ಕೆಜಿಎಫ್​: ಜನರ ಬಳಿ ಹಣ ದೋಚುತ್ತಿದ್ದ ಸುಲಿಗೆಕೋರರು ಅರೆಸ್ಟ್​

ಕೋಲಾರ: ಕೆಜಿಎಫ್ ಅಪರಾಧ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ ಜನರ ಬಳಿ ದರೋಡೆ ಮಾಡುತ್ತಿದ್ದ ನಾಲ್ವರು ಸುಲಿಗೆಕೋರರನ್ನು ಬಂಧಿಸಿದ್ದಾರೆ. ಜೆ.ರೂಬಿ ಟೈಸನ್, ಎಲ್.ರಾಜೇಶ್ ಬೆಲ್ಲ, ಎಂ.ಪ್ರಕಾಶ್, ಎಂ.ಆಂಥೋಣಿ ಸೀನು ಬಂಧಿತ ಸುಲಿಗೆಕೋರರು. ಕೋಲಾರ, ಮಾಲೂರು, ಕೆಜಿಎಫ್ ಸೇರಿದಂತೆ ಹಲವೆಡೆ ಆರೋಪಿಗಳು ಜನರ ಬಳಿ ಸುಲಿಗೆ ಮಾಡುತ್ತಿದ್ದರು. ಕೆಜಿಎಫ್ ಎಸ್​ಪಿ ಎಂ.ಎಸ್. ಮೊಹಮ್ಮದ್ ಸುಜೀತ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 2 ಮೊಬೈಲ್, 8,700 ನಗದು, ಕೃತ್ಯಕ್ಕೆ ಬಳಸಿದ್ದ ಒಂದು ಪಲ್ಸರ್ ಬೈಕ್ ವಶಪಡಿಸಿಕೊಂಡಿದ್ದಾರೆ.

ಕೆಜಿಎಫ್​: ಜನರ ಬಳಿ ಹಣ ದೋಚುತ್ತಿದ್ದ ಸುಲಿಗೆಕೋರರು ಅರೆಸ್ಟ್​
ಸಾಧು ಶ್ರೀನಾಥ್​

Updated on: May 02, 2020 | 9:44 AM

ಕೋಲಾರ: ಕೆಜಿಎಫ್ ಅಪರಾಧ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ ಜನರ ಬಳಿ ದರೋಡೆ ಮಾಡುತ್ತಿದ್ದ ನಾಲ್ವರು ಸುಲಿಗೆಕೋರರನ್ನು ಬಂಧಿಸಿದ್ದಾರೆ. ಜೆ.ರೂಬಿ ಟೈಸನ್, ಎಲ್.ರಾಜೇಶ್ ಬೆಲ್ಲ, ಎಂ.ಪ್ರಕಾಶ್, ಎಂ.ಆಂಥೋಣಿ ಸೀನು ಬಂಧಿತ ಸುಲಿಗೆಕೋರರು.

ಕೋಲಾರ, ಮಾಲೂರು, ಕೆಜಿಎಫ್ ಸೇರಿದಂತೆ ಹಲವೆಡೆ ಆರೋಪಿಗಳು ಜನರ ಬಳಿ ಸುಲಿಗೆ ಮಾಡುತ್ತಿದ್ದರು. ಕೆಜಿಎಫ್ ಎಸ್​ಪಿ ಎಂ.ಎಸ್. ಮೊಹಮ್ಮದ್ ಸುಜೀತ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 2 ಮೊಬೈಲ್, 8,700 ನಗದು, ಕೃತ್ಯಕ್ಕೆ ಬಳಸಿದ್ದ ಒಂದು ಪಲ್ಸರ್ ಬೈಕ್ ವಶಪಡಿಸಿಕೊಂಡಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us