AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಬಸ್​ನಲ್ಲಿ ಮಗಳ ಮೈ ಮುಟ್ಟಿದ ಕುಡುಕನ ಮೂಗು ಮುರಿದ ತಾಯಿ

Crime News Today: ಬಸ್​ನಲ್ಲಿ ಹೋಗುತ್ತಿದ್ದಾಗ ತನ್ನ ಮಗಳ ಜೊತೆ ಅನುಚಿತವಾಗಿ ವರ್ತಿಸಿ, ಲೈಂಗಿಕ ದೌರ್ಜನ್ಯ ಎಸಗಿದ ಕುಡುಕನ ಮೂಗನ್ನು ಆ ಬಾಲಕಿಯ ಕೇರಳದ ಮಹಿಳೆಯೊಬ್ಬರು ಮುರಿದಿರುವ ವಿಚಿತ್ರವಾದ ಘಟನೆಯೊಂದು ಬೆಳಕಿಗೆ ಬಂದಿದೆ.

Shocking News: ಬಸ್​ನಲ್ಲಿ ಮಗಳ ಮೈ ಮುಟ್ಟಿದ ಕುಡುಕನ ಮೂಗು ಮುರಿದ ತಾಯಿ
ಲೈಂಗಿಕ ಕಿರುಕುಳ ನೀಡಿದ ಕುಡುಕನ ಮೂಗು ಮುರಿದು ಹಾಕಿದ ತಾಯಿ Image Credit source: Mathrubhumi
ಸುಷ್ಮಾ ಚಕ್ರೆ
|

Updated on:Jun 26, 2024 | 9:45 PM

Share

ಕೊಟ್ಟಾಯಂ: ತನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ (Sexual Harassment) ಎಸಗಿದ 59 ವರ್ಷದ ವ್ಯಕ್ತಿಯೊಬ್ಬನಿಗೆ ಮಹಿಳೆ ಗುದ್ದಿದ್ದಾಳೆ. ಈ ವೇಳೆ ಆ ಕುಡುಕನ ಮೂಗಿನಲ್ಲಿ ರಕ್ತ ಸೋರತೊಡಗಿದೆ. ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಪಿಯುಸಿ ವಿದ್ಯಾರ್ಥಿನಿ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ನೆಲ್ಲಿಮುಕಲ್ ಜಂಕ್ಷನ್‌ನಲ್ಲಿ ಈ ಘಟನೆ (Shocking News) ನಡೆದಿದೆ. ಕೂಡಲೇ ಆಕೆಗೆ ಕಿರುಕುಳ ನೀಡಿದ ಕುಡುಕನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಾಲಕಿಯ ತಾಯಿ ನೀಡಿದ ದೂರಿನ ಪ್ರಕಾರ, ಆಕೆಯ ಮಗಳು ಬಸ್ ಇಳಿಯುವಾಗ ಪಿಳ್ಳೈ ಎಂಬಾತ ಆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಸ್‌ನಿಂದ ಇಳಿದ ಬಳಿಕ ಬಾಲಕಿ ತನ್ನ ತಾಯಿಗೆ ಫೋನ್ ಮಾಡಿ ಈ ಘಟನೆಯ ಬಗ್ಗೆ ತಿಳಿಸಿದ್ದಾಳೆ.

ಇದನ್ನೂ ಓದಿ: ರೇಣುಕಾ ಸ್ವಾಮಿ ಕೊಲೆ: ನಾಶ ಪಡಿಸಿದ್ದ ಮೊಬೈಲ್​ಗಳ ಮಾಹಿತಿ ಹೊರತೆಗೆಯಲಿರುವ ಪೊಲೀಸರು

ಇದರಿಂದ ಕೋಪಗೊಂಡ ತಾಯಿ ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ವಿಚಾರಿಸಿದ್ದಾರೆ. ಪಿಳ್ಳೈ ಆಗ ಕುಡಿತದ ಅಮಲಿನಲ್ಲಿ ಆ ಮಹಿಳೆಯ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಆಕೆ ಆತನ ಕೈ ಹಿಡಿದು, ಆತನ ಮೂಗಿಗೆ ಗುದ್ದಿದ್ದಾಳೆ. ಇದರಿಂದ ಆತನ ಮೂಗು ಮುರಿದುಹೋಗಿದೆ. ಬಳಿಕ ಪೋಲೀಸರು ಪಿಳ್ಳೈಯನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಆತನ ವಿರುದ್ಧ ಪೋಕ್ಸೋ ಪ್ರಕರಣವನ್ನು ದಾಖಲಿಸಿದ್ದಾರೆ.

ಆ ಕುಡುಕನ ಮುಖಕ್ಕೆ ಹೊಡೆದು ಮೂಗು ಮುರಿದು ರಕ್ತ ಸುರಿದಿರುವ ಕಾರಣದಿಂದ ಪೊಲೀಸರು ಮಹಿಳೆಯ ಮೇಲೆ ಐಪಿಸಿಯ ಸೆಕ್ಷನ್ 325 (ಘೋರವಾದ ಗಾಯವನ್ನು ಉಂಟುಮಾಡುತ್ತದೆ) ಅಡಿಯಲ್ಲಿ ಆರೋಪ ಹೊರಿಸುವ ಸಾಧ್ಯತೆಯಿದೆ. ಪೊಲೀಸರು ಪೋಕ್ಸೊ ದೂರು ದಾಖಲಿಸಿದ್ದು, ಆತ್ಮರಕ್ಷಣೆಗಾಗಿ ಈ ಕೃತ್ಯ ಎಸಗಿದ್ದೇನೆ ಎಂದು ಬಾಲಕಿಯ ತಾಯಿ ಹೇಳಿದ್ದಾರೆ.

ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರ ನಡೆಸಿ 13 ವರ್ಷದ ಬಾಲಕಿಯ ಕೊಲೆ; ಹರಿದ್ವಾರ ಹೆದ್ದಾರಿಯಲ್ಲಿ ಶವ ಪತ್ತೆ

ಪೊಲೀಸರು ತಾಯಿಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ ಮತ್ತು ಆಕೆಯ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈದ್ಯಕೀಯ ವರದಿಗಳು ಸೇರಿದಂತೆ ಎಲ್ಲಾ ಅಂಶಗಳನ್ನು ಪರಿಗಣಿಸುತ್ತಾರೆ. ಆರೋಪಿಯ ವೈದ್ಯಕೀಯ ತಪಾಸಣೆ ನಡೆಸಲಾಯಿತು. ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:44 pm, Wed, 26 June 24

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ