AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸಿದ ಯುವತಿ ಅಣ್ಣ ಎಂದಿದ್ದಕ್ಕೆ ಕೋರ್ಟ್​ನಲ್ಲೇ ಕೈ ಕತ್ತರಿಸಿಕೊಂಡ ಪ್ರೇಮಿ

ಪ್ರೀತಿಸಿದ ಹುಡುಗಿ ತನ್ನನ್ನು ಅಣ್ಣನ ಸಮಾನ ಎಂದಿದ್ದಕ್ಕೆ ಕೇರಳದ ತ್ರಿಶೂರ್ ಜಿಲ್ಲೆಯ ವಿಷ್ಣು ಎಂಬ ವ್ಯಕ್ತಿ ನ್ಯಾಯಮೂರ್ತಿ ಅನು ಶಿವರಾಮನ್ ಅವರ ಕೊಠಡಿಯ ಮುಂದೆ ಕೈ ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಪ್ರೀತಿಸಿದ ಯುವತಿ ಅಣ್ಣ ಎಂದಿದ್ದಕ್ಕೆ ಕೋರ್ಟ್​ನಲ್ಲೇ ಕೈ ಕತ್ತರಿಸಿಕೊಂಡ ಪ್ರೇಮಿ
ಕೇರಳ ಹೈಕೋರ್ಟ್
ಸುಷ್ಮಾ ಚಕ್ರೆ
|

Updated on: Sep 05, 2023 | 1:18 PM

Share

ತಿರುವನಂತಪುರಂ: ತಾನು ಪ್ರೀತಿಸಿದ ಯುವತಿ ತನಗೆ ಕೈಕೊಟ್ಟು ಆಕೆಯ ಹೆತ್ತವರ ಜೊತೆ ಹೋಗಲು ಒಪ್ಪಿದ್ದರಿಂದ ಮನನೊಂದ 31 ವರ್ಷದ ವ್ಯಕ್ತಿಯೊಬ್ಬರು ಸೋಮವಾರ ಕೇರಳದ ಹೈಕೋರ್ಟ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರಿಬ್ಬರ ಪ್ರೇಮ ಪ್ರಕರಣ ಕೋರ್ಟ್​ ಮೆಟ್ಟಿಲೇರಿತ್ತು. ಈ ವೇಳೆ ಆ ಯುವತಿ ‘ತಾನು ತನ್ನ ಹೆತ್ತವರನ್ನು ಬಿಟ್ಟು ಬದುಕಲಾರೆ, ತಾನು ಯಾರನ್ನೂ ಪ್ರೀತಿ ಮಾಡಿಲ್ಲ, ಆತ ತನ್ನ ಅಣ್ಣನ ಸಮಾನ’ ಎಂದು ಹೇಳಿದ್ದಳು. ಇದರಿಂದ ಬೇಸರಗೊಂಡ ಆ ವ್ಯಕ್ತಿ ಕೋರ್ಟ್​ನಲ್ಲೇ ತನ್ನ ಕೈ ನರವನ್ನು ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಕೇರಳದ ತ್ರಿಶೂರ್ ಜಿಲ್ಲೆಯ ವಿಷ್ಣು ಎಂಬ ವ್ಯಕ್ತಿ ನ್ಯಾಯಮೂರ್ತಿ ಅನು ಶಿವರಾಮನ್ ಅವರ ಕೊಠಡಿಯ ಮುಂದೆ ಕೈ ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

31 ವರ್ಷದ ವಿಷ್ಣು ಮತ್ತು 23 ವರ್ಷದ ಯುವತಿ ಸುಮಾರು 1 ತಿಂಗಳ ಕಾಲ ಒಟ್ಟಿಗೆ ವಾಸಿಸುತ್ತಿದ್ದರು. ತಮ್ಮ ಮಗಳನ್ನು ಅಕ್ರಮವಾಗಿ ಬಂಧಿಸಲಾಗಿದೆ ಎಂದು ಆರೋಪಿಸಿ ಯುವತಿಯ ತಂದೆ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಗೆ ಸಂಬಂಧಿಸಿದಂತೆ ಅವರಿಬ್ಬರೂ ಸೋಮವಾರ ಹೈಕೋರ್ಟ್‌ಗೆ ಹಾಜರಾಗಿದ್ದರು.

ಇದನ್ನೂ ಓದಿ: ರಾಜಸ್ಥಾನ: ಪ್ರೇಯಸಿಯ ಗಂಡನನ್ನು ಹತ್ಯೆ ಮಾಡಿ ಮೃತದೇಹವನ್ನು 6 ತುಂಡುಗಳಾಗಿ ಕತ್ತರಿಸಿ ಹೂತಿಟ್ಟ ವ್ಯಕ್ತಿ ಬಂಧನ

ಈ ವೇಳೆ ಆ ಯುವತಿ ನಾನು ನನ್ನ ಕುಟುಂಬದೊಂದಿಗೆ ಹೋಗಲು ಬಯಸುತ್ತೇನೆ ಎಂದು ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಮತ್ತು ಸಿ. ಜಯಚಂದ್ರನ್ ಅವರ ವಿಭಾಗೀಯ ಪೀಠಕ್ಕೆ ತಿಳಿಸಿದ್ದಳು. ನಾನು ವಿಷ್ಣುವಿನ ಜೊತೆ ಮದುವೆಯಾಗಲು ಸಾಧ್ಯವಿಲ್ಲ ಎಂದು ಕೂಡ ಹೇಳಿದ್ದಳು. ಒಂದು ವೇಳೆ ತನ್ನನ್ನು ಬಿಟ್ಟು ಹೋದರೆ ಕೊಲ್ಲುವುದಾಗಿ ವಿಷ್ಣು ಬೆದರಿಕೆ ಹಾಕಿದ್ದ. ಹೀಗಾಗಿ, ಇಷ್ಟು ದಿನ ಆತನೊಂದಿಗೆ ವಾಸವಾಗಿದ್ದೆ. ಆತ ನನ್ನ ಅಣ್ಣನಿದ್ದಂತೆ. ಆತನನ್ನು ಎಂದಿಗೂ ನಾನು ಪ್ರೀತಿ ಮಾಡಿಲ್ಲ ಎಂದು ಹೇಳಿದ್ದಳು.

ಇದನ್ನೂ ಓದಿ: Murder: ಪ್ರೇಯಸಿಯ ಕತ್ತು ಕೊಯ್ದು ಕೊಂದು, ಅಂಬಾಲಿ ಘಾಟ್​​ನಲ್ಲಿ ಎಸೆದ ಪ್ರೇಮಿ

ಆ ಯುವತಿ ನ್ಯಾಯಾಲಯಕ್ಕೆ ಸಲ್ಲಿಸಿದ ಹೇಳಿಕೆಯ ಪ್ರಕಾರ, ವಿಷ್ಣು ಈಗಾಗಲೇ ಬೇರೊಬ್ಬ ಮಹಿಳೆಯನ್ನು ಮದುವೆಯಾಗಿದ್ದು, ಪತ್ನಿಯೊಂದಿಗಿನ ಸಂಬಂಧ ತೊರೆದು ಆ ಯುವತಿಯನ್ನು ಮದುವೆಯಾಗಲು ನಿರ್ಧರಿಸಿದ್ದ. ಈ ವಿಚಾರಣೆಯ ನಂತರ ಆ ಯುವತಿ ತನ್ನ ಕುಟುಂಬದೊಂದಿಗೆ ಹೊರಟು ಹೋದಾಗ ಬೇಸರಗೊಂಡ ವಿಷ್ಣು ಜೇಬಿನಿಂದ ಚಾಕುವನ್ನು ತೆಗೆದುಕೊಂಡು ತನ್ನ ಕೈಯ ನರವನ್ನು ಕತ್ತರಿಸಿಕೊಂಡಿದ್ದಾನೆ. ರಕ್ತಸ್ರಾವದಿಂದ ನಿತ್ರಾಣಗೊಂಡಿದ್ದ ಆತನನ್ನು ಪೊಲೀಸರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇನ್ನಷ್ಟು ಕ್ರೈಮ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
ಪೊಲೀಸರ ಮುಂದೆ ತಂದೆಯ ಗುಟ್ಟು ರಟ್ಟು ಮಾಡಿದ 6 ವರ್ಷದ ಮಗ
ಪೊಲೀಸರ ಮುಂದೆ ತಂದೆಯ ಗುಟ್ಟು ರಟ್ಟು ಮಾಡಿದ 6 ವರ್ಷದ ಮಗ