AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಗಣೇಶ ಮೂರ್ತಿ ಕೂರಿಸುವ ವಿಚಾರಕ್ಕೆ ಗಲಾಟೆ; ಚಾಕು ಇರಿತ

ಬೆಂಗಳೂರಿನ ಧರ್ಮರಾಯಸ್ವಾಮಿ ದೇವಸ್ಥಾನದ ಬಳಿ ಗಣೇಶ ಮೂರ್ತಿ ಕೂರಿಸುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಅಜಿತ್​ ಎಂಬುವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಲಾಟೆ ನಡೆದಿದೆ.

ಬೆಂಗಳೂರು: ಗಣೇಶ ಮೂರ್ತಿ ಕೂರಿಸುವ ವಿಚಾರಕ್ಕೆ ಗಲಾಟೆ; ಚಾಕು ಇರಿತ
ಚಾಕು ಇರಿದ ಸ್ಥಳ (ಎಡಚಿತ್ರ) ಆರೋಪಿ ಸುಮನ್​ (ಬಲಚಿತ್ರ)
TV9 Web
| Edited By: ವಿವೇಕ ಬಿರಾದಾರ|

Updated on: Aug 27, 2023 | 8:39 AM

Share

ಬೆಂಗಳೂರು: ನಗರದ ಧರ್ಮರಾಯಸ್ವಾಮಿ (Dharmaswamy) ದೇವಸ್ಥಾನದ ಬಳಿ ಗಣೇಶ ಮೂರ್ತಿ (Ganesha Idol) ಕೂರಿಸುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಅಜಿತ್​ ಎಂಬುವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಹಲಸೂರು ಗೇಟ್ ಪೊಲೀಸ್ (Police) ಠಾಣಾ ವ್ಯಾಪ್ತಿಯಲ್ಲಿ ಗಾಲಾಟೆ ನಡೆದಿದ್ದು, ಆರೋಪಿ ಸುಮನ್ ಚಾಕುವಿನಿಂದ ಅಜಿತ್​ ಅವರ ​ಎದೆ, ಕುತ್ತಿಗೆ, ಬೆನ್ನಿಗೆ ಇರಿದಿದ್ದಾನೆ. ಹಲ್ಲೆಗೊಳಗಾದ ಅಜಿತ್​ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅರೋಪಿ ಸುಮನ್​ನನ್ನು ಬಂಧಿಸಿದ್ದಾರೆ.

 ವ್ಯಕ್ತಿ ಮೇಲೆ ಕಲ್ಲು ಎತ್ತು ಹಾಕಿ ಕೊಲೆ

ಶಿವಮೊಗ್ಗ: ವ್ಯಕ್ತಿ ಮೇಲೆ ಕಲ್ಲು ಎತ್ತು ಹಾಕಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ಟಿಪ್ಪು ನಗರದ ಏಳನೇ ತಿರುವಿನಲ್ಲಿ ನಡೆದಿದೆ. ಸುಮಾರು 57 ವರ್ಷದ ವ್ಯಕ್ತಿ ಕೊಲೆಯಾಗಿದ್ದಾರೆ. ಸ್ಥಳಕ್ಕೆ ತುಂಗಾನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ: ಒಡವೆ ಹಾಕೊಂಡು, ಸ್ಕಾರ್ಪಿಯೋ ವಾಹನದಲ್ಲಿ ಬಂದು ಲಕ್ಷಾಂತರ ಮೌಲ್ಯದ ಸೀರೆ ಕದಿಯುತ್ತಿದ್ದ ಮತ್ತೊಂದು ಗ್ಯಾಂಗ್​ ಅರೆಸ್ಟ್​

ಬೈಕ್​ಗೆ ಡಿಕ್ಕಿ ಹೊಡೆದ ಕಾರು, ನಾಲ್ವರಿಗೆ ಗಾಯ

ಬೆಂಗಳೂರು: ಕಾರು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಮೇಲೆ ಬಿದ್ದು ಬೈಕ್​ನಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ಚಿಕ್ಕಜಾಲದಿಂದ ಏರ್ಪೋರ್ಟ್ ರಸ್ತೆ ಸಂಪರ್ಕಿಸುವ ರಸ್ತೆಯಲ್ಲಿ ನಡೆದಿದೆ. ಇಬ್ಬರು ಮಕ್ಕಳು ಸೇರಿ ದಂಪತಿಗೆ ಗಾಯವಾಗಿದೆ. ಅಪಘಾತದ ದೃಶ್ಯ ಮತ್ತೊಂದು ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಿನ್ನೆ (ಆ.26) ಸಂಜೆ ನಾಲ್ಕು ಘಂಟೆ ಸುಮಾರಿಗೆ ಘಟನೆ ನಡೆದಿದೆ.

ಇಬ್ಬರು ಮಕ್ಕಳು ಹಾಗೂ ದಂಪತಿ ಬೈಕ್​​ನಲ್ಲಿ ಹೊರಟಿದ್ದರು. ಬೈಕ್​ ಚಾಲಕ ರಸ್ತೆ ಮಧ್ಯದ ಟ್ರ್ಯಾಕ್ ನಿಂದ ಬಲಗಡೆಗೆ ತಿರುವು ತೆಗೆದುಕೊಂಡಾಗ, ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಕೂಡಲೇ ರಸ್ತೆ ಮೇಲೆ ಬಿದ್ದ ಮಕ್ಕಳನ್ನು ಇತರ ಸವಾರರು ರಕ್ಷಿಸಿದ್ದಾರೆ. ಘಟನೆಯಲ್ಲಿ ಮಹಿಳೆಗೆ ಗಂಭೀರ ಗಾಯವಾಗಿದೆ. ಅದೃಷ್ಟವಶಾತ್ ಮಕ್ಕಳು ಹಾಗೂ ಪೋಷಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಜಾಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​​ ಮಾಡಿ

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ