AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಇ-ಕೆವೈಸಿಗೆ ಗ್ರಾಹಕರಿಂದ ಭಾರತ್ ಗ್ಯಾಸ್ ಏಜೆನ್ಸಿಯಿಂದ ಲಂಚ ವಸೂಲಿ; ವಿಡಿಯೋ ವೈರಲ್

ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಭಾರತ್ ಗ್ಯಾಸ್ ಏಜೆನ್ಸಿಯು ಇ-ಕೆವೈಸಿ ಮಾಡಿಸಲು ಬರುವ ಗ್ರಾಹಕರಿಂದ ಲಂಚ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಉಚಿತವಾಗಿ ಇ-ಕೆವೈಸಿ ಮಾಡುವ ನಿರ್ದೇಶನವಿದ್ದರೂ ಹಣ ವಸೂಲಿ ಮಾಡಲಾಗುತ್ತಿದ್ದು, ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ಕೋಲಾರ: ಇ-ಕೆವೈಸಿಗೆ ಗ್ರಾಹಕರಿಂದ ಭಾರತ್ ಗ್ಯಾಸ್ ಏಜೆನ್ಸಿಯಿಂದ ಲಂಚ ವಸೂಲಿ; ವಿಡಿಯೋ ವೈರಲ್
ಗ್ರಾಹಕರಿಂದ ಹಣ ವಸೂಲಿ ಮಾಡುತ್ತಿರುವ ಭಾರತ್ ಗ್ಯಾಸ್ ಎಜೆನ್ಸಿ (ಎಡಚಿತ್ರ) ಮತ್ತು ಕ್ಯಾಸಂಬಳ್ಳಿ ಗ್ರಾಮ‌ ಪಂಚಾಯಿತಿಯಲ್ಲಿ ಲಂಚ ಪಡೆಯುತ್ತಿರುವ ಬಿಲ್ ಕಲೆಕ್ಟರ್ (ಬಲಚಿತ್ರ)
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: Rakesh Nayak Manchi|

Updated on: Jan 12, 2024 | 9:31 AM

Share

ಕೋಲಾರ, ಜ.12: ಉಚಿತವಾಗಿ ಇ-ಕೆವೈಸಿ ಮಾಡುವ ನಿರ್ದೇಶನವಿದ್ದರೂ ಅಡುಗೆ ಅನಿಲ ಗ್ರಾಹಕರಿಂದ ಭಾರತ್ ಗ್ಯಾಸ್ (Bharat Gas) ಏಜನ್ಸಿ ಲಂಚ ವಸೂಲಿ ಮಾಡುತ್ತಿರುವ ಆರೋಪ ಕೋಲಾರ (Kolar) ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಕೇಳಿಬಂದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗುತ್ತಿದೆ.

ಪಟ್ಟಣದಲ್ಲಿ ಸಾವಿರಾರು ಗ್ರಾಹಕರಿದ್ದು, ಪ್ರತಿ ಗ್ರಾಹಕರಿಂದ 20 ರೂಪಾಯಿ ವಸೂಲಿ ಮಾಡಲಾಗುತ್ತಿದೆ. ಸದ್ಯ ಹಣ ವಸೂಲಿ ವಿಡಿಯೋ ವೈರಲ್ ಆಗುತ್ತಿದ್ದು, ಸಂಬಂಧಪಟ್ಟ ಆಹಾರ ಇಲಾಖೆ ಅಧಿಕಾರಿಗಳು ಎಜೆನ್ಸಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ತುಮಕೂರು: ಹೆರಿಗೆ ಮಾಡಿಸಲು ಲಂಚಕ್ಕೆ ಬೇಡಿಕೆ‌ಯಿಟ್ಟಿದ್ದ ಸರ್ಕಾರಿ ವೈದ್ಯ ಲೋಕಾಯುಕ್ತ ಬಲೆಗೆ

ಗ್ರಾಮ ಪಂಚಾಯ್ತಿಯಲ್ಲಿ ಲಂಚಾವತಾ: ವಿಡಿಯೋ ವೈರಲ್,

ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕು ಕ್ಯಾಸಂಬಳ್ಳಿ ಗ್ರಾಮ‌ ಪಂಚಾಯಿತಿಯಲ್ಲಿ ಪಿಡಿಓ‌ ಮತ್ತು ಬಿಲ್ ಕಲೆಕ್ಟರ್ ಲಂಚ ಪಡೆಯುತ್ತಿರುವ ವಿಡಿಯೋ ವೈರಲ್ ಆಗಿದೆ. ಇ-ಖಾತೆಯ ಮರು ಪ್ರಿಂಟ್ ನೀಡಲು ಪಿಡಿಓ ರಶ್ಮಿ ಹಾಗೂ ಬಿಲ್ ಕಲೆಕ್ಟರ್ ಸುಬ್ರಮಣಿ ಅವರು 50 ರೂಪಾಯಿ ಸರ್ಕಾರಿ ಶುಲ್ಕದ ಬದಲಾಗಿ ಮೂರು ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ.

ಪಿಡಿಓ‌ ರಶ್ಮಿ ಅವರ ಸೂಚನೆ ಹಿನ್ನೆಲೆ ಲಂಚಕ್ಕೆ ಬೇಡಿಕೆ ಇಡಲಾಗಿದೆ. ನಾಗಲೇಪಲ್ಲಿ ಗ್ರಾಮದ ಅನೂಪ್ ಎಂಬುವರಿಂದ ಲಂಚ ಸ್ವೀಕರಿಸಲಾಗಿದೆ. ಪಿಡಿಓ‌ ರಶ್ಮಿ ಹಣ ಪಡೆಯುವಂತೆ ತಿಳಿಸಿದ ಹಿನ್ನೆಲೆ ಹಣ ಪಡೆದಿರುವುದಾಗಿ ಹೇಳಿದ‌‌ ಆಡಿಯೋ‌ ಕೂಡ ವೈರಲ್ ಆಗಿದೆ. ಅಧಿಕಾರಿಗಳ ‌ಭ್ರಷ್ಟಾಚಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ