AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಬಸ್​ನಲ್ಲಿ ಮಗಳ ಮೈ ಮುಟ್ಟಿದ ಕುಡುಕನ ಮೂಗು ಮುರಿದ ತಾಯಿ

Crime News Today: ಬಸ್​ನಲ್ಲಿ ಹೋಗುತ್ತಿದ್ದಾಗ ತನ್ನ ಮಗಳ ಜೊತೆ ಅನುಚಿತವಾಗಿ ವರ್ತಿಸಿ, ಲೈಂಗಿಕ ದೌರ್ಜನ್ಯ ಎಸಗಿದ ಕುಡುಕನ ಮೂಗನ್ನು ಆ ಬಾಲಕಿಯ ಕೇರಳದ ಮಹಿಳೆಯೊಬ್ಬರು ಮುರಿದಿರುವ ವಿಚಿತ್ರವಾದ ಘಟನೆಯೊಂದು ಬೆಳಕಿಗೆ ಬಂದಿದೆ.

Shocking News: ಬಸ್​ನಲ್ಲಿ ಮಗಳ ಮೈ ಮುಟ್ಟಿದ ಕುಡುಕನ ಮೂಗು ಮುರಿದ ತಾಯಿ
ಲೈಂಗಿಕ ಕಿರುಕುಳ ನೀಡಿದ ಕುಡುಕನ ಮೂಗು ಮುರಿದು ಹಾಕಿದ ತಾಯಿ Image Credit source: Mathrubhumi
ಸುಷ್ಮಾ ಚಕ್ರೆ
|

Updated on:Jun 26, 2024 | 9:45 PM

Share

ಕೊಟ್ಟಾಯಂ: ತನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ (Sexual Harassment) ಎಸಗಿದ 59 ವರ್ಷದ ವ್ಯಕ್ತಿಯೊಬ್ಬನಿಗೆ ಮಹಿಳೆ ಗುದ್ದಿದ್ದಾಳೆ. ಈ ವೇಳೆ ಆ ಕುಡುಕನ ಮೂಗಿನಲ್ಲಿ ರಕ್ತ ಸೋರತೊಡಗಿದೆ. ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಪಿಯುಸಿ ವಿದ್ಯಾರ್ಥಿನಿ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ನೆಲ್ಲಿಮುಕಲ್ ಜಂಕ್ಷನ್‌ನಲ್ಲಿ ಈ ಘಟನೆ (Shocking News) ನಡೆದಿದೆ. ಕೂಡಲೇ ಆಕೆಗೆ ಕಿರುಕುಳ ನೀಡಿದ ಕುಡುಕನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಾಲಕಿಯ ತಾಯಿ ನೀಡಿದ ದೂರಿನ ಪ್ರಕಾರ, ಆಕೆಯ ಮಗಳು ಬಸ್ ಇಳಿಯುವಾಗ ಪಿಳ್ಳೈ ಎಂಬಾತ ಆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಸ್‌ನಿಂದ ಇಳಿದ ಬಳಿಕ ಬಾಲಕಿ ತನ್ನ ತಾಯಿಗೆ ಫೋನ್ ಮಾಡಿ ಈ ಘಟನೆಯ ಬಗ್ಗೆ ತಿಳಿಸಿದ್ದಾಳೆ.

ಇದನ್ನೂ ಓದಿ: ರೇಣುಕಾ ಸ್ವಾಮಿ ಕೊಲೆ: ನಾಶ ಪಡಿಸಿದ್ದ ಮೊಬೈಲ್​ಗಳ ಮಾಹಿತಿ ಹೊರತೆಗೆಯಲಿರುವ ಪೊಲೀಸರು

ಇದರಿಂದ ಕೋಪಗೊಂಡ ತಾಯಿ ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ವಿಚಾರಿಸಿದ್ದಾರೆ. ಪಿಳ್ಳೈ ಆಗ ಕುಡಿತದ ಅಮಲಿನಲ್ಲಿ ಆ ಮಹಿಳೆಯ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಆಕೆ ಆತನ ಕೈ ಹಿಡಿದು, ಆತನ ಮೂಗಿಗೆ ಗುದ್ದಿದ್ದಾಳೆ. ಇದರಿಂದ ಆತನ ಮೂಗು ಮುರಿದುಹೋಗಿದೆ. ಬಳಿಕ ಪೋಲೀಸರು ಪಿಳ್ಳೈಯನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಆತನ ವಿರುದ್ಧ ಪೋಕ್ಸೋ ಪ್ರಕರಣವನ್ನು ದಾಖಲಿಸಿದ್ದಾರೆ.

ಆ ಕುಡುಕನ ಮುಖಕ್ಕೆ ಹೊಡೆದು ಮೂಗು ಮುರಿದು ರಕ್ತ ಸುರಿದಿರುವ ಕಾರಣದಿಂದ ಪೊಲೀಸರು ಮಹಿಳೆಯ ಮೇಲೆ ಐಪಿಸಿಯ ಸೆಕ್ಷನ್ 325 (ಘೋರವಾದ ಗಾಯವನ್ನು ಉಂಟುಮಾಡುತ್ತದೆ) ಅಡಿಯಲ್ಲಿ ಆರೋಪ ಹೊರಿಸುವ ಸಾಧ್ಯತೆಯಿದೆ. ಪೊಲೀಸರು ಪೋಕ್ಸೊ ದೂರು ದಾಖಲಿಸಿದ್ದು, ಆತ್ಮರಕ್ಷಣೆಗಾಗಿ ಈ ಕೃತ್ಯ ಎಸಗಿದ್ದೇನೆ ಎಂದು ಬಾಲಕಿಯ ತಾಯಿ ಹೇಳಿದ್ದಾರೆ.

ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರ ನಡೆಸಿ 13 ವರ್ಷದ ಬಾಲಕಿಯ ಕೊಲೆ; ಹರಿದ್ವಾರ ಹೆದ್ದಾರಿಯಲ್ಲಿ ಶವ ಪತ್ತೆ

ಪೊಲೀಸರು ತಾಯಿಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ ಮತ್ತು ಆಕೆಯ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈದ್ಯಕೀಯ ವರದಿಗಳು ಸೇರಿದಂತೆ ಎಲ್ಲಾ ಅಂಶಗಳನ್ನು ಪರಿಗಣಿಸುತ್ತಾರೆ. ಆರೋಪಿಯ ವೈದ್ಯಕೀಯ ತಪಾಸಣೆ ನಡೆಸಲಾಯಿತು. ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:44 pm, Wed, 26 June 24

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ