AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆಯಾಗಿದ್ದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಮೀನಾ ರುಂಡ ಪತ್ತೆ

ಗುರುವಾರ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಿದ್ದು, ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದ ವಿದ್ಯಾರ್ಥಿನಿ ಮೀನಾ ಉತ್ತಮ ಅಂಕ ಪಡೆದು ಪಾಸಾಗಿದ್ದಳು. ಈ ಖುಷಿಯಲ್ಲಿದ್ದ ಮೀನಾ ಅಂದು ಸಂಜೆಯೇ ನಿರ್ಜನ ಪ್ರದೇಶದಲ್ಲಿ ಭೀಕರವಾಗಿ ಕೊಲೆಯಾಗಿದ್ದಾಳೆ. ಆಕೆಯ ರುಂಡ ಮತ್ತು ಮುಂಡ ಬೇರ್ಪಡಿಸಿ ವಿಕೃತಿ ಮೆರೆಯಲಾಗಿತ್ತು.

ಕೊಲೆಯಾಗಿದ್ದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಮೀನಾ ರುಂಡ ಪತ್ತೆ
ವಿದ್ಯಾರ್ಥಿನಿ ಮೀನಾ, ಆರೋಪಿ ಪ್ರಕಾಶ್​
ಗೋಪಾಲ್​ ಸೋಮಯ್ಯ
| Edited By: ವಿವೇಕ ಬಿರಾದಾರ|

Updated on:May 11, 2024 | 1:24 PM

Share

ಕೊಡಗು, ಮೇ 10: ಹತ್ಯೆಯಾದ ಸೋಮವಾರಪೇಟೆ (Somwarpet) ತಾಲೂಕಿನ ಸೂರ್ಲಬ್ಬಿ ಗ್ರಾಮದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಮೀನಾಳ (SSLC Student Mina) ರುಂಡ, ಕೊಲೆ ನಡೆದ ಸ್ಥಳದಿಂದ 300 ಮೀ ದೂರದ ಪೊದೆಯಲ್ಲಿ ಪತ್ತೆಯಾಗಿದೆ. ಮೀನಾಳನ್ನು ಕೊಲೆ ಮಾಡಿದ ಆರೋಪಿ ಪ್ರಕಾಶನನ್ನು ಇಂದು (ಮೇ 11) ಬೆಳಿಗ್ಗೆ ಪೊಲೀಸರು ಬಂಧಿಸಿದ್ದಾರೆ. ಇದೀಗ ಆರೋಪಿಯನ್ನು ಸ್ಥಳ ಮಹಜರುಗೆ ಕರೆದುಕೊಂಡು ಹೋದಾಗ ರುಂಡ ಇದ್ದ ಸ್ಥಳ ತೋರಿಸಿದ್ದಾನೆ.

ಬಲವಂತವಾಗಿ ಮೀನಾಳನ್ನು ಕರೆದೊಯ್ದು ಕೊಲೆ ಮಾಡಿದ ಆರೋಪಿ

ಸೂರ್ಲಬ್ಬಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ಮೀನಾ, ಈ ಕುಗ್ರಾಮದಲ್ಲಿ ಈ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಏಕೈಕ ವಿದ್ಯಾರ್ಥಿನಿ. ಆದರೆ ಆಕೆಯ ದುರಂತ ನೋಡಿ. ಒಂದು ಕಡೆ ಮೀನಾ ಮೇ.09ರಂದು ಎಸ್​ಎಸ್​ಎಲ್​ಸಿ ಪಾಸ್​ ಆದ ಖುಷಿಯಲ್ಲಿದ್ದಳು. ಮತ್ತೊಂದು ಕಡೆ ಅವತ್ತೇ ಆಕೆಯ ಪ್ರಿಯಕರನ ಜೊತೆ ಎಂಗೇಜ್ಮೆಂಟ್ ಕೂಡ ಆಗಿತ್ತು. ಆದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮನೆಗೆ ಭೇಟಿ ನೀಡಿ 18 ವರ್ಷ ತುಂಬುವ ವರೆಗೆ ಮೀನಾಳಿಗೆ ಮದುವೆ ಮಾಡದಂತೆ ಪೋಷಕರ ಬಳಿ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ. ಈ ವಿಚಾರಣೆ ಜಗಳ ಶುರು ಮಾಡಿದ್ದ ಮೀನಾಳ ಪ್ರಿಯಕರ ಮಚ್ಚು ತಂದು ಮೀನಾಳ ಕತ್ತು ಕತ್ತರಿಸಿ ಹತ್ಯೆ ಮಾಡಿ ಪರಾರಿಯಾಗಿದ್ದ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮೃತ ಮೀನಾ ಮನೆಯಿಂದ ನಾಲ್ಕು ಕಿ.ಮೀ ದೂರದಲ್ಲಿರುವ ಶಾಲೆಗೆ ತನ್ನ ಮನೆಯಿಂದ ಗುಡ್ಡ ಗಾಡು ರಸ್ತೆಯಲ್ಲಿ ನಿತ್ಯ ನಡೆದೇ ಸಾಗುತ್ತಿದ್ದಳು. ಪಾಠದಲ್ಲಿ ಮಾತ್ರವಲ್ಲ ಆಟದಲ್ಲೂ ಬಹಳ ಚೂಟಿ ಇದ್ದಳು. ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಸ್ಪರ್ಧಿಸಿದ್ದಳು. ಒಬ್ಬಳೇ ಆದ್ರೂ ಶಾಲೆಗೆ ಹೋಗ್ತಾಳಲ್ಲಾ ಅಂತ ಊರವರೆಲ್ಲಾ ಈಕೆಯ ಬಗ್ಗೆ ಹೆಮ್ಮೆ ಪಡ್ತಾ ಇದ್ರು. ಆದರೆ ಹದಿಹರೆಯದ ವಯಸ್ಸಿನಲ್ಲಿ ಈಕೆಗೆ ಲವ್​ ಆಗಿದೆ. 35 ವರ್ಷದ ಓಂಕಾರಪ್ಪ ಅಲಿಯಾಸ್ ಪ್ರಕಾಶ್ ಎಂಬುವವನ ಜೊತೆ ಮೀನಾಗೆ ಪ್ರೀತಿ ಬೆಳೆದಿತ್ತು.

ಇದನ್ನೂ ಓದಿ: ಬೆಂಗಳೂರು ತೃತೀಯ ಲಿಂಗಿ ಕೊಲೆ ಪ್ರಕರಣ: ಜೊತೆಗಿದ್ದ ಮಹಿಳೆ ಕೊಲೆ ಮಾಡಲು ಕಾರಣ ಇಲ್ಲಿದೆ

ಮೀನಾಳ ಗ್ರಾಮದಿಂದ ಮೂರು ಕಿ.ಮೀಟರ್ ದೂರದ ಹಮ್ಮಿಯಾಲ ಗ್ರಾಮದ ಪ್ರಕಾಶ್ ಸಣ್ಣ ಪುಟ್ಟ ಕೆಲಸ ಮಾಡಿಕೊಂಡು ಅಷ್ಟೋ ಇಷ್ಟೋ ಸಂಪಾದನೆ ಮಾಡುತ್ತಿದ್ದ. ಅದು ಬಿಟ್ಟರೆ ಕಳೆದೊಂದು ವರ್ಷದಿಂದ ಮೀನಾಳ ಹಿಂದೆಯೇ ಸುತ್ತುತ್ತಿದ್ದ. ಇವರಿಬ್ಬರು ಪ್ರೀತಿಸ್ತಾ ಇದ್ದುದ್ದು ಇಡೀ ಊರಿಗೆ ಗೊತ್ತಿತ್ತು. ಇವರಿಬ್ಬರ ಆತ್ಮೀಯತೆ ಎಷ್ಟಿತ್ತೆಂದರೆ ಈತನೇ ತನ್ನ ಬೈಕಿನಲ್ಲಿ ಮೀನಾಳನ್ನ ಮನೆಯಿಂದ ಶಾಲೆಗೆ ಡ್ರಾಪ್ ಮಾಡುತ್ತಿದ್ದ. ಮೇ.09ರ ಎಸ್​ಎಸ್​ಎಲ್​ಸಿ ಫಲಿತಾಂಶದ ದಿನವೇ ಮೀನಾ ಹಾಗೂ ಪ್ರಕಾಶ್​​ಗೆ ನಿಶ್ಚಿತಾರ್ಥ ನೆರವೇರಿತ್ತು. ಬಂಧು ಮಿತ್ರರ ಎದುರು ಇಬ್ಬರು ಖುಷಿ ಖುಷಿಯಾಗಿಯೇ ಕೇಕ್​ ಕಟ್ ಮಾಡಿ ರಿಂಗ್ ಪಾಸ್ ಮಾಡಿ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದರು. ಆದರೆ ಅಪ್ರಾಪ್ತೆಗೆ ಎಂಗೇಜ್ಮೆಂಟ್​ ನಡೆಯುತ್ತಿದೆ ಎಂಬ ಮಾಹಿತಿಯನ್ನ ಯಾರೋ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ಭೇಟಿ ನೀಡಿದ ಇಲಾಖೆ ಅಧಿಕಾರಿಗಳು ಮೀನಾಳ ಪೋಷಕರಿಗೆ ಈಗಲೇ ಮದುವೆ ಮಾಡದಂತೆ ತಿಳಿ ಹೇಳಿದ್ದಾರೆ.

ಮೀನಾಳಿಗೆ 18 ವರ್ಷ ತುಂಬಿದ ಬಳಿಕವೇ ವಿವಾಹ ಮಾಡುವಂತೆ ಪೋಷಕರಿಂದ ಮುಚ್ಚಳಿಕೆ ಬರೆಸಿಕೊಂಡು ಬಂದಿದ್ದಾರೆ. ಇಷ್ಟೆಲ್ಲ ಆದ ಬಳಿಕ ಪ್ರಕಾಶ್​ ಮರ ಕಡಿಯುವ ಮಚ್ಚಿನೊಂದಿಗೆ ಮೀನಾಳ ಮನೆಗೆ ಬಂದಿದ್ದು ಮೀನಾ ಹಾಗೂ ಅವಳ ಪೋಷಕರ ಜೊತೆ ಜಗಳವಾಡಿದ್ದಾನೆ. 18 ವರ್ಷ ಆಗುವವರೆಗೆ ಮದುವೆ ಬೇಡ ಎಂದು ಪೋಷಕರು ಹೇಳಿದ್ದು ಕೋಪಗೊಂಡು ಜಗಳ ಜೋರಾಗಿದೆ. ಇದರಿಂದ ಕುಪಿತಗೊಂಡ ಪ್ರಕಾಶ್ ಮಚ್ಚಿನಿಂದ ಮೊದಲು ತಾಯಿ ಜಾನಕಿಯ ಕೈ ಕಡಿದಿದ್ದಾನೆ, ಜಾನಕಿ ರಕ್ತದ ಮಡುವಿನಲ್ಲಿ ಬಿದ್ದಿದ್ದಾರೆ. ತಡೆಯಲು ಬಂದ ತಂದೆ ಸುಬ್ರಮಣಿಗೆ ಜಾಡಿಸಿ ಒದ್ದ ರಭಸಕ್ಕೆ ಅವರೂ ಕುಸಿದು ಬಿದ್ದಿದ್ದಾರೆ. ಬಳಿಕ ಪ್ರಕಾಶ್, ಮೀನಾಳನ್ನ ಎಳೆದೊಯ್ದಿದ್ದಾನೆ. ಮನೆಯಿಂದ ಅಂದಾಜು 300 ಮೀಟರ್ ದೂರದವರೆಗೆ ಎಳೆದೊಯ್ದು ಮೀನಾಳ ಕುತ್ತಿಗೆಯನ್ನೇ ಕಡಿದು ರುಂಡ ಮುಂಡ ಬೇರ್ಪಡಿಸಿ ರುಂಡದೊಂದಿಗೆ ಪರಾರಿಯಾಗಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:17 pm, Sat, 11 May 24

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!