AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Onam: ವಿಶೇಷ ಕಾರ್ಯಾಚರಣೆ ಮೂಲಕ 168 ಮಂದಿಯನ್ನು ಬಂಧಿಸಿದ ಅಬಕಾರಿ ಇಲಾಖೆ

ಓಣಂ ಹಬ್ಬದ ಹಿನ್ನೆಲೆ ಕೇರಳದ ಅಬಕಾರಿ ಇಲಾಖೆಯು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 500ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿ 168 ಮಂದಿಯನ್ನು ಬಂಧಿಸಿದೆ. ಇದೇ ವೇಳೆ ಅಪಾರ ಪ್ರಮಾಣದಲ್ಲಿ ಮಾದಕವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

Onam: ವಿಶೇಷ ಕಾರ್ಯಾಚರಣೆ ಮೂಲಕ 168 ಮಂದಿಯನ್ನು ಬಂಧಿಸಿದ ಅಬಕಾರಿ ಇಲಾಖೆ
ಸಾಂದರ್ಭಿಕ ಚಿತ್ರ
TV9 Web
| Updated By: Rakesh Nayak Manchi|

Updated on:Aug 27, 2022 | 6:48 AM

Share

ಕೊಚ್ಚಿ: ಕೇರಳದಲ್ಲಿ ಓಣಂ ಹಬ್ಬದ ಭರ್ಜರಿ ತಯಾರಿಗಳು ನಡೆಯುತ್ತಿದ್ದು, ಆಗಸ್ಟ್ 30ರಿಂದ ಸೆಪ್ಟೆಂಬರ್ 8ರ ವರೆಗೆ ರಾಜ್ಯಾದ್ಯಂತ ವಿಜ್ರಂಭಣೆಯಿಂದ ಆಚರಿಸಲಾಗುತ್ತಿದೆ. ಈ ನಡುವೆ ಮಾದಕವಸ್ತುಗಳ ಸಮರ ಸಾರಿದ ರಾಜ್ಯ ಅಬಕಾರಿ ಇಲಾಖೆ, 500ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿಕೊಂಡು ಒಟ್ಟು 168 ಮಂದಿಯನ್ನು ಬಂಧಿಸಿ ಅಪಾರ ಪ್ರಮಾಣದಲ್ಲಿ ಮಾದಕವಸ್ತುಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ.

ಓಣಂ ಹಬ್ಬದ ಪ್ರಯುಕ್ತ ಆಗಸ್ಟ್ 5 ರಂದು ಅಬಕಾರಿ ಇಲಾಖೆಯ ಅಧಿಕಾರಿಗಳು ವಿವಿಧ ಕಡೆಗಳಲ್ಲಿ ವಿಶೇಷ ಕಾರ್ಯಾಚರಣೆಯನ್ನು ಕೈಗೊಂಡಿದ್ದರು. ಈ ವೇಳೆ ಸುಮಾರು 360 ಲೀಟರ್ ಸ್ಪಿರಿಟ್, 96 ಲೀಟರ್ ಅರಕ್, 221 ಲೀಟರ್ ಭಾರತೀಯ ನಿರ್ಮಿತ ವಿದೇಶಿ ಮದ್ಯ, 44 ಲೀಟರ್ ಬಿಯರ್, 15 ಕೆ.ಜಿ. ಗಾಂಜಾ, 2 ಗಾಂಜಾ ಗಿಡಗಳು, 16 ಗ್ರಾಂ ಎಂಡಿಎಂಎ, 57 ಗ್ರಾಂ ಹೆರಾಯಿನ್ ಮತ್ತು 74 ಕೆಜಿ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಶೇಷ ಕಾರ್ಯಾಚರಣೆ ವೇಳೆ 73 ಅಬ್ಕಾರಿ ಪ್ರಕರಣಗಳು, 60 NDPS ಆಕ್ಟ್ ಮತ್ತು COPTA ಆಕ್ಟ್ ಅಡಿ 416 ಪ್ರಕರಣಗಳನ್ನು ದಾಖಲಿಸಿ ಒಟ್ಟು 168 ಮಂದಿಯನ್ನು ಬಂಧಿಸಲಾಗಿದೆ.

ಕಚೇರಿಪ್ಪಾಡಿ ಮೂಲದ ಅಬಕಾರಿ ವಿಭಾಗದ ಕಚೇರಿಯಲ್ಲಿ 24 ಗಂಟೆ ಕಂಟ್ರೋಲ್ ರೂಮ್ ತೆರೆಯಲಾಗಿದೆ. ಜಿಲ್ಲೆಯನ್ನು ಎರಡು ಘಟಕಗಳಾಗಿ ವಿಭಜಿಸಿ ವಿಶೇಷ ಸ್ಟ್ರೈಕಿಂಗ್ ಫೋರ್ಸ್ ಕೂಡ ರಚಿಸಲಾಗಿದೆ. ಅಲ್ಲದೆ ತಾಲೂಕು ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳು ಕಾರ್ಯನಿರ್ವಹಿಸುತ್ತಿವೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:48 am, Sat, 27 August 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್