AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಇ-ಕೆವೈಸಿಗೆ ಗ್ರಾಹಕರಿಂದ ಭಾರತ್ ಗ್ಯಾಸ್ ಏಜೆನ್ಸಿಯಿಂದ ಲಂಚ ವಸೂಲಿ; ವಿಡಿಯೋ ವೈರಲ್

ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಭಾರತ್ ಗ್ಯಾಸ್ ಏಜೆನ್ಸಿಯು ಇ-ಕೆವೈಸಿ ಮಾಡಿಸಲು ಬರುವ ಗ್ರಾಹಕರಿಂದ ಲಂಚ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಉಚಿತವಾಗಿ ಇ-ಕೆವೈಸಿ ಮಾಡುವ ನಿರ್ದೇಶನವಿದ್ದರೂ ಹಣ ವಸೂಲಿ ಮಾಡಲಾಗುತ್ತಿದ್ದು, ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ಕೋಲಾರ: ಇ-ಕೆವೈಸಿಗೆ ಗ್ರಾಹಕರಿಂದ ಭಾರತ್ ಗ್ಯಾಸ್ ಏಜೆನ್ಸಿಯಿಂದ ಲಂಚ ವಸೂಲಿ; ವಿಡಿಯೋ ವೈರಲ್
ಗ್ರಾಹಕರಿಂದ ಹಣ ವಸೂಲಿ ಮಾಡುತ್ತಿರುವ ಭಾರತ್ ಗ್ಯಾಸ್ ಎಜೆನ್ಸಿ (ಎಡಚಿತ್ರ) ಮತ್ತು ಕ್ಯಾಸಂಬಳ್ಳಿ ಗ್ರಾಮ‌ ಪಂಚಾಯಿತಿಯಲ್ಲಿ ಲಂಚ ಪಡೆಯುತ್ತಿರುವ ಬಿಲ್ ಕಲೆಕ್ಟರ್ (ಬಲಚಿತ್ರ)
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: Rakesh Nayak Manchi|

Updated on: Jan 12, 2024 | 9:31 AM

Share

ಕೋಲಾರ, ಜ.12: ಉಚಿತವಾಗಿ ಇ-ಕೆವೈಸಿ ಮಾಡುವ ನಿರ್ದೇಶನವಿದ್ದರೂ ಅಡುಗೆ ಅನಿಲ ಗ್ರಾಹಕರಿಂದ ಭಾರತ್ ಗ್ಯಾಸ್ (Bharat Gas) ಏಜನ್ಸಿ ಲಂಚ ವಸೂಲಿ ಮಾಡುತ್ತಿರುವ ಆರೋಪ ಕೋಲಾರ (Kolar) ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಕೇಳಿಬಂದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗುತ್ತಿದೆ.

ಪಟ್ಟಣದಲ್ಲಿ ಸಾವಿರಾರು ಗ್ರಾಹಕರಿದ್ದು, ಪ್ರತಿ ಗ್ರಾಹಕರಿಂದ 20 ರೂಪಾಯಿ ವಸೂಲಿ ಮಾಡಲಾಗುತ್ತಿದೆ. ಸದ್ಯ ಹಣ ವಸೂಲಿ ವಿಡಿಯೋ ವೈರಲ್ ಆಗುತ್ತಿದ್ದು, ಸಂಬಂಧಪಟ್ಟ ಆಹಾರ ಇಲಾಖೆ ಅಧಿಕಾರಿಗಳು ಎಜೆನ್ಸಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ತುಮಕೂರು: ಹೆರಿಗೆ ಮಾಡಿಸಲು ಲಂಚಕ್ಕೆ ಬೇಡಿಕೆ‌ಯಿಟ್ಟಿದ್ದ ಸರ್ಕಾರಿ ವೈದ್ಯ ಲೋಕಾಯುಕ್ತ ಬಲೆಗೆ

ಗ್ರಾಮ ಪಂಚಾಯ್ತಿಯಲ್ಲಿ ಲಂಚಾವತಾ: ವಿಡಿಯೋ ವೈರಲ್,

ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕು ಕ್ಯಾಸಂಬಳ್ಳಿ ಗ್ರಾಮ‌ ಪಂಚಾಯಿತಿಯಲ್ಲಿ ಪಿಡಿಓ‌ ಮತ್ತು ಬಿಲ್ ಕಲೆಕ್ಟರ್ ಲಂಚ ಪಡೆಯುತ್ತಿರುವ ವಿಡಿಯೋ ವೈರಲ್ ಆಗಿದೆ. ಇ-ಖಾತೆಯ ಮರು ಪ್ರಿಂಟ್ ನೀಡಲು ಪಿಡಿಓ ರಶ್ಮಿ ಹಾಗೂ ಬಿಲ್ ಕಲೆಕ್ಟರ್ ಸುಬ್ರಮಣಿ ಅವರು 50 ರೂಪಾಯಿ ಸರ್ಕಾರಿ ಶುಲ್ಕದ ಬದಲಾಗಿ ಮೂರು ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ.

ಪಿಡಿಓ‌ ರಶ್ಮಿ ಅವರ ಸೂಚನೆ ಹಿನ್ನೆಲೆ ಲಂಚಕ್ಕೆ ಬೇಡಿಕೆ ಇಡಲಾಗಿದೆ. ನಾಗಲೇಪಲ್ಲಿ ಗ್ರಾಮದ ಅನೂಪ್ ಎಂಬುವರಿಂದ ಲಂಚ ಸ್ವೀಕರಿಸಲಾಗಿದೆ. ಪಿಡಿಓ‌ ರಶ್ಮಿ ಹಣ ಪಡೆಯುವಂತೆ ತಿಳಿಸಿದ ಹಿನ್ನೆಲೆ ಹಣ ಪಡೆದಿರುವುದಾಗಿ ಹೇಳಿದ‌‌ ಆಡಿಯೋ‌ ಕೂಡ ವೈರಲ್ ಆಗಿದೆ. ಅಧಿಕಾರಿಗಳ ‌ಭ್ರಷ್ಟಾಚಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ