AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ತಪಾಸಣೆಗೆಂದು ಪೊಲೀಸರು ಆಸ್ಪತ್ರೆಗೆ ಕರೆದುಕೊಂಡು ಬಂದ ಆರೋಪಿಯಿಂದ ಇರಿತ; ವೈದ್ಯೆ ಸಾವು

Vandana Das Murder:ಸಂದೀಪ್ ಗಾಯಕ್ಕೆ ಚಿಕಿತ್ಸೆ ನೀಡುತ್ತಿರುವಾಗ ಆತ ಆಸ್ಪತ್ರೆಯ ಡ್ರೆಸ್ಸಿಂಗ್ ರೂಮ್‌ನಲ್ಲಿದ್ದ ಶಸ್ತ್ರಚಿಕಿತ್ಸೆಯ ಕತ್ತರಿಯನ್ನು ಕೈಗೆತ್ತಿಕೊಂಡಿದ್ದಾನೆ. ಈ ಕತ್ತರಿಯಿಂದ ಆತ ವೈದ್ಯೆ ವಂದನಾಳ ಎದೆಗೆ ಮತ್ತು ಕುತ್ತಿಗೆಗೆ ಪದೇ ಪದೇ ಇರಿದಿದ್ದಲ್ಲದೆ ಆಸ್ಪತ್ರೆಗೆ ಕರೆದೊಯ್ದ ಪೊಲೀಸರ ಮೇಲೂ ಹಲ್ಲೆ ನಡೆಸಿದ್ದಾನೆ.

ಕೇರಳ: ತಪಾಸಣೆಗೆಂದು ಪೊಲೀಸರು ಆಸ್ಪತ್ರೆಗೆ ಕರೆದುಕೊಂಡು ಬಂದ ಆರೋಪಿಯಿಂದ ಇರಿತ; ವೈದ್ಯೆ ಸಾವು
ಡಾ. ವಂದನಾ ದಾಸ್
ರಶ್ಮಿ ಕಲ್ಲಕಟ್ಟ
|

Updated on:May 10, 2023 | 1:53 PM

Share

ಕೊಲ್ಲಂ: ಕೇರಳದ (Kerala) ಕೊಲ್ಲಂನ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯೆಯೊಬ್ಬರನ್ನು(Doctor) ಪೊಲೀಸರು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆತಂದ ಶಾಲಾ ಶಿಕ್ಷಕನೊಬ್ಬ ಬುಧವಾರ ಕತ್ತರಿಯಿಂದ ಇರಿದು ಕೊಂದಿರುವ ಘಟನೆ ವರದಿ ಆಗಿದೆ. ಕೊಟ್ಟಾರಕ್ಕರ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಂದನಾ ದಾಸ್ (23) (Vandana Das)ಎಂಬ ವೈದ್ಯೆಯ ಎದೆ ಮತ್ತು ಕತ್ತಿನ ಮೇಲೆ ಆರೋಪಿ ಅನೇಕ ಬಾರಿ ಇರಿದಿದ್ದಾನೆ. ಗಂಭೀರ ಗಾಯಗೊಂಡ ವಂದನಾ ಅವರನ್ನು ತಿರುವನಂತಪುರಂನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಅವರು ಸಾವಿಗೀಡಾಗಿದ್ದಾರೆ.

42ರ ಹರೆಯದ ಆರೋಪಿ ಎಸ್ ಸಂದೀಪ್  ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ. ಈತ ಪೊಲೀಸರು ಸೇರಿದಂತೆ ಆಸ್ಪತ್ರೆಯಲ್ಲಿ ಇತರ ನಾಲ್ವರ ಮೇಲೆ ಹಲ್ಲೆ ನಡೆಸಿದ್ದಾನೆ. ವೈದ್ಯಕೀಯ ಪರೀಕ್ಷೆಗಾಗಿ ಪೊಲೀಸರು ಈತನನ್ನು ಆಸ್ಪತ್ರೆಗೆ ಕರೆತಂದಿದ್ದರು.

ಪೊಲೀಸರ ಪ್ರಕಾರ, ಮಂಗಳವಾರ ರಾತ್ರಿ ಸಂದೀಪ್ ಸಿಟ್ಟುಗೊಂಡು ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿದ ನಂತರ ಆತನನ್ನು ಆತನ ಮನೆಯಿಂದ ಬಂಧಿಸಲಾಯಿತು. ಸಂದೀಪ್ ಅವರ ಹಿಂಸಾತ್ಮಕ ವರ್ತನೆಯ ಬಗ್ಗೆ ಅವರ ಕುಟುಂಬ ಸದಸ್ಯರು ದೂರು ನೀಡಿದ್ದರು.

ಇದನ್ನೂ ಓದಿ: Kerala boat tragedy: ಬೋಟ್​​ನ ಗಾಜು ಕೈಯಿಂದಲೇ ಒಡೆದು 7 ಜನರನ್ನು ರಕ್ಷಿಸಿದ ರಶೀದ್, ತಾನೂರಿನ ಸ್ಥಳೀಯರೇ ರಿಯಲ್ ಹೀರೋಗಳು

ಸಂದೀಪ್ ಕಾಲಿಗೆ ಸಣ್ಣ ಗಾಯವಾಗಿದ್ದರಿಂದ, ಪೊಲೀಸ್ ತಂಡವು ಅವರನ್ನು ಕಡ್ಡಾಯ ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ದಿತ್ತು. ಅಲ್ಲಿ ಆತ ಯಾವುದೇ ಪ್ರಚೋದನೆಯಿಲ್ಲದೆ ಹಲ್ಲೆ ನಡೆಸಿದ್ದಾನೆ. ಸಂದೀಪ್ ಗಾಯಕ್ಕೆ ಚಿಕಿತ್ಸೆ ನೀಡುತ್ತಿರುವಾಗ ಆತ ಆಸ್ಪತ್ರೆಯ ಡ್ರೆಸ್ಸಿಂಗ್ ರೂಮ್‌ನಲ್ಲಿದ್ದ ಶಸ್ತ್ರಚಿಕಿತ್ಸೆಯ ಕತ್ತರಿಯನ್ನು ಕೈಗೆತ್ತಿಕೊಂಡಿದ್ದಾನೆ. ಈ ಕತ್ತರಿಯಿಂದ ಆತ ವೈದ್ಯೆ ವಂದನಾಳ ಎದೆಗೆ ಮತ್ತು ಕುತ್ತಿಗೆಗೆ ಪದೇ ಪದೇ ಇರಿದಿದ್ದಲ್ಲದೆ ಆಸ್ಪತ್ರೆಗೆ ಕರೆದೊಯ್ದ ಪೊಲೀಸರ ಮೇಲೂ ಹಲ್ಲೆ ನಡೆಸಿದ್ದಾನೆ.

ಕೇರಳ ಸರ್ಕಾರಿ ವೈದ್ಯಕೀಯ ಅಧಿಕಾರಿಗಳ ಸಂಘ (ಕೆಜಿಎಂಒಎ), ರಾಜ್ಯದ ಸರ್ಕಾರಿ ವೈದ್ಯರ ಸಂಘಟನೆಯು ಹತ್ಯೆಯ ವಿರುದ್ಧ ಪ್ರತಿಭಟನೆ ನಡೆಸಿದೆ. KGMOA ಕೊಲ್ಲಂ ಜಿಲ್ಲೆಯಲ್ಲಿ ಮುಷ್ಕರ ಘೋಷಿಸಿದೆ.

ಆರೋಪಿ ಮಾದಕವಸ್ತು ವ್ಯಸನಿ

ಕೊಟ್ಟಾರಕ್ಕರದಲ್ಲಿ ಕರ್ತವ್ಯದ ವೇಳೆವೈದ್ಯೆಯೊಬ್ಬರನ್ನು ಇರಿದು ಕೊಂದ ಪ್ರಕರಣದ ಆರೋಪಿ ಶಿಕ್ಷಕ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ನೆಡುಂಪಣ ಯು.ಪಿ ಶಾಲಾ ಶಿಕ್ಷಕ ಎಂದು ಪೊಲೀಸರು ತಿಳಿಸಿದ್ದಾರೆ. ಮಾದಕ ವ್ಯಸನದಿಂದಾಗಿ ಆತನನ್ನು ಅಮಾನತುಗೊಳಿಸಲಾಗಿತ್ತು. ಈತ ಇತ್ತೀಚೆಗಷ್ಟೇ ಡಿ-ಅಡಿಕ್ಷನ್ ಸೆಂಟರ್ ನಿಂದ ಹೊರಬಂದಿದ್ದ . ಈ ನಡುವೆ ಮನೆಯಲ್ಲಿ  ಜಗಳ ನಡೆದಿದ್ದು, ಆತನ ಕಾಲಿಗೆ ಗಾಯವಾಗಿತ್ತು.

ಬುಧವಾರ  ಮುಂಜಾನೆ 4:30ರ ಸುಮಾರಿಗೆ ಈ ಘಟನೆ ನಡೆದಿದೆ. ಆಸ್ಪತ್ರೆಯಲ್ಲೂ ಕುಪಿತನಾದ ಆರೋಪಿ ಡ್ರೆಸ್ಸಿಂಗ್ ರೂಂನಲ್ಲಿದ್ದ ಕತ್ತರಿ ತೆಗೆದುಕೊಂಡು ತನ್ನೊಂದಿಗೆ ಬಂದಿದ್ದ ಸಂಬಂಧಿ ಬಿನು ಎಂಬಾತನಿಗೆ ಚಾಕುವಿನಿಂದ ಇರಿದಿದ್ದಾನೆ. ನಂತರ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ. ಆ ಹೊತ್ತಲ್ಲಿ ಎಲ್ಲರೂ ಓಡಿ ಹೋದರು. ಡ್ರೆಸ್ಸಿಂಗ್ ರೂಂನಲ್ಲಿ ವೈದ್ಯೆ ಮಾತ್ರ ಬಾಕಿಯಾಗಿ ಬಿಟ್ಟರು. ಆಗ ಸಂದೀಪ್, ವೈದ್ಯೆಯ  ಕುತ್ತಿಗೆ, ಹೊಟ್ಟೆಗೆ ಹಲವು ಹಾರಿ ಇರಿದಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:36 pm, Wed, 10 May 23

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!