ಬೆಂಗಳೂರು: ಆಟೋದಲ್ಲಿ ಕಿಡ್ನಾಪ್ ಮಾಡಿಕೊಂಡು ಹೋಗಿ ಕುತ್ತಿಗೆ ಕೊಯ್ದು ಕೊಲೆ

ಆಟೋದಲ್ಲಿ ಕಿಡ್ನಾಪ್ ಮಾಡಿಕೊಂಡು ಹೋಗಿ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರ್ಕಾವತಿ ಲೇಔಟ್​​​​ ರಸ್ತೆಯಲ್ಲಿ ಚಾಕುವಿಬಿಂದ ಕುತ್ತಿಗೆಯನ್ನು ಕೊಯ್ದು ಕೊಲೆ ಮಾಡಿದ್ದಾರೆ.

ಬೆಂಗಳೂರು: ಆಟೋದಲ್ಲಿ ಕಿಡ್ನಾಪ್ ಮಾಡಿಕೊಂಡು ಹೋಗಿ ಕುತ್ತಿಗೆ ಕೊಯ್ದು ಕೊಲೆ
ಸಾಂದರ್ಭಿಕ ಚಿತ್ರ
Follow us
| Updated By: ವಿವೇಕ ಬಿರಾದಾರ

Updated on: Sep 19, 2023 | 12:54 PM

ಬೆಂಗಳೂರು ಸೆ.19: ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯ ಕುತ್ತಿಗೆ ಕೂಯ್ದು ಕೊಲೆ ಮಾಡಿದ್ದ ಆರೋಪಿಗಳನ್ನು ಸಂಪಿಗೆಹಳ್ಲಿ ಪೊಲೀಸ್ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ಫಾರೂಕ್ ಖಾನ್ ಕೊಲೆಯಾದ ವ್ಯಕ್ತಿ. ಸುಹೇಲ್, ಮುಬಾರಕ್, ಅಲಿ ಅಕ್ರಮ್ ಬಂಧಿತ ಅರೋಪಿಗಳು. ಆರೋಪಿಗಳು ಸೋಮವಾರ ಬೆಳಿಗ್ಗೆ ಫಾರೂಕ್ ಖಾನ್ ಅವರನ್ನು ಆಟೋದಲ್ಲಿ ಕಿಡ್ನಾಪ್ (Kidnap) ಮಾಡಿಕೊಂಡು ಹೋಗಿದ್ದಾರೆ. ನಂತರ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರ್ಕಾವತಿ ಲೇಔಟ್​​​​ ರಸ್ತೆಯಲ್ಲಿ ಚಾಕುವಿಬಿಂದ ಕುತ್ತಿಗೆಯನ್ನು ಕೊಯ್ದು ಕೊಲೆ ಮಾಡಿದ್ದಾರೆ.

ಫಾರೂಕ್​ ಖಾನ್​ ಕಾಣದಿದ್ದಾಗ, ಕುಟುಂಬಸ್ಥರು ಸಂಪಿಗೆಹಳ್ಳಿ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. ಇದೇ ವೇಳೆ ಈ ವೇಳೆ ಕೊಲೆ ಮಾಡಿರುವ ಆರೋಪಿಗಳು ಸಹ ಪೊಲೀಸ್​ ಠಾಣೆಗೆ ಬಂದು, ತಾವೇ ತಮ್ಮ ದ್ವೇಷಕ್ಕಾಗಿ ಕೊಲೆ ಮಾಡಿರುವುದಾಗಿ ಹೇಳಿದ್ದಾರೆ. ಆರೋಪಿಗಳು ಮತ್ತು ಫಾರೂಕ್​ ಖಾನ್​ ಎಲ್ಲರೂ ಪರಿಚಿತರೇ ಆಗಿದ್ದಾರೆ. ಆರೋಪಿ ಸುಹೇಲ್​​ಗೆ, “ನೀನು ಕೆಟ್ಟದಾಗಿ ಮಾತನಾಡುತ್ತೀಯಾ, ನನ್ನನ್ನು ಕೆಟ್ಟದಾಗಿ ಬಿಂಬಿಸುತ್ತಿಯಾ ಮತ್ತು ಗಾಂಜಾ ಮಾರಾಟ ಮಾಡುತ್ತೀಯಾ. ಈ ಬಗ್ಗೆ ನಾನು ಪೊಲೀಸರಿಗೆ ಹೇಳುತ್ತೇನೆ” ಎಂದು ಫಾರೂಕ್​ ಖಾನ್ ಹೇಳಿದ್ದರು.

ಇದನ್ನೂ ಓದಿ: ಒಂಬತ್ತು ಇಂಚು ಜಾಗಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

ಇದರಿಂದ ಕೋಪಗೊಂಡಿದ್ದ ಸುಹೇಲ್​ “ನಾನು ಗಾಂಜಾ ವ್ಯವಹಾರ ನಡೆಸುತಿರಲಿಲ್ಲ. ಆದರೂ ಸಹ ನನ್ನ ಬಗ್ಗೆ ಕೆಟ್ಟದಾಗಿ ಮಾತಾಡ್ತಾನೆ” ಎಂದು ಸುಹೇಲ್​ ಆಟೋದಲ್ಲಿ ಕರೆದುಕೊಂಡು ಹೋಗಿ ಇತರರೊಂದಿಗೆ ಸೇರಿ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ