AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಅನ್ಯಕೋಮಿನವರಿಂದ ಯುವಕನ ಮೇಲೆ ಚಾಕು ಇರಿತ, ಗಾಯಾಳು ಆಸ್ಪತ್ರೆಗೆ ದಾಖಲು!

ಯುವಕನೋರ್ವನ ಮೇಲೆ ದಾಳಿ ನಡೆಸಿದ ಅನ್ಯಕೋಮಿನ ಯುವಕರು ಚಾಕು ಇರಿದು ಪರಾರಿಯಾದ ಘಟನೆಯೊಂದು ತುಮಕೂರು ನಗರದಲ್ಲಿ ನಡೆದಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Crime News: ಅನ್ಯಕೋಮಿನವರಿಂದ ಯುವಕನ ಮೇಲೆ ಚಾಕು ಇರಿತ, ಗಾಯಾಳು ಆಸ್ಪತ್ರೆಗೆ ದಾಖಲು!
ಸಾಂಕೇತಿಕ ಚಿತ್ರ
TV9 Web
| Edited By: |

Updated on:May 28, 2022 | 8:59 AM

Share

ತುಮಕೂರು: ಅನ್ಯಕೋಮಿನ ಯುವಕರಿಂದ ಚಾಕು ಇರಿದ (Stab the knife) ಘಟನೆಯೊಂದು ತುಮಕೂರು ನಗರದ ದಿಬ್ಬೂರಹಳ್ಳಿಯಲ್ಲಿ ನಡೆದಿದೆ. ವಿನೋದ್(17) ಎಂಬ ಯುವಕನ ಮೇಲೆ ದಾಳಿ ನಡೆಸಿದ ಇಬ್ಬರು ಆರೋಪಿಗಳು, ವಿನೋದ್​ನ ಹೊಟ್ಟೆಗೆ ಚಾಕುವಿನಿಂದ ಇರಿದಿದ್ದಾರೆ. ನಂತರ ಅಲ್ಲಿಂದ ಆರೋಪಿಗಳು ಪರಾರಿಯಾಗಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಗಾಯಾಳುವನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: Crime News: ವಿದ್ಯುತ್ ತಂತಿ ಎಳೆಯುವ ವೇಳೆ ಅವಘಡ, ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವು

ಗಿಣಿಶಾಸ್ತ್ರದವನು ಭವಿಷ್ಯ ಸರಿಯಾಗಿ ಹೇಳಿಲ್ಲ ಎಂದು ಹಲ್ಲೆ?

ಗಿಣಿ ಹೇಳಿದಂತೆ ಭವಿಷ್ಯ ನಡೆದಿಲ್ಲ ಎಂದು ಗಿಣಿಶಾಸ್ತ್ರದವನ ಮೇಲೆ ಹಲ್ಲೆ ನಡೆಸಿದ ಆರೋಪ ತುಮಕೂರು ನಗರದ ಉಪ್ಪಾರಹಳ್ಳಿಯಲ್ಲಿ ಕೇಳಿಬಂದಿದೆ. 40 ಸಾವಿರ ರೂಪಾಯಿ ಹಣ ಪಡೆದು ಭವಿಷ್ಯ ನುಡಿದಂತೆ ನಡೆದಿಲ್ಲ ಎಂದು ಗಿಣಿಶಾಸ್ತ್ರ ಹೇಳುವ ಮಾರಣ್ಣನ ಮೇಲೆ ಮೇ 23ರಂದು ತುಮಕೂರಿನ ಉಪ್ಪಾರಹಳ್ಳಿ ನಿವಾಸಿ ರಮ್ಯಾ ಮತ್ತು ಕೀರ್ತಿ ದಂಪತಿ ಸೇರಿದಂತೆ ಮೂವರಿಂದ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಹಲ್ಲೆ ಸಂಬಂಧ ಮಾರಣ್ಣ ಮೇ 25ರಂದು ಮಾರಣ್ಣನ ಪತ್ನಿ ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರಂತೆ ರಮ್ಯಾ, ಕೀರ್ತಿ ಹಾಗೂ ವಿನೋದ್ ಎಂಬವರನ್ನು ಪೊಲೀಸರು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.

ವಿಚಾರಣೆ ವೇಳೆ ಪೊಲೀಸರು ಮೂವರನ್ನು ನಿಂದಿಸಿದ ಆರೋಪ ಹೊರಿಸಿದ ಮೂವರು, ಪ್ರತಿ ದೂರು ದಾಖಲಿಸಿಕೊಂಡಿಲ್ಲ ಎಂದು ಆರೋಪಿಸಿದ್ದಾರೆ. ಹೀಗಾಗಿ ದೂರು ನೀಡಲು ಜಿಲ್ಲಾ ಪೊಲೀಸ್ ಕಚೇರಿಗೆ ರಮ್ಯಾ ತೆರಳಿದ್ದಾಳೆ. ಇದಕ್ಕೂ ಮುನ್ನ ಆಕೆ ವಿಷ ಸೇವಿಸಿದ್ದು, ಕಚೇರಿ ಬಳಿ ಅಸ್ವಸ್ಥರಾಗಿದ್ದಾಳೆ. ಕೂಡಲೇ ಪೊಲೀಸರು ರಮ್ಯಾಳನ್ನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದು, ಎಸ್​ಪಿ ರಾಹುಲ್ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಹಲ್ಲೆ ಪ್ರಕರಣದಿಂದ ಪಾರಾಗಲು ಈ ರೀತಿ ಮಾಡಿದ್ದಾರಾ ಎಂಬ ಶಂಕೆ ವ್ಯಕ್ತವಾಗಿದ್ದು, ಘಟನೆ ಸಂಬಂಧ ಸಂಪೂರ್ಣ ತನಿಖೆ ನಡೆಸುವುದಾಗಿ ರಾಹುಲ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: Gold-Silver Rate: ಬೆಂಗಳೂರು, ಮುಂಬೈ, ದೆಹಲಿ ಸೇರಿ ಪ್ರಮುಖ ನಗರಗಳಲ್ಲಿ ಮೇ 27ರ ಚಿನ್ನ, ಬೆಳ್ಳಿ ದರದ ವಿವರ ಇಲ್ಲಿದೆ

ಟ್ಯಾಂಕರ್ ಮಾಲೀಕನ ಕಳ್ಳಾಟ

ಬೆಂಗಳೂರು: ಟ್ಯಾಂಕರ್ ಹರಿದು 3 ವರ್ಷದ ಮಗು ಸಾವು ಪ್ರಕರಣ ಸಂಬಂಧ ಪೊಲೀಸ್ ಠಾಣೆಯಲ್ಲಿ ವಾಟರ್ ಟ್ಯಾಂಕರ್ ಮಾಲೀಕನ ಸಾಕ್ಷಿ ನಾಶಕ್ಕೆ ಯತ್ನಿಸಿದ್ದಾನೆ. ಕೃತ್ಯ ನಡೆದಾಗ ಟ್ಯಾಂಕರ್​ನಲ್ಲಿದ್ದ ಅಸಲಿ ಚಾಲಕನ ಬದಲಿಗೆ ಬೇರೊಬ್ಬ ಚಾಲಕನನ್ನು ಠಾಣೆಗೆ ಕರೆತಂದ ಟ್ಯಾಂಕರ್ ಮಾಲೀಕ ಆನಂದ್​ ಸಾಕ್ಷಿ ನಾಶಕ್ಕೆ ಯತ್ನಿಸಿದ್ದಾನೆ. ವಿಚಾರಣೆ ವೇಳೆ ಅಸಲಿಯತ್ತು ಬೆಳಕಿಗೆ ಬಂದಿದ್ದು, ಹಣದ ಆಸೆಗೆ ರಮೇಶ್ ಬಾಬು ಆರೋಪಿಯಾಗಿ ಬಂದಿದ್ದನು. ಈ ಬಗ್ಗೆ ಸ್ವತಃ ರಮೇಶ್ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ. ನಂತರ ಅಸಲಿ ಚಾಲಕ ರಖಿಬ್​ನನ್ನು ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಪ್ರಕರಣ ಸಂಬಂಧ ಎಚ್​ಎಸ್​ಆರ್ ಲೇಔಟ್​ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಆನ್‌ಲೈನ್ ಮೂಲಕ ವಂಚಿಸುತ್ತಿದ್ದವರ ಬ್ಯಾಂಕ್ ಖಾತೆ ಫ್ರೀಜ್; 4 ಪ್ರಕರಣಗಳ ಭೇದಿಸಿ ಹಣ ಮರುಪಾವತಿ ಮಾಡಿದ ಮೈಸೂರು ಸೈಬರ್ ಕ್ರೈಂ ಪೊಲೀಸ್

ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ

ಮೈಸೂರು: ನೇಣುಬಿಗಿದುಕೊಂಡು ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಜರ್ ಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ಜಲಪುರಿ ಪೊಲೀಸ್ ವಸತಿಗೃಹದಲ್ಲಿ ನಡೆದಿದೆ. ದೇವರಾಜ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಸಪ್ಪ ಕೊನ್ನೂರು (27) ಆತ್ಮಹತ್ಯೆ ಮಾಡಿಕೊಂಡವರು. 2016ನೇ ಬ್ಯಾಚ್​ನಲ್ಲಿ ಆಯ್ಕೆಯಾಗಿದ್ದ ಪರಸಪ್ಪ, ಒಂದೂವರೆ ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದರು. ಪತ್ನಿ ವಾಯುವಿಹಾರಕ್ಕೆ ತೆರಳಿದ್ದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೈಸೂರಿನ ನಜರ್​ಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:55 am, Sat, 28 May 22

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?