ಬೆಂಗಳೂರು: ಗಣೇಶ ಮೂರ್ತಿ ಕೂರಿಸುವ ವಿಚಾರಕ್ಕೆ ಗಲಾಟೆ; ಚಾಕು ಇರಿತ

ಬೆಂಗಳೂರಿನ ಧರ್ಮರಾಯಸ್ವಾಮಿ ದೇವಸ್ಥಾನದ ಬಳಿ ಗಣೇಶ ಮೂರ್ತಿ ಕೂರಿಸುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಅಜಿತ್​ ಎಂಬುವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಲಾಟೆ ನಡೆದಿದೆ.

ಬೆಂಗಳೂರು: ಗಣೇಶ ಮೂರ್ತಿ ಕೂರಿಸುವ ವಿಚಾರಕ್ಕೆ ಗಲಾಟೆ; ಚಾಕು ಇರಿತ
ಚಾಕು ಇರಿದ ಸ್ಥಳ (ಎಡಚಿತ್ರ) ಆರೋಪಿ ಸುಮನ್​ (ಬಲಚಿತ್ರ)
Edited By: ವಿವೇಕ ಬಿರಾದಾರ

Updated on: Aug 27, 2023 | 8:39 AM

ಬೆಂಗಳೂರು: ನಗರದ ಧರ್ಮರಾಯಸ್ವಾಮಿ (Dharmaswamy) ದೇವಸ್ಥಾನದ ಬಳಿ ಗಣೇಶ ಮೂರ್ತಿ (Ganesha Idol) ಕೂರಿಸುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಅಜಿತ್​ ಎಂಬುವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಹಲಸೂರು ಗೇಟ್ ಪೊಲೀಸ್ (Police) ಠಾಣಾ ವ್ಯಾಪ್ತಿಯಲ್ಲಿ ಗಾಲಾಟೆ ನಡೆದಿದ್ದು, ಆರೋಪಿ ಸುಮನ್ ಚಾಕುವಿನಿಂದ ಅಜಿತ್​ ಅವರ ​ಎದೆ, ಕುತ್ತಿಗೆ, ಬೆನ್ನಿಗೆ ಇರಿದಿದ್ದಾನೆ. ಹಲ್ಲೆಗೊಳಗಾದ ಅಜಿತ್​ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅರೋಪಿ ಸುಮನ್​ನನ್ನು ಬಂಧಿಸಿದ್ದಾರೆ.

 ವ್ಯಕ್ತಿ ಮೇಲೆ ಕಲ್ಲು ಎತ್ತು ಹಾಕಿ ಕೊಲೆ

ಶಿವಮೊಗ್ಗ: ವ್ಯಕ್ತಿ ಮೇಲೆ ಕಲ್ಲು ಎತ್ತು ಹಾಕಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ಟಿಪ್ಪು ನಗರದ ಏಳನೇ ತಿರುವಿನಲ್ಲಿ ನಡೆದಿದೆ. ಸುಮಾರು 57 ವರ್ಷದ ವ್ಯಕ್ತಿ ಕೊಲೆಯಾಗಿದ್ದಾರೆ. ಸ್ಥಳಕ್ಕೆ ತುಂಗಾನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ: ಒಡವೆ ಹಾಕೊಂಡು, ಸ್ಕಾರ್ಪಿಯೋ ವಾಹನದಲ್ಲಿ ಬಂದು ಲಕ್ಷಾಂತರ ಮೌಲ್ಯದ ಸೀರೆ ಕದಿಯುತ್ತಿದ್ದ ಮತ್ತೊಂದು ಗ್ಯಾಂಗ್​ ಅರೆಸ್ಟ್​

ಬೈಕ್​ಗೆ ಡಿಕ್ಕಿ ಹೊಡೆದ ಕಾರು, ನಾಲ್ವರಿಗೆ ಗಾಯ

ಬೆಂಗಳೂರು: ಕಾರು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಮೇಲೆ ಬಿದ್ದು ಬೈಕ್​ನಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ಚಿಕ್ಕಜಾಲದಿಂದ ಏರ್ಪೋರ್ಟ್ ರಸ್ತೆ ಸಂಪರ್ಕಿಸುವ ರಸ್ತೆಯಲ್ಲಿ ನಡೆದಿದೆ. ಇಬ್ಬರು ಮಕ್ಕಳು ಸೇರಿ ದಂಪತಿಗೆ ಗಾಯವಾಗಿದೆ. ಅಪಘಾತದ ದೃಶ್ಯ ಮತ್ತೊಂದು ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಿನ್ನೆ (ಆ.26) ಸಂಜೆ ನಾಲ್ಕು ಘಂಟೆ ಸುಮಾರಿಗೆ ಘಟನೆ ನಡೆದಿದೆ.

ಇಬ್ಬರು ಮಕ್ಕಳು ಹಾಗೂ ದಂಪತಿ ಬೈಕ್​​ನಲ್ಲಿ ಹೊರಟಿದ್ದರು. ಬೈಕ್​ ಚಾಲಕ ರಸ್ತೆ ಮಧ್ಯದ ಟ್ರ್ಯಾಕ್ ನಿಂದ ಬಲಗಡೆಗೆ ತಿರುವು ತೆಗೆದುಕೊಂಡಾಗ, ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಕೂಡಲೇ ರಸ್ತೆ ಮೇಲೆ ಬಿದ್ದ ಮಕ್ಕಳನ್ನು ಇತರ ಸವಾರರು ರಕ್ಷಿಸಿದ್ದಾರೆ. ಘಟನೆಯಲ್ಲಿ ಮಹಿಳೆಗೆ ಗಂಭೀರ ಗಾಯವಾಗಿದೆ. ಅದೃಷ್ಟವಶಾತ್ ಮಕ್ಕಳು ಹಾಗೂ ಪೋಷಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಜಾಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​​ ಮಾಡಿ

Loading...
Unable to load recommendations.
Follow Us