AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಅಕ್ಯುಪಂಕ್ಚರ್ ಚಿಕಿತ್ಸೆ ಮೂಲಕ ಮನೆಯಲ್ಲೇ ಹೆರಿಗೆ ಮಾಡಿಸಿದ ಪತಿ; ಬಾಣಂತಿ, ಮಗು ಸಾವು

ಯಾಸ್ ಅವರ ಪತ್ನಿ ಶಮೀರಾ ಬೀವಿ (36) ಮತ್ತು ಅವರ ನವಜಾತ ಶಿಶು ಮಂಗಳವಾರ ಸಾವಿಗೀಡಾಗಿದೆ. ಮಂಗಳವಾರ ಮನೆಯಲ್ಲಿ ಹೆರಿಗೆ ವೇಳೆ ಅತಿಯಾದ ರಕ್ತಸ್ರಾವವಾಗಿ ಶಮೀರಾ ಪ್ರಜ್ಞೆ ತಪ್ಪಿದ್ದರು. ನಂತರ ನಯಾಸ್ ಆಂಬ್ಯುಲೆನ್ಸ್‌ಗೆ ಕರೆ ಮಾಡಿ ಕಿಲ್ಲಿಪಾಲಂನಲ್ಲಿರುವ ಆಸ್ಪತ್ರೆಗೆ ಕರೆದೊಯ್ದರು. ಅಷ್ಟರಲ್ಲಿ ತಾಯಿ ಮತ್ತು ಮಗು ಸಾವಿಗೀಡಾಗಿದ್ದರು ಎಂದು ವೈದ್ಯರು ಹೇಳಿದ್ದಾರೆ.

ಕೇರಳ: ಅಕ್ಯುಪಂಕ್ಚರ್ ಚಿಕಿತ್ಸೆ ಮೂಲಕ ಮನೆಯಲ್ಲೇ ಹೆರಿಗೆ ಮಾಡಿಸಿದ ಪತಿ; ಬಾಣಂತಿ, ಮಗು ಸಾವು
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 22, 2024 | 8:46 PM

Share

ತಿರುವನಂತಪುರಂ ಫೆಬ್ರುವರಿ 22: ಮನೆಯಲ್ಲಿ ಹೆರಿಗೆ ವೇಳೆ ತಾಯಿ ಮತ್ತು ಮಗು ಸಾವನ್ನಪ್ಪಿದ ಪ್ರಕರಣದಲ್ಲಿ ಪತಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೇರಳದ (kerala) ತಿರುವನಂತಪುರಂ ಜಿಲ್ಲೆಯ ಕಾರೈಕ್ಕಾಮಂಡಪದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿರುವ ಪೂಂತುರಾ ಮೂಲದ ನಯಾಸ್ ವಿರುದ್ಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಆತ ಪೊಲೀಸ್ ಕಸ್ಟಡಿಯಲ್ಲಿದ್ದಾನೆ. ನಯಾಸ್ ಅವರ ಪತ್ನಿ ಶಮೀರಾ ಬೀವಿ (36) ಮತ್ತು ಅವರ ನವಜಾತ ಶಿಶು ಮಂಗಳವಾರ ಸಾವಿಗೀಡಾಗಿದೆ. ಮಂಗಳವಾರ ಮನೆಯಲ್ಲಿ ಹೆರಿಗೆ ವೇಳೆ ಅತಿಯಾದ ರಕ್ತಸ್ರಾವವಾಗಿ ಶಮೀರಾ ಪ್ರಜ್ಞೆ ತಪ್ಪಿದ್ದರು. ನಂತರ ನಯಾಸ್ ಆಂಬ್ಯುಲೆನ್ಸ್‌ಗೆ ಕರೆ ಮಾಡಿ ಕಿಲ್ಲಿಪಾಲಂನಲ್ಲಿರುವ ಆಸ್ಪತ್ರೆಗೆ ಕರೆದೊಯ್ದರು. ಅಷ್ಟರಲ್ಲಿ ತಾಯಿ ಮತ್ತು ಮಗು ಸಾವಿಗೀಡಾಗಿದ್ದರು ಎಂದು ವೈದ್ಯರು ಹೇಳಿದ್ದಾರೆ.

ಗರ್ಭಿಣಿಯಾಗಿರುವ ಶಮೀರಾ ಅವರಿಗೆ ಆಸ್ಪತ್ರೆಯಿಂದ ಚಿಕಿತ್ಸೆ ಕೊಡಿಸುವಂತೆ ಒತ್ತಾಯಿಸಿದ್ದಕ್ಕೆ ನಯಾಸ್ ಆರೋಗ್ಯ ಕಾರ್ಯಕರ್ತರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಒಂದು ತಿಂಗಳ ಹಿಂದೆ ಶಮೀರಾ ಅಸ್ವಸ್ಥಗೊಂಡಿರುವ ಬಗ್ಗೆ ನೆರೆಹೊರೆಯವರು ಹೇಳಿದಾಗ ನಯಾಸ್ ಅವರ ಮೊದಲ ಪತ್ನಿ ಮತ್ತು ಮಗಳು ಬಂದು ಅವರನ್ನು ಕರೆದುಕೊಂಡು ಹೋಗಿದ್ದರು. ಮರಳಿ ಮನೆಗೆ ಬಂದ ನಂತರ ಶಮೀರಾ ಬೀವಿ ಯಾರೊಂದಿಗೂ ಮಾತನಾಡಲಿಲ್ಲ.

ಆಶಾ ಕಾರ್ಯಕರ್ತೆಯರು ಮನೆ ತಲುಪಿದಾಗ ನಯಾಸ್ ಅವರನ್ನು ಗದರಿಸಿದ್ದರು. ಪತ್ನಿಯನ್ನು ಹೇಗೆ ನೋಡಿಕೊಳ್ಳಬೇಕು ಎಂಬುದು ನನಗೆ ಗೊತ್ತಿದೆ. ನೆರೆಹೊರೆಯವರು, ಆಶಾ ಕಾರ್ಯಕರ್ತೆಯರು ಅಡ್ಡಿಪಡಿಸಬಾರದು ಎಂದು ನಯಾಸ್ ಗದರಿದ್ದರು. ನಯಾಸ್ ಪತ್ನಿಗೆ ಅಕ್ಯುಪಂಕ್ಚರ್ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಕ್ಯುಪಂಕ್ಚರ್ ಚಿಕಿತ್ಸೆಯ ಮೂಲಕ ಹೆರಿಗೆ ಮಾಡುವಂತೆ ನಯಾಸ್ ಪತ್ನಿಗೆ ಹೇಳಿದ್ದನ ಎಂದು ನೆರೆಹೊರೆಯವರು ಹೇಳಿರುವುದಾಗಿ ಮಾತೃಭೂಮಿ ಪತ್ರಿಕೆ ವರದಿ ಮಾಡಿದೆ.  ಶಮೀರಾ ಅವರ ಮೊದಲ ಹೆರಿಗೆ ನೆಡುಮಂಙಾಡ್ ನಲ್ಲಿ ಆಗಿತ್ತು. ಆಗಲೂ ಪತಿ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿರಲಿಲ್ಲ. ಸ್ಥಳೀಯರು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು ಎಂದು ವರದಿಯಾಗಿದೆ.

ಇದನ್ನೂ ಓದಿ: ವಿದ್ಯಾರ್ಥಿ ಅನುಮಾನಾಸ್ಪದ ಸಾವು: ಮೃತನ ತಂದೆಗೆ ಹಾಸ್ಟೆಲ್ ವಾರ್ಡನ್ ಕರೆ ಮಾಡಿ ಹೇಳಿದ್ದೇನು? ಇಲ್ಲಿದೆ ಆಡಿಯೋ ಸಂಭಾಷಣೆ

ವಾರ್ಡ್ ಕೌನ್ಸೆಲರ್ ಯು.ದೀಪಿಕಾ ಕೂಡ ಪ್ರತಿಕ್ರಿಯಿಸಿದ್ದು, ಶಮೀರಾ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಲು ಬಯಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವುದಾಗಿ ಹೇಳಿ ಮನೆಗೆ ಬಂದಾಗ ನಯಾಸ್ ಬಾಗಿಲು ತೆರೆಯಲಿಲ್ಲ. ಕೇರಳದಲ್ಲಿ ಚಿಕಿತ್ಸಾ ವ್ಯವಸ್ಥೆ ಸರಿಯಿಲ್ಲ ಎಂದು ಪತಿ ಹಠ ಹಿಡಿದಿದ್ದು, ಈ ಹಿಂದೆ ಸಿಸೇರಿಯನ್ ಮಾಡಿದ್ದು ತಪ್ಪಾಗಿದೆ. ಹಾಗಾಗಿ ನಾರ್ಮಲ್ ಡೆಲಿವರಿಮಾಡಿಸಿಕೊಳ್ಳುವುದಾಗಿ ತಿಳಿಸಿದ್ದಾರೆ. ನಾನು ಪೊಲೀಸರನ್ನು ಕರೆದುಕೊಂಡು ಹೋದಾಗ ಇನ್ನು ಮುಂದೆ ತನ್ನ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದಿದ್ದರು ಶಮೀರಾ ಎಂದು ವಾರ್ಡ್ ಕೌನ್ಸಿಲರ್ ಹೇಳಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ