ಕಿಡ್ನ್ಯಾಪ್​ ಮಾಡಿ ಹನಿಟ್ರ್ಯಾಪ್​ ಕೇಸ್​: ಪ್ರಮುಖ ಆರೋಪಿಗಳು ಅರೆಸ್ಟ್​

ಮಂಗಳೂರು: ಕಿಡ್ನ್ಯಾಪ್​ ಮಾಡಿ ರೆಸಾರ್ಟ್​ನಲ್ಲಿ ಹನಿಟ್ರ್ಯಾಪ್ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ವಿಟ್ಲ ನಿವಾಸಿ ಜಮಾಲುದ್ದೀನ್ ಅಲಿಯಾಸ್ ಜಮಾಲು, ಕುಶಾಲನಗರ ನಿವಾಸಿ ಲೋಹಿತ್ ಬಿ.ಬಿ ಹಾಗು ನೆತ್ತರಕೆರೆ ನಿವಾಸಿ ಮಹಮ್ಮದ್ ಶರೀಫ್ ಬಂಧಿತ ಆರೋಪಿಗಳು. ಜ.7ರ ಮಧ್ಯರಾತ್ರಿ ನಾಲ್ವರನ್ನು ಕೇರಳಾದಿಂದ ಕರೆಸಿ ಹನಿಟ್ರ್ಯಾಪ್ ಮಾಡಲಾಗಿತ್ತು. ಪ್ರಭಾವಿ ರಾಜಕಾರಣಿಯೊಬ್ಬರಿಗೆ ಸೇರಿದ ರೆಸಾರ್ಟ್​ನಲ್ಲಿ ಅಕ್ರಮವಾಗಿ ಬಂಧನ ಮಾಡಿದ್ದರು ಎನ್ನಲಾಗಿದೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು […]

ಕಿಡ್ನ್ಯಾಪ್​ ಮಾಡಿ ಹನಿಟ್ರ್ಯಾಪ್​ ಕೇಸ್​: ಪ್ರಮುಖ ಆರೋಪಿಗಳು ಅರೆಸ್ಟ್​
ಸಾಧು ಶ್ರೀನಾಥ್​

Updated on: Jan 12, 2020 | 5:29 PM

ಮಂಗಳೂರು: ಕಿಡ್ನ್ಯಾಪ್​ ಮಾಡಿ ರೆಸಾರ್ಟ್​ನಲ್ಲಿ ಹನಿಟ್ರ್ಯಾಪ್ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ವಿಟ್ಲ ನಿವಾಸಿ ಜಮಾಲುದ್ದೀನ್ ಅಲಿಯಾಸ್ ಜಮಾಲು, ಕುಶಾಲನಗರ ನಿವಾಸಿ ಲೋಹಿತ್ ಬಿ.ಬಿ ಹಾಗು ನೆತ್ತರಕೆರೆ ನಿವಾಸಿ ಮಹಮ್ಮದ್ ಶರೀಫ್ ಬಂಧಿತ ಆರೋಪಿಗಳು.

ಜ.7ರ ಮಧ್ಯರಾತ್ರಿ ನಾಲ್ವರನ್ನು ಕೇರಳಾದಿಂದ ಕರೆಸಿ ಹನಿಟ್ರ್ಯಾಪ್ ಮಾಡಲಾಗಿತ್ತು. ಪ್ರಭಾವಿ ರಾಜಕಾರಣಿಯೊಬ್ಬರಿಗೆ ಸೇರಿದ ರೆಸಾರ್ಟ್​ನಲ್ಲಿ ಅಕ್ರಮವಾಗಿ ಬಂಧನ ಮಾಡಿದ್ದರು ಎನ್ನಲಾಗಿದೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣವನ್ನು ಬೆನ್ನಟ್ಟಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಹನಿಟ್ರ್ಯಾಪ್​ನಲ್ಲಿ ಭಾಗಿಯಾದ ಇಬ್ಬರು ಯುವತಿಯರು ಮತ್ತು ಉಳಿದ ಇಬ್ಬರು ಆರೋಪಿಗಳಿಗಾಗಿ ಉಪ್ಪಿನಂಗಡಿ ಪೊಲೀಸರು ಶೋಧ ಮುಂದುವರೆಸಿದ್ದಾರೆ.




Published On - 2:29 pm, Sun, 12 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us