ಹೊಲಕ್ಕೆ ಹೋಗಿದ್ದ ವೃದ್ದೆಯ ಕೊಲೆ; ಆರೋಪಿ ಬಂಧನ, ಹತ್ಯೆಗೆ ಕಾರಣವೇನು ಗೊತ್ತಾ?

ಚೌಡಮ್ಮ ಅವರು ನಿನ್ನೆ ಸಹ ಹೊಲದಲ್ಲಿ ಜಾನುವಾರು ಮೇಯಿಸುತ್ತಿದ್ದ ವೇಳೆ ಜಗಳವಾಡಿದ್ದರಂತೆ. ಹೌದು ರಾಗಿ ಹೊಲಕ್ಕೆ ದನ-ಕರುಗಳನ್ನು ಬಿಟ್ಟು ಬೆಳೆ ಹಾಳು ಮಾಡುತ್ತಾರೆ ಎಂದು ಕಾವಲಿಗೆ ಹೋಗಿದ್ದ ವೇಳೆ ಮೃತ ವೃದ್ದೆ ಹಾಗೂ ಆರೋಪಿ ನಡುವೆ ಜಗಳವಾಗಿದೆ. ಈ ವಿಷಯವನ್ನು ಮನೆಯವರಿಗೆ ಹೇಳುತ್ತಾಳೆ ಎಂಬ ಭಯದಿಂದ ಹಿಂಬದಿಯಿಂದ ಬಂದು ತಲೆಗೆ ಹೊಡೆದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ.

ಹೊಲಕ್ಕೆ ಹೋಗಿದ್ದ ವೃದ್ದೆಯ ಕೊಲೆ; ಆರೋಪಿ ಬಂಧನ, ಹತ್ಯೆಗೆ ಕಾರಣವೇನು ಗೊತ್ತಾ?
ಆರೋಪಿ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Nov 12, 2023 | 3:10 PM

ಬೆಂಗಳೂರು ಗ್ರಾಮಾಂತರ, ನ.12: ರಾಗಿ ಹೊಲಕ್ಕೆ ಹೋಗಿದ್ದ ವೃದ್ದೆಯ ತಲೆಗೆ ಬಲವಾಗಿ ಹೊಡೆದು ಕೊಲೆ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ(Doddaballapura) ತಾಲೂಕಿನ ಗುಂಜೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೌಡಮ್ಮ(75) ಮೃತ ವೃದ್ದೆ. ಹೌದು, ವೃದ್ದೆಯನ್ನು ಹತ್ಯೆ ಮಾಡಿ ಎಸ್ಕೇಪ್ ಆಗಿದ್ದ ಗ್ರಾಮದ ಪ್ರಭಾಕರ್ ( 45 ) ಎಂಬಾತನನ್ನು ಇದೀಗ ಬಂಧಿಸಲಾಗಿದೆ. ಕಳೆದ ಹಲವು ವರ್ಷಗಳಿಂದ ಅಜ್ಜಿ ಹಾಗೂ ಪ್ರಭಾಕರ್ ಕುಟುಂಬಸ್ಥರ ನಡುವೆ ಕಲಹ ನಡೆಯುತ್ತಿದ್ದು, ಇದೀಗ ಕೊಲೆಯಲ್ಲಿ ಅಂತ್ಯವಾಗಿದೆ.

ಘಟನೆ ವಿವರ

ಇನ್ನು ಚೌಡಮ್ಮ ಅವರು ನಿನ್ನೆ ಸಹ ಹೊಲದಲ್ಲಿ ಜಾನುವಾರು ಮೇಯಿಸುತ್ತಿದ್ದ ವೇಳೆ ಜಗಳವಾಡಿದ್ದರಂತೆ. ಹೌದು ರಾಗಿ ಹೊಲಕ್ಕೆ ದನ-ಕರುಗಳನ್ನು ಬಿಟ್ಟು ಬೆಳೆ ಹಾಳು ಮಾಡುತ್ತಾರೆ ಎಂದು ಕಾವಲಿಗೆ ಹೋಗಿದ್ದ ವೇಳೆ ಮೃತ ವೃದ್ದೆ ಹಾಗೂ ಆರೋಪಿ ನಡುವೆ ಜಗಳವಾಗಿದೆ. ಈ ವಿಷಯವನ್ನು ಮನೆಯವರಿಗೆ ಹೇಳುತ್ತಾಳೆ ಎಂಬ ಭಯದಿಂದ ಹಿಂಬದಿಯಿಂದ ಬಂದು ತಲೆಗೆ ಹೊಡೆದು, ಸೀರೆಯಿಂದ ಕುತ್ತಿಗೆ ಹಿಸುಕಿ ಕೊಲೆ ಮಾಡಲಾಗಿದೆ. ಸಂಜೆ ವೃದ್ದೆ ಮನೆಗೆ ಬಾರದಿದ್ದನ್ನ ಕಂಡು ಪರಿಶೀಲನೆಗೆ ಹೋದ ಚೌಡಮ್ಮ ಅವರು ಶವವಾಗಿ ಪತ್ತೆಯಾಗಿದೆ. ಈ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ:ದೇವನಹಳ್ಳಿ: ಒಂಟಿ ವೃದ್ದೆಯ ಮೇಲೆ ಹಲ್ಲೆ ನಡೆಸಿ ಚೈನ್ ಎಗರಿಸಿದ್ದ ಸಾಪ್ಟ್ ವೇರ್ ಉದ್ಯೋಗಿ ಅರೆಸ್ಟ್​

ಕಾರಿನಲ್ಲಿದ್ದ ಚಿನ್ನಾಭರಣ ಕಳವು ಮಾಡಿರುವ ತೃತೀಯಲಿಂಗಿಗಳು

ಬೆಂಗಳೂರು: ತಾಲೂಕಿನ ಮಾಕಳಿ ಬಳಿ ಕಾರಿನಲ್ಲಿ ಚಿನ್ನಾಭರಣವನ್ನು ತೃತೀಯಲಿಂಗಿಗಳು ಕಳುವು ಮಾಡಿದ್ದಾರೆ. ಬೇಗೂರಿನ ಮಂಜೇಶ್‌ಗೆ ಸೇರಿದ ಕಾರಿನಲ್ಲಿದ್ದ 4 ಲಕ್ಷ 50 ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಕದ್ದು ಪರಾರಿಯಾಗಿದ್ದಾರೆ.ಆರೋಪಿಗಳಾದ ಸಹನಾ, ಮಂಜುಳಾ, ಖುಷಿ, ರಿಷಿಕಾಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ರಾತ್ರಿ 11.30ರಲ್ಲಿ ಮೂತ್ರ ವಿಸರ್ಜನೆಗಾಗಿ ಕಾರು ನಿಲ್ಲಿಸಿದ್ದಾಗ ಈ ಘಟನೆ ನಡೆದಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:00 pm, Sun, 12 November 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ