Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಲಕ್ಕೆ ಹೋಗಿದ್ದ ವೃದ್ದೆಯ ಕೊಲೆ; ಆರೋಪಿ ಬಂಧನ, ಹತ್ಯೆಗೆ ಕಾರಣವೇನು ಗೊತ್ತಾ?

ಚೌಡಮ್ಮ ಅವರು ನಿನ್ನೆ ಸಹ ಹೊಲದಲ್ಲಿ ಜಾನುವಾರು ಮೇಯಿಸುತ್ತಿದ್ದ ವೇಳೆ ಜಗಳವಾಡಿದ್ದರಂತೆ. ಹೌದು ರಾಗಿ ಹೊಲಕ್ಕೆ ದನ-ಕರುಗಳನ್ನು ಬಿಟ್ಟು ಬೆಳೆ ಹಾಳು ಮಾಡುತ್ತಾರೆ ಎಂದು ಕಾವಲಿಗೆ ಹೋಗಿದ್ದ ವೇಳೆ ಮೃತ ವೃದ್ದೆ ಹಾಗೂ ಆರೋಪಿ ನಡುವೆ ಜಗಳವಾಗಿದೆ. ಈ ವಿಷಯವನ್ನು ಮನೆಯವರಿಗೆ ಹೇಳುತ್ತಾಳೆ ಎಂಬ ಭಯದಿಂದ ಹಿಂಬದಿಯಿಂದ ಬಂದು ತಲೆಗೆ ಹೊಡೆದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ.

ಹೊಲಕ್ಕೆ ಹೋಗಿದ್ದ ವೃದ್ದೆಯ ಕೊಲೆ; ಆರೋಪಿ ಬಂಧನ, ಹತ್ಯೆಗೆ ಕಾರಣವೇನು ಗೊತ್ತಾ?
ಆರೋಪಿ
Follow us
ನವೀನ್ ಕುಮಾರ್ ಟಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Nov 12, 2023 | 3:10 PM

ಬೆಂಗಳೂರು ಗ್ರಾಮಾಂತರ, ನ.12: ರಾಗಿ ಹೊಲಕ್ಕೆ ಹೋಗಿದ್ದ ವೃದ್ದೆಯ ತಲೆಗೆ ಬಲವಾಗಿ ಹೊಡೆದು ಕೊಲೆ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ(Doddaballapura) ತಾಲೂಕಿನ ಗುಂಜೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೌಡಮ್ಮ(75) ಮೃತ ವೃದ್ದೆ. ಹೌದು, ವೃದ್ದೆಯನ್ನು ಹತ್ಯೆ ಮಾಡಿ ಎಸ್ಕೇಪ್ ಆಗಿದ್ದ ಗ್ರಾಮದ ಪ್ರಭಾಕರ್ ( 45 ) ಎಂಬಾತನನ್ನು ಇದೀಗ ಬಂಧಿಸಲಾಗಿದೆ. ಕಳೆದ ಹಲವು ವರ್ಷಗಳಿಂದ ಅಜ್ಜಿ ಹಾಗೂ ಪ್ರಭಾಕರ್ ಕುಟುಂಬಸ್ಥರ ನಡುವೆ ಕಲಹ ನಡೆಯುತ್ತಿದ್ದು, ಇದೀಗ ಕೊಲೆಯಲ್ಲಿ ಅಂತ್ಯವಾಗಿದೆ.

ಘಟನೆ ವಿವರ

ಇನ್ನು ಚೌಡಮ್ಮ ಅವರು ನಿನ್ನೆ ಸಹ ಹೊಲದಲ್ಲಿ ಜಾನುವಾರು ಮೇಯಿಸುತ್ತಿದ್ದ ವೇಳೆ ಜಗಳವಾಡಿದ್ದರಂತೆ. ಹೌದು ರಾಗಿ ಹೊಲಕ್ಕೆ ದನ-ಕರುಗಳನ್ನು ಬಿಟ್ಟು ಬೆಳೆ ಹಾಳು ಮಾಡುತ್ತಾರೆ ಎಂದು ಕಾವಲಿಗೆ ಹೋಗಿದ್ದ ವೇಳೆ ಮೃತ ವೃದ್ದೆ ಹಾಗೂ ಆರೋಪಿ ನಡುವೆ ಜಗಳವಾಗಿದೆ. ಈ ವಿಷಯವನ್ನು ಮನೆಯವರಿಗೆ ಹೇಳುತ್ತಾಳೆ ಎಂಬ ಭಯದಿಂದ ಹಿಂಬದಿಯಿಂದ ಬಂದು ತಲೆಗೆ ಹೊಡೆದು, ಸೀರೆಯಿಂದ ಕುತ್ತಿಗೆ ಹಿಸುಕಿ ಕೊಲೆ ಮಾಡಲಾಗಿದೆ. ಸಂಜೆ ವೃದ್ದೆ ಮನೆಗೆ ಬಾರದಿದ್ದನ್ನ ಕಂಡು ಪರಿಶೀಲನೆಗೆ ಹೋದ ಚೌಡಮ್ಮ ಅವರು ಶವವಾಗಿ ಪತ್ತೆಯಾಗಿದೆ. ಈ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ:ದೇವನಹಳ್ಳಿ: ಒಂಟಿ ವೃದ್ದೆಯ ಮೇಲೆ ಹಲ್ಲೆ ನಡೆಸಿ ಚೈನ್ ಎಗರಿಸಿದ್ದ ಸಾಪ್ಟ್ ವೇರ್ ಉದ್ಯೋಗಿ ಅರೆಸ್ಟ್​

ಕಾರಿನಲ್ಲಿದ್ದ ಚಿನ್ನಾಭರಣ ಕಳವು ಮಾಡಿರುವ ತೃತೀಯಲಿಂಗಿಗಳು

ಬೆಂಗಳೂರು: ತಾಲೂಕಿನ ಮಾಕಳಿ ಬಳಿ ಕಾರಿನಲ್ಲಿ ಚಿನ್ನಾಭರಣವನ್ನು ತೃತೀಯಲಿಂಗಿಗಳು ಕಳುವು ಮಾಡಿದ್ದಾರೆ. ಬೇಗೂರಿನ ಮಂಜೇಶ್‌ಗೆ ಸೇರಿದ ಕಾರಿನಲ್ಲಿದ್ದ 4 ಲಕ್ಷ 50 ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಕದ್ದು ಪರಾರಿಯಾಗಿದ್ದಾರೆ.ಆರೋಪಿಗಳಾದ ಸಹನಾ, ಮಂಜುಳಾ, ಖುಷಿ, ರಿಷಿಕಾಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ರಾತ್ರಿ 11.30ರಲ್ಲಿ ಮೂತ್ರ ವಿಸರ್ಜನೆಗಾಗಿ ಕಾರು ನಿಲ್ಲಿಸಿದ್ದಾಗ ಈ ಘಟನೆ ನಡೆದಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:00 pm, Sun, 12 November 23

Video: ಗಾಳಿ ಮಳೆಗೆ ಧರೆಗುರಳಿದ ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು
Video: ಗಾಳಿ ಮಳೆಗೆ ಧರೆಗುರಳಿದ ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ