AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cheating Case: ಐದು ವರ್ಷದಿಂದ ಪರಾರಿಯಾಗಿದ್ದ ಕೇರಳ ಮೂಲದ ಮಹಿಳೆ ಬಂಧನ

Kerala Woman Arrested By Vitla Police: ವಂಚನೆ ಪ್ರಕರಣದಲ್ಲಿ ಐದು ವರ್ಷಗಳಿಂದ ತಪ್ಪಿಸಿಕೊಂಡು ತಿರುಗುತ್ತಿದ್ದ ಮಹಿಳೆಯೊಬ್ಬರು ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ವಿಟ್ಲ ಪೊಲೀಸರು ಕೇರಳದ ಕಣ್ಣೂರಿನ ಪಯ್ಯನೂರಿನ ಪಣಚೇರಿಯ ನಿವಾಸಿ 42 ವರ್ಷದ ಸುಜಾತಾರನ್ನು ಬಂಧಿಸಿದ್ದಾರೆ.

Cheating Case: ಐದು ವರ್ಷದಿಂದ ಪರಾರಿಯಾಗಿದ್ದ ಕೇರಳ ಮೂಲದ ಮಹಿಳೆ ಬಂಧನ
ಪ್ರಾತಿನಿಧಿಕ ಚಿತ್ರ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 10, 2023 | 2:04 PM

Share

ಮಂಗಳೂರು: ವಂಚನೆ ಪ್ರಕರಣದಲ್ಲಿ ಐದು ವರ್ಷಗಳಿಂದ ತಪ್ಪಿಸಿಕೊಂಡು ತಿರುಗುತ್ತಿದ್ದ ಮಹಿಳೆಯೊಬ್ಬರು ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ವಿಟ್ಲ ಪೊಲೀಸರು (Vitla Police Station) ಕೇರಳದ ಕಣ್ಣೂರಿನ ಪಯ್ಯನೂರಿನ ಪಣಚೇರಿಯ ನಿವಾಸಿ 42 ವರ್ಷದ ಸುಜಾತಾರನ್ನು ಬಂಧಿಸಿದ್ದಾರೆ. ವಂಚನೆ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿದ್ದ ಸುಜಾತಾ 5 ವರ್ಷಗಳ ಹಿಂದೆ ಕೋರ್ಟ್​ಗೆ ಹಾಜರಾಗಲು ವಿಫಲರಾಗಿದ್ದರು. ಅವರಿಗೆ ಲುಕೌಟ್ ನೋಟೀಸ್ ನೀಡಲಾಗಿತ್ತು.

ವಿಟ್ಲ ಪೊಲೀಸ್ ಠಾಣೆಯಲ್ಲಿ ಸುಜಾತಾ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್​ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕೋರ್ಟ್ ವಿಚಾರಣೆ ಹಾಜರಾಗದೇ ಹೋದ್ದರಿಂದ ಲುಕೌಟ್ ನೋಟೀಸ್ ಜಾರಿ ಮಾಡಲಾಗಿತ್ತು. ಮೊನ್ನೆ ಬುಧವಾರದಂದು ಸುಜಾತಾ ಕೇರಳದ ಕೋಳಿಕೋಡ್​ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲಲ್ಇ ಇರುವ ಬಗ್ಗೆ ವಲಸೆ ಅಧಿಕಾರಿಗಳಿಂದ ವಿಟ್ಲ ಠಾಣೆಗೆ ಮಾಹಿತಿ ಬಂದಿತು. ವಲಸೆ ಅಧಿಕಾರಿಗಳು ಆಕೆಯನ್ನು ವಶಕ್ಕೆ ಪಡೆದು ಸ್ಥಳೀಯ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ನಂತರ ವಿಟ್ಲ ಪೊಲೀಸರ ತಂಡವೊಂದು ಕೋಳಿಕೋಡ್​ಗೆ ಹೋಗಿ ಸುಜಾತಾರನ್ನು ಕರೆ ತಂದಿದೆ. ನಂತರ ನಿನ್ನೆ ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು ಎಂದು ಮಂಗಳೂರು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಪೊಲೀಸರೆಂದು ಹೇಳಿಕೊಂಡು 6 ಲಕ್ಷ ನಗದು, ಚಿನ್ನದ ಬಿಸ್ಕತ್​​ ದರೋಡೆ ಮಾಡಿದ ಗ್ಯಾಂಗ್

2013ರಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಈಕೆಯ ಮೇಲೆ ಪೊಲೀಸರು ವಂಚನೆ ಪ್ರಕರಣವೊಂದನ್ನು ದಾಖಲಿಸಲಾಗಿತ್ತು. ಆ ಸಂಬಂಧ ಕೋರ್ಟ್ ವಿಚಾರಣೆ ನಡೆದಿತ್ತು. ಕಳೆದ ಐದು ವರ್ಷಗಳಿಂದಲೂ ಈಕೆ ವಿಚಾರಣೆಗೆ ಹಾಜರಾಗಿರಲಿಲ್ಲ. ವಿದೇಶವೊಂದಕ್ಕೆ ಈಕೆ ತಪ್ಪಿಸಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ. ಈಗ ತವರುನಾಡಿಗೆ ಕಾಲಿಟ್ಟು ಜೈಲುಪಾಲಾಗಿದ್ದಾರೆ.

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!