಿಗೆ 84 ವರ್ಷಗಳ ಜೈಲು ಶಿಕ್ಷೆ
ಜೈಲು
ನಯನಾ ರಾಜೀವ್
|

Updated on: May 19, 2023 | 8:10 AM

Share

ಮಗಳನ್ನು ರಕ್ಷಣೆ ಮಾಡಬೇಕಿದ್ದ ತಂದೆಯೇ ಮಗಳ ಮೇಲೆ ನಿರಂತರ ಅತ್ಯಾಚಾರವೆಸಗಿರುವ ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ಈ ಪ್ರಕರಣದಲ್ಲಿ ಬಾಲಕಿಯ ತಂದೆ ಹಾಗೂ ಸಂಬಂಧಿಗೆ ಕೇರಳ ನ್ಯಾಯಾಲಯ 84 ವರ್ಷಗಳ ಜೈಲುಶಿಕ್ಷೆ ವಿಧಿಸಿದೆ. ದೇವಿಕುಲಂ ಪೋಕ್ಸೊ ತ್ವರಿತ ನ್ಯಾಯಾಲಯದ ನ್ಯಾಯಾಧೀಶ ರವಿಚಂದರ್ ಸಿಆರ್ ಅವರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, ಭಾರತೀಯ ದಂಡ ಸಂಹಿತೆ ಮತ್ತು ಬಾಲಾಪರಾಧ ನ್ಯಾಯ ಕಾಯ್ದೆಯಡಿಯಲ್ಲಿ ಪ್ರತಿಯೊಬ್ಬ ಪುರುಷರಿಗೆ ಪ್ರತ್ಯೇಕವಾಗಿ ಒಟ್ಟು 84 ವರ್ಷಗಳವರೆಗೆ ಶಿಕ್ಷೆ ವಿಧಿಸಿದೆ.

ಜೈಲು ಶಿಕ್ಷೆಯ ಹೊರತಾಗಿ, ವಿಶೇಷ ನ್ಯಾಯಾಲಯವು ಇಬ್ಬರೂ ಅಪರಾಧಿಗಳಿಗೆ ತಲಾ 3 ಲಕ್ಷ ರೂ. ದಂಡವನ್ನು ವಿಧಿಸಿದೆ ಮತ್ತು ಅವರಿಂದ ವಸೂಲಿಯಾದ ಮೊತ್ತವನ್ನು ಸಂತ್ರಸ್ತೆಗೆ ನೀಡುವಂತೆ ಸೂಚಿಸಿದೆ ಎಂದು ಎಸ್‌ಪಿಪಿ ಹೇಳಿದರು.

ಮತ್ತಷ್ಟು ಓದಿ: ಲವರ್​ ಜತೆ ಲಾಡ್ಜ್​ಗೆ ತೆರಳಿದ್ದ ಮೇಕಪ್​ ಆರ್ಟಿಸ್ಟ್​ ದುರಂತ ಅಂತ್ಯ: ಬ್ಯೂಟಿಷಿಯನ್ ವರ್ಕರ್ಸ್ ಸಮಾವೇಶಕ್ಕೆ ಹೋದವಳು ಹೆಣವಾದಳು

ತಾಯಿ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದು, ಪೊಲೀಸರಿಗೆ ಮಾಹಿತಿ ನೀಡಿರುವುದಾಗಿ ವಕೀಲರು ತಿಳಿಸಿದ್ದಾರೆ. ನಂತರ ಮರಯೂರು ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ಬಿಜೋಯ್ ಪಿಪಿ ಮತ್ತು ಡೆಪ್ಯುಟಿ ಎಸ್ಪಿ ಕೆಆರ್ ಮನೋಜ್ ಅವರು ಪ್ರಕರಣದ ತನಿಖೆ ನಡೆಸಿ ಕಳೆದ ವರ್ಷ ಚಾರ್ಜ್ ಶೀಟ್ ಸಲ್ಲಿಸಿದ್ದರು ಎಂದು ಎಸ್ಪಿಪಿ ಹೇಳಿದರು.

ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯವು 18 ಸಾಕ್ಷಿಗಳು ಮತ್ತು 23 ದಾಖಲೆಗಳನ್ನು ಪರಿಶೀಲಿಸಿತು ನಂತರ ಇಬ್ಬರಿಗೆ ಶಿಕ್ಷೆ ವಿಧಿಸಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌