AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗೆ 30 ವರ್ಷ ಜೈಲುಶಿಕ್ಷೆ

ಕೋಲಾರದ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 30 ವರ್ಷ ಜೈಲುಶಿಕ್ಷೆ ವಿಧಿಸಲಾಗಿದೆ.

ಕೋಲಾರದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗೆ 30 ವರ್ಷ ಜೈಲುಶಿಕ್ಷೆ
ಕೋಲಾರದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 30 ವರ್ಷ ಜೈಲುಶಿಕ್ಷೆ
Rakesh Nayak Manchi
Rakesh Nayak Manchi|

Updated on:Jun 03, 2023 | 9:40 PM

Share

ಕೋಲಾರ: ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ (Rape Case) ಅಪರಾಧಿಗೆ 30 ವರ್ಷ ಜೈಲುಶಿಕ್ಷೆ ವಿಧಿಸಲಾಗಿದೆ. ಅಪರಾಧಿ ಮುರುಗೇಶ್​ಗೆ 30 ವರ್ಷ ಜೈಲುಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ನ್ಯಾಯಾಧೀಶರಾದ ದೇವೆಮಾನೆ ಅವರು ಆದೇಶಿಸಿದ್ದಾರೆ.

2022 ರ ಅಕ್ಟೋಬರ್ 9ರಂದು ಎಂಟು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮುರುಗೇಶ್ ಅತ್ಯಾಚಾರವೆಸಗಿದ್ದ. ಪ್ರಕರಣ ಸಂಬಂಧ ಮುಳಬಾಗಲು ಗ್ರಾಮಾಂತರ ಠಾಣಾ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ‌ ದಾಖಲಿಸಿಕೊಂಡಿದ್ದರು. ಸದ್ಯ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ದೇವೆಮಾನೆ ಅವರು ಅಪರಾಧಿಗೆ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ಸಂತ್ರಸ್ತೆಯ ಕುಜ ದೋಷ ಪರಿಶೀಲಿಸಲು ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶಕ್ಕೆ ಸುಪ್ರೀಂ ತಡೆ

ಇತ್ತೀಚೆಗಷ್ಟೇ, ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿ ತಂದೆಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ದಾವಣಗೆರೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಎಫ್​ಟಿಎಸ್​ಪಿ (ಪೋಕ್ಸೋ ಕೋರ್ಟ್​) ತೀರ್ಪು ನೀಡಿತ್ತು. ಈ ಅಪರಾಧಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ತಗಡಿನ ಶೀಟ್ ಮನೆಯಲ್ಲಿ ಮಗಳ ಮೇಲೆ ನಿರಂತರ ಅತ್ಯಾಚಾರ ನಡೆಸುತ್ತಿದ್ದ. ಬಟ್ಟೆ ಹಾಗೂ ತಿಂಡಿ ಕೊಡುತ್ತಾ ಮಗಳ‌ ಮೇಲೆ ಅತ್ಯಾಚಾರ ಮಾಡುತ್ತಿದ್ದ. ವಿಚಾರ ತಿಳಿದ ನಂತರ ಹರಿಹರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯ ಮೂರ್ತಿ ಶ್ರೀಪಾದ ಎನ್, ಆರೋಪಿ ತಂದೆಗೆ 20 ವರ್ಷ ಜೈಲು ಶಿಕ್ಷೆ, 12 ಸಾವಿರ ದಂಡ ಹಾಗೂ ಸಂತ್ರಸ್ತೆಗೆ ಸರ್ಕಾರದಿಂದ ಐದು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ತೀರ್ಪು ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:37 pm, Sat, 3 June 23

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!