AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನಲ್ಲಿ ಫೈನಾನ್ಸ್ ಕಂಪನಿಗಳಿಗೆ ಬುರ್ಖ ತಂದಿಟ್ಟ ಸಂಕಷ್ಟ; ಯಾರದ್ದೋ ಹೆಸರಿನಲ್ಲಿ ಇನ್ಯಾರಿಗೋ ಸಾಲ‌

ಫೈನಾನ್ಸ್ ಕಂಪೆನಿಗಳಿಗೆ ಬುರ್ಖ ಧರಿಸಿದ ಮಹಿಳೆಯಿಂದ ವಂಂಚನೆ ಎಸಗಲಾಗಿದೆ. ಸರಿಯಾಗಿ ತಪಾಸಣೆ ನಡೆಸದಂತೆ ಯಾರದ್ದೋ ಹೆಸರಿನಲ್ಲಿ ಇನ್ನಾರಿಗೋ ಸಾಲ‌ನೀಡಿ ಕೊಡಗಿನ ಮೈಕ್ರೋಫೈನಾನ್ಸ್ ಕಂಪನಿಗಳು ಎಡವಟ್ಟು ಮಾಡಿಕೊಂಡಿವೆ.

ಕೊಡಗಿನಲ್ಲಿ ಫೈನಾನ್ಸ್ ಕಂಪನಿಗಳಿಗೆ ಬುರ್ಖ ತಂದಿಟ್ಟ ಸಂಕಷ್ಟ; ಯಾರದ್ದೋ ಹೆಸರಿನಲ್ಲಿ ಇನ್ಯಾರಿಗೋ ಸಾಲ‌
ಕೊಡಗಿನಲ್ಲಿ ಫೈನಾನ್ಸ್ ಕಂಪನಿಗಳಿಗೆ ಬುರ್ಖ ತಂದಿಟ್ಟ ಸಂಕಷ್ಟ
TV9 Web
| Edited By: Rakesh Nayak Manchi|

Updated on:Oct 15, 2022 | 1:49 PM

Share

ಕೊಡಗು: ಮೈಕ್ರೋಫೈನಾನ್ಸ್ ಕಂಪೆನಿಗಳು ಸಾಲ ನೀಡುವ ವಿಚಾರದಲ್ಲಿ ಮಾಡಿದ ತಪ್ಪಿನಿಂದಾಗಿ ವಂಚನೆಗೆ ಒಳಗಾಗಿದೆ. ಅಂದರೆ ಬುರ್ಖ ಧರಿಸಿದ ಮಹಿಳೆಯೊಬ್ಬಳು ನಕಲಿ ದಾಖಲೆ ನೀಡಿ ಸಾಲ ಪಡೆದಿದ್ದಾಳೆ. ಆದರೆ ದಾಖಲೆಯಲ್ಲಿರುವ ಫೋಟೋ ಮತ್ತು ಮಹಿಳೆಯ ಮುಖದ ವ್ಯತ್ಯಾಸವನ್ನು ಗುರುತಿಸದೆ ನೇರವಾಗಿ ಲಕ್ಷಾಂತರ ರೂಪಾಯಿ ಸಾಲ ನೀಡಿದ ಫೈನಾನ್ಸ್ ಕಂಪನಿಗಳು ಸಂಕಷ್ಟಕ್ಕೆ ಒಳಗಾಗಿವೆ. ಆಶಿಯಾ ಎಂಬಾಕೆ ಕೊಡಗಿನ ಕುಶಾಲನಗರ ಪಟ್ಟಣದಲ್ಲಿನ ಸಮಸ್ತ, ಬೆಲ್ ಸ್ಟಾರ್ ಮೈಕ್ರೋ ಫೈನಾನ್ಸ್ ಕಂಪೆನಿಗಳಿಗೆ ಆಗಮಿಸಿ ತನ್ನದೇ ಹೆಸರಿನ ಬೇರೆಯವರ ಆಧಾರ್ ಕಾರ್ಡ್ ನೀಡಿ ಲಕ್ಷಾಂತರ ಸಾಲ ಮಾಡಿದ್ದಾಳೆ. ಆದರೆ ಫೈನಾನ್ಸ್ ಕಂಪನಿಗಳ ಸಿಬ್ಬಂದಿ ಆಕೆಯ ಬುರ್ಖಾ ತೆಗೆದು ಮುಖ‌ ಪರಿಶೀಲಿಸದೇ ಸಾಲ ಮಂಜೂರು ಮಾಡಿದ್ದಾರೆ. ಪರಿಣಾಮ ಲಕ್ಷಾಂತರ ರೂಪಾಯಿಗಳನ್ನು ಫೈನಾನ್ಸ್ ಕಂಪನಿಗಳು ಕಳೆದುಕೊಂಡಿವೆ.

ವಂಚಕಿ ಆಶಿಯಾ ಇದೇ ರೀತಿ ಹಲವು ಫೈನಾನ್ಸ್ ಕಂಪೆನಿಗಳಿಗೆ ವಂಚಿಸಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಫೈನಾನ್ಸ್​ ಕಂಪನಿಗಳು ಮಾಡಿದ ತಪ್ಪಿನಿಂದಾಗಿ ವಂಚನೆಗೊಳಗಾದ ಆಧಾರ್ ಕಾರ್ಡ್ ಮಾಲೀಕರು ಪರದಾಡುವಂತಾಗಿದೆ. ತಮಗೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸುತ್ತಿದ್ದು, ನ್ಯಾಯ ಸಿಗದಿದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಂಚನೆಗೊಳಗಾದ ಮಡಿಕೇರಿ ನಿವಾಸಿ ಆಶಿಯಾ, ಮಿಶ್ರಿಯಾ ಬೆದರಿಕೆ ಹಾಕಿದ್ದಾರೆ.

ಜಾತ್ರೆಗೆ ಹೋದವನ ಮೇಲೆ ಹಲ್ಲೆ

ಬೆಂಗಳೂರು: ಜಾತ್ರೆಗೆ ಹೋಗಿದ್ದ ಯುವಕನೊಬ್ಬನ ಮೇಲೆ ಕ್ಷುಲಕ ಕಾರಣಕ್ಕೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ಪುಲಿಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಕ್ತಿವೇಲು ಎಂಬ ಯುವಕ ವಾರದ ಹಿಂದೆ ಕಮ್ಮನಹಳ್ಳಿ ಜಾತ್ರೆ ನೋಡಲು ಹೋಗಿದ್ದನು. ಈ ವೇಳೆ ಫ್ರೇಜರ್ ಟೌನ್​ನ ಥಾಮಸ್ ಬೇಕರಿ ಬಳಿ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದರು.

ಗಂಭೀರವಾಗಿ ಗಾಯಗೊಂಡಿದ್ದ ಶಕ್ತಿವೇಲುನನ್ನು ಕೂಡಲೇ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಇತ್ತ ಕೊಲೆ ಪ್ರಕರಣ ದಾಖಲಿಸಿಕೊಂಡ ಪುಲಿಕೇಶಿನಗರ ಪೊಲೀಸರು, ವಿಘ್ನೇಶ್ ಹಾಗೂ ಪುರುಷೋತ್ತಮ್ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರೋ ಮಾರ್ಷಲ್ ಎಂಬಾತನ ಬಂಧನಕ್ಕೆ ತನಿಖೆ ಮುಂದುವರಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:41 pm, Sat, 15 October 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ