AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಪ್ರೇಮಿಗಳ ದಿನವೇ ಪ್ರೀತಿಸಿದವಳ ಬರ್ಬರವಾಗಿ ಹತ್ಯೆ ಮಾಡಿದ ಗಂಡ

ಅವರಿಬ್ಬರು ಆರು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ಕೋಲಾರದ ಕೆಜಿಎಫ್​ ನಗರದಲ್ಲಿ ವಾಸವಿದ್ದರು. ಇವರಿಗೆ ಮುದ್ದಾದ ಇಬ್ಬರು ಮಕ್ಕಳು ಕೂಡ ಇದ್ದರು. ಆದರೆ, ಚಪಲಚೆನ್ನಿಗರಾಯ ಗಂಡ, ಹೆಂಡತಿಯನ್ನ ಬಿಟ್ಟು ಅವಳಿಂದೆ, ಇವಳಿಂದೆ ಓಡಾಡಿಕೊಂಡು, ಹೆಂಡತಿಗೆ ಕೊಡಬಾರದ ಕಿರುಕುಳ ಕೊಡುತ್ತಿದ್ದ. ಅಷ್ಟೇ ಅಲ್ಲದೆ ವರದಕ್ಷಿಣೆ ಕೊಡು ಎಂದು ಪೀಡಿಸುತ್ತಿದ್ದ ಗಂಡನಿಂದ ನೊಂದು ಪೊಲೀಸ್​ ಠಾಣೆಗೆ ದೂರು ನೀಡಿದ ಹೆಂಡತಿಯನ್ನ ಪ್ರೇಮಿಗಳ ದಿನವೇ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಕೋಲಾರ: ಪ್ರೇಮಿಗಳ ದಿನವೇ ಪ್ರೀತಿಸಿದವಳ ಬರ್ಬರವಾಗಿ ಹತ್ಯೆ ಮಾಡಿದ ಗಂಡ
ಆರೋಪಿ ಗಂಡ, ಮೃತ ಪತ್ನಿ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Feb 15, 2024 | 6:22 PM

Share
ಕೋಲಾರ, ಫೆ.15: ಗಂಡನ ವಿರುದ್ದ ಹೆಂಡತಿ ವರದಕ್ಷಿಣೆ ಕಿರುಕುಳ ದೂರು ನೀಡಿದ ಹಿನ್ನೆಲೆಯಲ್ಲಿ ಗಂಡನೇ ಹೆಂಡತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೆಜಿಎಫ್(KGF)​ನಲ್ಲಿ ನಡೆದಿದೆ. ‘ಕಳೆದ ಆರು ವರ್ಷಗಳ ಹಿಂದೆ ಕೆಜಿಎಫ್​ನ ಸಂಜಯ್​ಗಾಂಧಿ ನಗರದ ಪವಿತ್ರ ಹಾಗೂ ಕೋರಮಂಡಲ್​ ಏರಿಯಾದ ಲೋಕೇಶ್​ ಎಂಬುವವರು ಇಬ್ಬರೂ ಪ್ರೀತಿಸಿ ಮದುವೆಯಾಗಿದ್ದರು. ಜೊತೆಗೆ ಇಬ್ಬರು ಮಕ್ಕಳು ಕೂಡ ಇದ್ದರು. ಹೀಗೆ ಸಂಸಾರ ನಡೆಯಬೇಕಾದರೆ ಕಳೆದ ಕೆಲವು ವರ್ಷಗಳಿಂದ ಪವಿತ್ರ ಪತಿ ಲೋಕೇಶ್,​ ಹೆಂಡತಿಗೆ ಕಿರುಕುಳ ನೀಡಲು ಶುರುಮಾಡಿದ್ದಾನೆ. ಹಣಕ್ಕಾಗಿ ಹೆಂಡತಿ ಪವಿತ್ರಾ ಮೇಲೆ ಹಲ್ಲೆ ಮಾಡೋದು, ಹಣ ತರದೆ ಇದ್ದಾಗ ತನ್ನ ತಾಯಿಯ ಮನೆಗೆ ಕಳಿಸುವುದು ಮಾಡುತ್ತಿದ್ದ.

ಬೇರೆ ಮಹಿಳೆಯರ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದ ಗಂಡ

ಇನ್ನು ಲೋಕೇಶ್​ ಮಾತ್ರ ಬೇರೆ ಬೇರೆ ಮಹಿಳೆಯರ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದ. ಜೊತೆಗೆ ಅವರ ಜೊತೆಗಿನ ಪೋಟೋಗಳನ್ನು ತನ್ನ ಹೆಂಡತಿಗೆ ಹಾಕಿ ಹಿಂಸೆ ನೀಡುತ್ತಿದ್ದ. ಇದರಿಂದ ಬೇಸತ್ತ ಪವಿತ್ರ, ಕಳೆದ ಎರಡು ವರ್ಷಗಳ ಹಿಂದೆ ಉರಿಗಾಂ ಪೊಲೀಸ್​ ಠಾಣೆಗೆ ವರದಕ್ಷಿಣೆ ಕಿರುಕುಳ ದೂರು ನೀಡಿದ್ದಳು. ಅದಾದ ಮೇಲೆ ಇಬ್ಬರೂ ಬೇರೆ ಬೇರೆಯಾಗಿದ್ದರು. ಆದರೂ ಕೂಡ ಅವನ ಕಿರುಕುಳ ಮಾತ್ರ ತಪ್ಪಿರಲಿಲ್ಲ. ಇದರಿಂದ ಕಳೆದ ವಾರವಷ್ಟೇ ಪವಿತ್ರ, ಲೋಕೇಶ್​ ವಿರುದ್ದ ಉರಿಗಾಂ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಈ ಹಿನ್ನೆಲೆ ಅಲ್ಲಿನ ಪೊಲೀಸರು ಲೋಕೇಶ್​ನನ್ನು ಕರೆದು ವಾರ್ನ್​ ಮಾಡಿ ಕಳಿಸಿದ್ದರು. ಹೀಗಿರುವಾಗಲೇ ನಿನ್ನೆ(ಫೆ.14) ರಾತ್ರಿ ಪವಿತ್ರ, ಲೋಕೇಶ್​ ಮನೆಯಲ್ಲಿದ್ದ ತನ್ನ ಮೊದಲನೆ ಮಗನನ್ನು ಮಾತನಾಡಿಕೊಂಡು ಬರುಲು ಕೋರಮಂಡಲ್​ ಏರಿಯಾಗೆ ಹೋಗಿದ್ದಾಳೆ. ಈ ವೇಳೆ ಕೋರಮಂಡಲ್​ ಬಳಿ ಇರುವ ನಾರ್ಥ್ ಟ್ಯಾನ್​ ಬ್ಲಾಕ್ ಮೈದಾನದಲ್ಲಿ​ ಲೋಕೇಶ್​ ಪವಿತ್ರಾಳನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದಾನೆ.
ಘಟನೆ ಕುರಿತು ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಉರಿಗಾಂ ಪೊಲೀಸರು, ವರದಕ್ಷಿಣೆ ಹಾಗೂ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ತಲೆ ಮರೆಸಿಕೊಂಡಿರುವ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಅಲ್ಲದೆ ವರದಕ್ಷಿಣೆ ಕಿರುಕಳ ಹಾಗೂ ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಕೊಲೆಯಾದ ಪವಿತ್ರ ತಾಯಿ ದೂರಿನ ಮೇರೆಗೆ ಕೆಜಿಎಫ್​ ತಹಶೀಲ್ದಾರ್​ ನಾಗವೇಣಿ ಶವಾಗಾರಕ್ಕೆ ಭೇಟಿ ನೀಡಿ ತಹಶೀಲ್ದಾರ್ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಒಟ್ಟಾರೆ ಪ್ರೀತಿಸಿ ಮದುವೆಯಾಗಿ ನೂರು ವರ್ಷ ಒಟ್ಟಾಗಿ ಇರುತ್ತೆನೆ, ಕಷ್ಟದಲ್ಲಿ ಸುಖದಲ್ಲಿ ಜೊತೆಗಿರ್ತೀನಿ ಎಂದಿದ್ದವನು, ಧನದಾಹಕ್ಕೆ ದಾಸನಾಗಿ ಮತ್ತು ಮಹಿಳೆಯರೊಂದಿಗೆ ಅಕ್ರಮ ಸಂಬಂಧ ಹೊಂದಿ ಅದನ್ನು ಪ್ರಶ್ನೆ ಮಾಡಿದ ತಾನು ಪ್ರೀತಿಸಿ ಮದುವೆಯಾದ ಹೆಂಡತಿಯನ್ನೇ ಅದು ಪ್ರೇಮಿಗಳ ದಿನದಂದೇ ಕೊಲೆ ಮಾಡಿ ವಿಕೃತಿ ಮೆರೆದಿರೋದು ಮಾತ್ರ ನಿಜಕ್ಕೂ ದುರಂತ.
ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rajendra Simha BL
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ