Sign In

By signing in or creating an account, you agree with Associated Broadcasting Company's Terms & Conditions and Privacy Policy.

Cheating Case: ಐದು ವರ್ಷದಿಂದ ಪರಾರಿಯಾಗಿದ್ದ ಕೇರಳ ಮೂಲದ ಮಹಿಳೆ ಬಂಧನ

Kerala Woman Arrested By Vitla Police: ವಂಚನೆ ಪ್ರಕರಣದಲ್ಲಿ ಐದು ವರ್ಷಗಳಿಂದ ತಪ್ಪಿಸಿಕೊಂಡು ತಿರುಗುತ್ತಿದ್ದ ಮಹಿಳೆಯೊಬ್ಬರು ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ವಿಟ್ಲ ಪೊಲೀಸರು ಕೇರಳದ ಕಣ್ಣೂರಿನ ಪಯ್ಯನೂರಿನ ಪಣಚೇರಿಯ ನಿವಾಸಿ 42 ವರ್ಷದ ಸುಜಾತಾರನ್ನು ಬಂಧಿಸಿದ್ದಾರೆ.

Cheating Case: ಐದು ವರ್ಷದಿಂದ ಪರಾರಿಯಾಗಿದ್ದ ಕೇರಳ ಮೂಲದ ಮಹಿಳೆ ಬಂಧನ
ಪ್ರಾತಿನಿಧಿಕ ಚಿತ್ರ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 10, 2023 | 2:04 PM

ಮಂಗಳೂರು: ವಂಚನೆ ಪ್ರಕರಣದಲ್ಲಿ ಐದು ವರ್ಷಗಳಿಂದ ತಪ್ಪಿಸಿಕೊಂಡು ತಿರುಗುತ್ತಿದ್ದ ಮಹಿಳೆಯೊಬ್ಬರು ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ವಿಟ್ಲ ಪೊಲೀಸರು (Vitla Police Station) ಕೇರಳದ ಕಣ್ಣೂರಿನ ಪಯ್ಯನೂರಿನ ಪಣಚೇರಿಯ ನಿವಾಸಿ 42 ವರ್ಷದ ಸುಜಾತಾರನ್ನು ಬಂಧಿಸಿದ್ದಾರೆ. ವಂಚನೆ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿದ್ದ ಸುಜಾತಾ 5 ವರ್ಷಗಳ ಹಿಂದೆ ಕೋರ್ಟ್​ಗೆ ಹಾಜರಾಗಲು ವಿಫಲರಾಗಿದ್ದರು. ಅವರಿಗೆ ಲುಕೌಟ್ ನೋಟೀಸ್ ನೀಡಲಾಗಿತ್ತು.

ವಿಟ್ಲ ಪೊಲೀಸ್ ಠಾಣೆಯಲ್ಲಿ ಸುಜಾತಾ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್​ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕೋರ್ಟ್ ವಿಚಾರಣೆ ಹಾಜರಾಗದೇ ಹೋದ್ದರಿಂದ ಲುಕೌಟ್ ನೋಟೀಸ್ ಜಾರಿ ಮಾಡಲಾಗಿತ್ತು. ಮೊನ್ನೆ ಬುಧವಾರದಂದು ಸುಜಾತಾ ಕೇರಳದ ಕೋಳಿಕೋಡ್​ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲಲ್ಇ ಇರುವ ಬಗ್ಗೆ ವಲಸೆ ಅಧಿಕಾರಿಗಳಿಂದ ವಿಟ್ಲ ಠಾಣೆಗೆ ಮಾಹಿತಿ ಬಂದಿತು. ವಲಸೆ ಅಧಿಕಾರಿಗಳು ಆಕೆಯನ್ನು ವಶಕ್ಕೆ ಪಡೆದು ಸ್ಥಳೀಯ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ನಂತರ ವಿಟ್ಲ ಪೊಲೀಸರ ತಂಡವೊಂದು ಕೋಳಿಕೋಡ್​ಗೆ ಹೋಗಿ ಸುಜಾತಾರನ್ನು ಕರೆ ತಂದಿದೆ. ನಂತರ ನಿನ್ನೆ ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು ಎಂದು ಮಂಗಳೂರು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಪೊಲೀಸರೆಂದು ಹೇಳಿಕೊಂಡು 6 ಲಕ್ಷ ನಗದು, ಚಿನ್ನದ ಬಿಸ್ಕತ್​​ ದರೋಡೆ ಮಾಡಿದ ಗ್ಯಾಂಗ್

2013ರಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಈಕೆಯ ಮೇಲೆ ಪೊಲೀಸರು ವಂಚನೆ ಪ್ರಕರಣವೊಂದನ್ನು ದಾಖಲಿಸಲಾಗಿತ್ತು. ಆ ಸಂಬಂಧ ಕೋರ್ಟ್ ವಿಚಾರಣೆ ನಡೆದಿತ್ತು. ಕಳೆದ ಐದು ವರ್ಷಗಳಿಂದಲೂ ಈಕೆ ವಿಚಾರಣೆಗೆ ಹಾಜರಾಗಿರಲಿಲ್ಲ. ವಿದೇಶವೊಂದಕ್ಕೆ ಈಕೆ ತಪ್ಪಿಸಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ. ಈಗ ತವರುನಾಡಿಗೆ ಕಾಲಿಟ್ಟು ಜೈಲುಪಾಲಾಗಿದ್ದಾರೆ.

ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ