AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನಲ್ಲಿ ಟೊಮ್ಯಾಟೊಗಾಗಿ ಚಾಕು ಇರಿತ; ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ

ಜಿಲ್ಲೆಯ ಮಾನ್ವಿ ಪಟ್ಟಣದ ಮಾರ್ಕೆಟ್​ನಲ್ಲಿ ಟೊಮ್ಯಾಟೊಗಾಗಿ ಚಾಕು ಇರಿದ ಘಟನೆ ನಡೆದಿದೆ. ಇದೇ ಜುಲೈ 8 ರ ತಡರಾತ್ರಿ ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇನ್ನು ಚಾಕು ಇರಿತದ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್​ ಆಗಿದೆ.

ರಾಯಚೂರಿನಲ್ಲಿ ಟೊಮ್ಯಾಟೊಗಾಗಿ ಚಾಕು ಇರಿತ; ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ
ಚಾಕು ಇರಿತಕ್ಕೊಳಗಾದವ
Follow us
ಭೀಮೇಶ್​​ ಪೂಜಾರ್
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 12, 2023 | 1:59 PM

ರಾಯಚೂರು: ಜಿಲ್ಲೆಯ ಮಾನ್ವಿ(Manvi ) ಪಟ್ಟಣದ ಮಾರ್ಕೆಟ್​ನಲ್ಲಿ ಟೊಮ್ಯಾಟೊ(Tomato)ಗಾಗಿ ಚಾಕು ಇರಿದ ಘಟನೆ ನಡೆದಿದೆ. ಇದೇ ಜುಲೈ 8 ರ ತಡರಾತ್ರಿ ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಾನ್ವಿ ಪುರಸಭೆ ಮಳಿಗೆಯ ತರಕಾರಿ ಮಾರ್ಕೆಟ್​ನಲ್ಲಿ ರಫಿ ಎಂಬಾತ ಕಾವಲಿಗಾಗಿ ತಳ್ಳುವ ತರಕಾರಿ ಗಾಡಿಯಲ್ಲಿ ಮಲಗಿದ್ದ. ಈ ವೇಳೆ ರಫಿ ಜೊತೆ ಮಾತನಾಡುವ ನೆಪದಲ್ಲಿ ಅಪರಿಚಿತ ವ್ಯಕ್ತಿ ಬಂದಿದ್ದಾನೆ. ಸಡನ್​ ಆಗಿ ಕುತ್ತಿಗೆ ಭಾಗಕ್ಕೆ ಚಾಕು ಇರಿದು ಎಸ್ಕೇಪ್ ಆಗಿದ್ದಾನೆ.ಆರೋಪಿಯ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗಾಯಾಳು ರಫಿಗೆ ಮಾನ್ವಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಟೊಮ್ಯಾಟೊ ಕಳ್ಳತನಕ್ಕೆ ಯತ್ನಿಸಿರೋ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಕುರಿತು ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಪತ್ತೆಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ಟೊಮ್ಯಾಟೊ ಕಾವಲುಗಾರನಿಗೆ ಚಾಕು ಇರಿತ ಪ್ರಕರಣ; ಸ್ಪಷ್ಟನೆ ನೀಡಿದ ಮಾನ್ವಿ ಪೊಲೀಸ್​

ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಘಟನೆ ಕುರಿತು ‘ ರಫಿ ಎಂಬ ಯುವಕ ಭಾಷಾ ಅನ್ನೋರ ತರಕಾರಿ ಅಂಗಡಿಯಲ್ಲಿ ರಾತ್ರಿ ಕಾವಲು ಕೆಲಸ ಮಾಡ್ತಿದ್ದ. ಟೊಮ್ಯಾಟೊ ದರ ಹೆಚ್ಚಾಗಿರೊದರಿಂದ ಸ್ವಲ್ಪ ಕಟ್ಟುನಿಟ್ಟಾಗಿ ಕೆಲಸ ಮಾಡಲು ಸೂಚಿಸಲಾಗಿತ್ತು. ಈ ಹಿನ್ನೆಲೆ ಘಟನಾ ದಿನ ಆರೋಪಿ ಅಬ್ದುಲ್‌ ಬಂದು ಮಾತನಾಡಿಸಿದಾಗ ರಫಿ ಎದ್ದು ಕುಳಿತಿದ್ದ. ಟೊಮ್ಯಾಟೊ ಕಳ್ಳತನಕ್ಕೆ ಆರೋಪಿ ಹೋಗಿರಲಿಲ್ಲ. ಬದಲಾಗಿ ರಫಿ ಬಳಿ ಬಿಡಿ ಹೇಳಿದ್ದ ಆರೋಪಿ ಅಬ್ದುಲ್. ನಂತರ ಬೀಡಿ ನೀಡದೇ ಇದ್ದಾಗ ಮೊಬೈಲ್ ಕೇಳಿದ್ದನಂತೆ. ಕೊನೆಗೆ ತರಕಾರಿ ಕಾವಲುಗಾರ ರಫಿಗೆ ಚಾಕುವಿನಿಂದ ಇರಿದಿದ್ದಾಗಿ ಪೊಲೀಸರು ಸ್ಪಷ್ಟ ಪಡಿಸಿದ್ದಾರೆ.

ಟೊಮ್ಯಾಟೊಗೆ ಚಿನ್ನದ ಬೆಲೆ ಹಿನ್ನಲೆ ಹೆಚ್ಚಾದ ಕಳ್ಳರ ಕಾಟ

ಇದೀಗ ಟೊಮ್ಯಾಟೊಗೆ ಹೆಚ್ಚಿನ ಬೆಲೆ ಬಂದ ಹಿನ್ನಲೆ ಕಳ್ಳರ ಕಾಟ ಹೆಚ್ಚಾಗಿದೆ. ಚಿಂತಾಮಣಿ ತಾಲೂಕಿನ ವಿವಿಧೆಡೆ ಸೇರಿದಂತೆ ಅನೇಕ ಕಡೆಗಳಲ್ಲಿ ತೋಟಗಳಿಗೆ ನುಗ್ಗಿ ಟೊಮೆಟೊವನ್ನ ಕಳ್ಳತನ ಮಾಡಿಕೊಂಡು ಹೋಗುತ್ತಿದ್ದಾರೆ. ಇದರಿಂದ ರೈತರು ಕಂಗಾಲಾಗಿದ್ದು, ಕೈಗೆ ಬಂದ ತುತ್ತು ಕಳ್ಳರ ಪಾಲಾಗುವ ಆತಂಕ ಎದುರಾಗಿದೆ. ಈ ಕಾರಣಕ್ಕಾಗಿ ರೈತರು ಕಷ್ಟಪಟ್ಟು ಬೆಳೆದ ಟೊಮ್ಯಾಟೊ ತೋಟದ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಹಗಲು ರಾತ್ರಿ ಎನ್ನದೇ ಕಾಯುತ್ತಿದ್ದಾರೆ.

ಇದನ್ನೂ ಓದಿ:ಏರುತ್ತಲೇ ಇದೆ ಟೊಮ್ಯಾಟೊ ದರ; ಏಷ್ಯಾದ ಎರಡನೇ ಅತಿದೊಡ್ಡ ಮಾರುಕಟ್ಟೆಯಲ್ಲಿ ಟೊಮ್ಯೊಟೊ ದರ ಎಷ್ಟು ಗೊತ್ತಾ?

ಇನ್ನು ಈ ಕುರಿತು ಮಾತನಾಡಿದ ರೈತರೊಬ್ಬರು ‘14 ಕೆ.ಜಿ ಯ ಟೊಮ್ಯಾಟೊ ಬಾಕ್ಸ್ ಬೆಲೆ 2000 ರೂಪಾಯಿ ಆಗಿದೆ. ಟೊಮ್ಯಾಟೊಗೆ ಚಿನ್ನದ ಬೆಲೆ ಹಿನ್ನಲೆ ರಾತ್ರೊ ರಾತ್ರಿ ಕಳ್ಳರು ಟೊಮ್ಯಾಟೊ ಕೀಳುತ್ತಿದ್ದಾರೆ. ಟೊಮ್ಯಾಟೊ ಗೆ ಇಷ್ಟೊಂದು ಡಿಮ್ಯಾಂಡ್ ಯಾವತ್ತು ಬಂದಿಲ್ಲ. ಬಕ್ರಿದ್ ಹಬ್ಬದ ಸಮಯದಲ್ಲೂ 14 ಕೆ.ಜಿ ಟೊಮ್ಯಾಟೊ ಬಾಕ್ಸ್ 1600 ರೂಪಾಯಿ ಮಾರಾಟವಾಗಿತ್ತು. ಇದೀಗ ಕಳ್ಳರಿಂದ ತೋಟ ರಕ್ಷಣೆಯೇ ದೊಡ್ಡ ಸವಾಲು ಆಗಿದೆ. ಮಕ್ಕಳು ಸಮೇತ ರಾತ್ರಿಯಿಡಿ ತೋಟ ಕಾದಿದ್ದೇವೆ ಎಂದರು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:50 am, Wed, 12 July 23

ರಾಜ್ಯ ಸರ್ಕಾರಕ್ಕೆ ಸೋರಿಕೆ ಇಲ್ಲದೆ ಒಂದು ಪರೀಕ್ಷೆಯನ್ನೂ ನಡೆಸಲಾಗಲ್ಲ: ರವಿ
ರಾಜ್ಯ ಸರ್ಕಾರಕ್ಕೆ ಸೋರಿಕೆ ಇಲ್ಲದೆ ಒಂದು ಪರೀಕ್ಷೆಯನ್ನೂ ನಡೆಸಲಾಗಲ್ಲ: ರವಿ
ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ
ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
BBMP ಕಾರ್ಯವನ್ನು ಶ್ಲಾಘಿಷಿಸಿದ ಟಿಮ್ ಡೇವಿಡ್
BBMP ಕಾರ್ಯವನ್ನು ಶ್ಲಾಘಿಷಿಸಿದ ಟಿಮ್ ಡೇವಿಡ್
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಹೇಗಿರಲಿದೆ ಯುದ್ಧದ ಅಣಕು ಕಾರ್ಯಾಚರಣೆ? ಸಾರ್ವಜನಿಕರ ಜವಾಬ್ದಾರಿ ಏನು?
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ಡ್ರೋನ್ ಪ್ರತಾಪ್ ಸಹಾಯ ಮನೋಭಾವ ಎಂಥದ್ದು ನೋಡಿ; ಒಂದು ಚಪ್ಪಾಳೆ ಬರಲೇಬೇಕು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್