AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ತಾಯಿಯ ಎದುರೇ ತಮ್ಮನನ್ನು ಕೊಂದ ಅಣ್ಣ

ಬೆಂಗಳೂರಿನ ಬೇಗೂರಿನ ಲಕ್ಷ್ಮೀಪುರದ ನಿವಾಸಿಗಳಾದ ಅಣ್ಣ-ತಮ್ಮಂದಿರು ಕೆಲಸದ ವಿಚಾರವಾಗಿ ಜಗಳವಾಡಿಕೊಂಡಿದ್ದಾರೆ. ಬಳಿಕ ಅಣ್ಣ ತಮ್ಮನ್ನು ತಾಯಿಯ ಎದುರೇ ಕೊಲೆ ಮಾಡಿದ್ದಾನೆ. ಆರೋಪಿ ಅಣ್ಣನನ್ನು ಬೇಗೂರು‌ ಠಾಣೆ ಪೋಲಿಸರು ಬಂಧಿಸಿದ್ದಾರೆ.

ಬೆಂಗಳೂರು: ತಾಯಿಯ ಎದುರೇ ತಮ್ಮನನ್ನು ಕೊಂದ ಅಣ್ಣ
ಪ್ರಾತಿನಿಧಿಕ ಚಿತ್ರ
ಜಗದೀಶ ಬಿ.
| Edited By: ವಿವೇಕ ಬಿರಾದಾರ|

Updated on:Aug 09, 2024 | 9:43 AM

Share

ಬೆಂಗಳೂರು, ಆಗಸ್ಟ್​ 09: ತಾಯಿಯ ಎದುರೇ ತಮ್ಮನನ್ನು ಅಣ್ಣ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ (Bengaluru) ಬೇಗೂರಿನ ಲಕ್ಷ್ಮೀ‌ಪುರದಲ್ಲಿ ನಡೆದಿದೆ. ಪ್ರತಾಪ್ (18 ವರ್ಷ) ಮೃತದುರ್ದೈವಿ. ರಜನಿ (28 ವರ್ಷ) ಕೊಲೆ ಮಾಡಿದ ಆರೋಪಿ. ಬೇಗೂರು‌ ಠಾಣೆ ಪೋಲಿಸರು (Police) ಆರೋಪಿ ರಜನಿಯನ್ನು ಬಂಧಿಸಿದ್ದಾರೆ.

ಮೃತ ಪ್ರತಾಪ್ ಮೆಕ್ಯಾನಿಕ್ ಆಗಿದ್ದನು. ಅನಾರೋಗ್ಯ ಹಿನ್ನೆಲೆಯಲ್ಲಿ ಆರೋಪಿ ರಜನಿ ಕೆಲಸಕ್ಕೆ ಹೋಗದೆ ಮನೆಯಲ್ಲೇ ಇರುತ್ತಿದ್ದನು. ಕೆಲಸಕ್ಕೆ ಹೋಗದ ವಿಚಾರಕ್ಕೆ ರಜನಿ ಮತ್ತು ಪ್ರತಾಪ್​ ನಡುವೆ ಗುರುವಾರ ಮಧ್ಯಾಹ್ನ ಜಗಳವಾಗಿದೆ. ಜಗಳದ ನಡುವೆ ಪ್ರತಾಪ್ ರಜನಿಗೆ ದಂಡಪಿಂಡ ಎಂದು ಬೈದಿದ್ದಾನೆ. ಇದರಿಂದ ಜಗಳ ಇನ್ನಷ್ಟು ತಾರಕಕ್ಕೇರಿದೆ. ಬಳಿಕ ಇಬ್ಬರೂ ಪರಸ್ಪರ ಹಲ್ಲೆ ಮಾಡಿಕೊಂಡಿದ್ದಾರೆ. ಈ ವೇಳೆ ತಾಯಿ ಬಿಡಿಸಲು ಬಂದರೂ ಅಣ್ಣ-ತಮ್ಮಂದಿರ ಜಗಳ ನಿಂತಿಲ್ಲ.

ಇದನ್ನೂ ಓದಿ: ಪಶ್ಚಿಮಬಂಗಾಳದಲ್ಲಿ ಬಾಗಲಕೋಟೆ ಮೂಲದ ಯೋಧ ಹುತಾತ್ಮ: ಗುಂಡು ತಗುಲಿ ಸಾವು ಶಂಕೆ

ಬಳಿಕ ರಜನಿ ಅಡುಗೆ ಮನೆಗೆ ತೆರಳಿ ಚಾಕು ತಂದು, ತಮ್ಮ ಪ್ರತಾಪ್​​ನ ಎದೆಗೆ ಇರಿದಿದ್ದಾನೆ. ತೀವ್ರ ರಕ್ತಸ್ರಾವವಾಗಿ ಪ್ರತಾಪ್ ಕುಸಿದು ಬಿದ್ದಿದ್ದಾನೆ. ಘಟನೆ ಬಳಿಕ ರಜಿನಿ ನಾಪತ್ತೆಯಾಗಿದ್ದನು. ಕೂಡಲೆ ಪ್ರತಾಪ್​​ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಪ್ರತಾಪ್​​ ಮೃತಪಟ್ಟಿದ್ದಾನೆ. ಬೇಗೂರು‌ ಪೋಲಿಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ, ಆರೋಪಿ ರಜನಿಯನ್ನು ಪೊಲೀಸರು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:04 am, Fri, 9 August 24

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್